ಐಎಂಎ ಹಗರಣಕ್ಕೂ ನನಗೂ ಏನೂ ಸಂಬಂಧವಿಲ್ಲ : HDK ಸ್ಪಷ್ಟನೆ
Team Udayavani, Feb 21, 2021, 9:55 PM IST
ರಾಮನಗರ: ಐಎಂಎ ಹಗರಣಕ್ಕೂ ನನಗೂ ಏನೂ ಸಂಬಂಧವಿಲ್ಲ. ನನ್ನ ಅವಧಿಯಲ್ಲೇ ತನಿಖೆಗೆ ಆದೇಶಿಸಿ, ಕಠಿಣ ಕ್ರಮ ತೆಗೆದುಕೊಳ್ಳಲು ಹೇಳಿದ ಮೇಲೆ ನನ್ನ ಪಾತ್ರವೇನಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಐಎಂಎ (ಐ ಮಾನಿಟರಿ ಅಡೈಸರಿ) ಮಾಲೀಕ ಮನ್ಸೂರ್ ಅಲಿಖಾನ್ ಕೊಟ್ಟಿರುವ ಹೇಳಿಕೆಯೊಂದರಲ್ಲಿ ರೋಷನ್ ಬೇಗ್ ಮೂಲಕ ಕುಮಾರಸ್ವಾಮಿಗೆ ಐದು ಕೋಟಿ ರೂ. ಸಲ್ಲಿಕೆಯಾಗಿದೆ ಎಂಬ ದೂರುಗಳು ಕೇಳಿ ಬರುತ್ತಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನನಗೂ ಹಗರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಧ್ಯಮವೊಂದರಲ್ಲಿ ಸುದ್ದಿ ನೋಡಿದೆ. ಕುಮಾರಸ್ವಾಮಿ ಹೆಸರಿನಲ್ಲಿ ಕಲೆಕ್ಷನ್ ಆಗಿದೆ. ಆದರೆ, ಆ ಹಣ ಅವರಿಗೆ ತಲುಪಿಲ್ಲ ಎಂದು ಹೇಳಲಾಗಿದೆ. ನನಗೂ, ಅದಕ್ಕೂ ಸಂಬಂಧ ಏನು? ಅದ್ಯಾರು ಕೊಟ್ಟರು, ಅದ್ಯಾರು ತೆಗೆದುಕೊಂಡರು? ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ನಾನು ಜನಸಾಮಾನ್ಯರಿಗೆ ದ್ರೋಹ ಮಾಡುವ ಅಥವಾ ಜನರ ಹಣ ಲೂಟಿ ಮಾಡುವವರಿಗೆ ರಕ್ಷಣೆ ಕೊಟ್ಟವನಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ದೀಪಿಕಾ, ಅಕ್ಷಯ್ಗೆ ಒಲಿದ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!