ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ


Team Udayavani, Sep 27, 2022, 6:44 PM IST

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು,ರಾಜ್ಯ ಸರಕಾರದ ಮೇಲೆ ಅನೇಕ ಆರೋಪಗಳಿವೆ. ನಾನು ಸ್ವತಃ ಬಿಎಂಎಸ್ ಶಿಕ್ಷಣ ಟ್ರಸ್ಟ್ ನಲ್ಲಿ ನಡೆದಿರುವ ಅಕ್ರಮ ಬಗ್ಗೆ ಸದನದಲ್ಲಿಯೇ ದಾಖಲೆಗಳ ಸಮೇತ ಮಾಹಿತಿ ನೀಡಿದ್ದೆ. ಇದಲ್ಲದೆ, ಅನೇಕ ಹಗರಣ, ಅಕ್ರಮಗಳ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಒಂದು ವೇಳೆ ಪಿಎಫ್ಐ ಮೇಲೆ ನಡೆದಿರುವ ದಾಳಿ ಕುರಿತು ನೈಜ ಮಾಹಿತಿ ಕೊಡದಿದ್ದರೆ, ಆರೋಪ ಮತ್ತು ಹಗರಣಗಳ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಈ ದಾಳಿ ನಡೆಸಲಾಗಿದೆ ಎಂದು ಭಾವಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಎರಡು ದಿನಗಳಿಂದ ಕರ್ನಾಟಕವೂ ಸೇರಿ ರಾಷ್ಟ್ರಮಟ್ಟದಲ್ಲಿ ಪಿಎಫ್ಐ ಮೇಲೆ ಎನ್‌ ಐಎ ನಿಂದ ದಾಳಿ ಆಗಿತ್ತು. ಆ ದಾಳಿ ಸಮಯದಲ್ಲಿ ಪಿಎಫ್ಐ ಸಂಘಟನೆಗಳ ವ್ಯಕ್ತಿಗಳ ಬಂಧನವೂ ಆಗಿತ್ತು. ಮತ್ತೆ ಕಳೆದ ರಾತ್ರಿ ರಾಜ್ಯದ ನಾನಾ ಭಾಗದಲ್ಲಿ ಮಧ್ಯರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದರು ಕುಮಾರಸ್ವಾಮಿ ಅವರು.

ರಾಜ್ಯ ಪೊಲೀಸರು ನಡೆಸಿದ ದಾಳಿಯಲ್ಲಿ ಸಂಘಟನೆಯ ಕಾರ್ಯಕರ್ತರು, ಜಿಲ್ಲಾ ಅಧ್ಯಕ್ಷರ‌ ಬಂಧನವಾಗಿದೆ. ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ಎನ್ನುವುದು ಸರಕಾರದ ಆದೇಶವೋ ಅಥವಾ ಪೊಲೀಸರ ಮಾಹಿತಿ ಆಧಾರದ ದಾಳಿಯ ಆಗಿದೆಯೋ ಗೊತ್ತಿಲ್ಲ. ಆದರೆ, ಕಾರ್ಯಾಚರಣೆ ಬಗ್ಗೆ ನಾಡಿನ ಜನರ ಮುಂದೆ ನಿಜವಾದ ವಾಸ್ತವವಾದ ಅಂಶ ಸರಕಾರ ಇಡಬೇಕು ಎಂದು ಅವರು ಆಗ್ರಹಪಡಿಸಿದರು.

ಇದನ್ನೂ ಓದಿ: ಪುಳಕಿತ್ ರೆಸಾರ್ಟ್ ವೇಶ್ಯಾವಾಟಿಕೆ ಮತ್ತು ಡ್ರಗ್ಸ್ ದಂಧೆಯ ಅಡ್ಡೆಯಾಗಿತ್ತು; ಮಾಜಿ ಉದ್ಯೋಗಿ

ಏಕಾಏಕಿ ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಯಾವುದೇ ಸಮಾಜದ ಮೇಲೆ ಅತಂಕ, ಭಯ ಸೃಷ್ಟಿ ಆಗಬಾರದು. ಇತ್ತೀಚೆಗೆ ಅನೇಕ ಸಂಘಟನೆಗಳು ತಮ್ಮ ಅಜೆಂಡಾ ಪೂರೈಸಲು ಕೆಲಸ ಮಾಡುತ್ತಿವೆ. ಅವುಗಳಿಗೆ ಅರ್ಥಿಕ ಶಕ್ತಿ ಹೇಗೆ ಬರ್ತಿದೆ? ಕೆಲ ಘಟನೆಗಳ ಹಿಂದೆ ಯಾವ ಸಂಘಟನೆಗಳಿವೆ ಎನ್ನುವುದನ್ನು ತನಿಖೆಯಿಂದ ಹೊರಬರಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಳೆದ ರಾತ್ರಿ ಏಕಾಏಕಿ ದಾಳಿ ಆಗಿರೋದು‌ ಸಣ್ಣ ಪುಟ್ಟ ಕಾರ್ಯಕರ್ತರಿಗೆ ಆತಂಕ ಉಂಟು ಮಾಡಿದೆ ಎನ್ನುವುದು ನಿಜ. ಈ ದಾಳಿಯ ವೇಳೆ ಏನು ಸಿಕ್ಕಿದೆ. ಯಾವ ದಾಖಲೆ ಇದೆ  ಎಂಬುದನ್ನು ಜನರ ಮುಂದೆ ಇಡಬೇಕು. ದಾಳಿಯ ಬಗ್ಗೆ ಸತ್ಯ ಹೇಳದೇ ಹೋದರೆ ಕಾಂಗ್ರೆಸ್ ನ ಪೇ‌ ಸಿಎಂ ಅಭಿಯಾನ ಡೈವರ್ಟ್ ಮಾಡೋಕೆ ಸರಕಾರ ಹೀಗೆ ಮಾಡಿದೆ ಎಂಬ  ಅನುಮಾನ ಜನರಿಗೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದರು.

ನಿಜವಾಗಿಯೂ ಸಮಾಜಘಾತುಕ ಶಕ್ತಿ ಬಗ್ಗೆ ಮಾಹಿತಿ ಇದ್ದರೆ  ಜನರ ಮುಂದೆ ಇಡಬೇಕು. ನೆಪಗಳನ್ನು ಹೇಳಿ ಸರಕಾರ ನುಣುಚಿಕೊಳ್ಳಬಾರದು. ವಾಸ್ತವ ಅಂಶಗಳನ್ನು ಜನರ ಮುಂದೆ ಸರಕಾರ ಇಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಇದನ್ನೂ ಓದಿ: ಆಲಿಯಾ ಪಕ್ಕದಲ್ಲಿ ಮಲಗುವಾಗ ನಿಜಕ್ಕೂ ಕಷ್ಟವಾಗುತ್ತದೆ..! ತನ್ನ‌ ಕಷ್ಟ ಹೇಳಿದ ಪತಿ ರಣ್ಬೀರ್

ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಯಾರು ಯಾರನ್ನು  ಬಂಧನ ಮಾಡಿದ್ದಾರೆ. ಅವರ ಸಮಾಜಘಾತುಕ ಕೆಲಸ ಏನು? ಎಂಬುದನ್ನು ಅಂತ ಸರಕಾರ ಜನರ ಮುಂದೆ ಇಡದೇ ಹೋದರೆ, ಸರಕಾರವೇ ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಮಾಜಿ ಶಾಸಕರಾದ ಹೆಚ್.ಎಂ.ರಮೇಶ್ ಗೌಡ, ಶಾರದಾ ಪೂರ್ಯ ನಾಯಕ್, ತಿಮ್ಮರಾಯಪ್ಪ ಹಾಗೂ ಹಿರಿಯ ಮುಖಂಡ ಹರಿಹರದ ಶಿವಶಂಕರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.