ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ: ಅಶ್ವತ್ಥನಾರಾಯಣ ವಿರುದ್ದ ಹೆಚ್ ಡಿಕೆ

ಡಿಕೆ ಬ್ರದರುಗಳ ಮುಂದೆ ತೋಳೆರಿಸಿದಂತೆ ನನ್ನ ಹತ್ತಿರ ನಡೆಯಲ್ಲ

Team Udayavani, Aug 10, 2022, 4:49 PM IST

HDK

ಬೆಂಗಳೂರು: ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರ ವಿರುದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತೆ ಕಿಡಿ ಕಾರಿದ್ದಾರೆ.

ಈ ಬಗ್ಗೆ ಮತ್ತೆ ಸರಣಿ ಟ್ವೀಟ್ ಮಾಡಿರುವ ಹೆಚ್ ಡಿಕೆ ,ಅಶ್ವತ್ಥನಾರಾಯಣ ಹಲ್ಲು ಹಿಡಿದು ಮಾತನಾಡಿದರೆ ಉತ್ತಮ. ಡಿಕೆ ಬ್ರದರುಗಳ ಮುಂದೆ ತೋಳೆರಿಸಿದಂತೆ ನನ್ನ ಹತ್ತಿರ ನಡೆಯಲ್ಲ. ನನ್ನ ಶಕ್ತಿ ಏನೆಂಬುದು ನಿಮಗೆ, ನಿಮ್ಮ ಪಕ್ಷಕ್ಕೆ ಚೆನ್ನಾಗಿ ಗೊತ್ತು. ಈಗಲೂ ಸವಾಲು ಹಾಕುತ್ತಿದ್ದೇನೆ. ಕಲಾಪ ಕರೆದು ನೋಡಿ, ನಿಮ್ಮದೆಲ್ಲ ಬಿಚ್ಚಿಡುತ್ತೇನೆ. ಅನುಮಾನವೇ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

ಯಾರು? ಎಲ್ಲಿ? ಹೇಗೆ? ಫೈಲ್ಯೂರ್ ಆಗಿದ್ದಾರೆ ಎನ್ನುವುದು ನನಗೂ ಗೊತ್ತು. ಕಳೆದ 3 ವರ್ಷದಲ್ಲಿ ಗಾಳಿಯಲ್ಲಿ ಗುಂಡು ಹೊಡೆಯುತ್ತಾ ಓತಲಾ ಹೊಡೆದವರು ಯಾರು? ಮುಕ್ಕಿಮುಕ್ಕಿ ಲೂಟಿ ಹೊಡೆದವರು ಯಾರು? ಎನ್ನುವುದು ನನಗಿಂತ ನಿಮಗೆ ಚೆನ್ನಾಗಿ ಗೊತ್ತಿರಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಾನು ಫೈವ್ ಸ್ಟಾರ್ ಹೊಟೇಲಿನಲ್ಲಿ ಇದ್ದೆ, ಆದನ್ನು ನಾನೇ ಹೇಳಿದ್ದೇನೆ. ಇದೇನು ಹೊಸ ವಿಷಯ ಅಲ್ಲ. ನಿಮ್ಮ ಪಕ್ಷದ ಅಮಿತ್ ಶಾ, ಜೆ.ಪಿ.ನಡ್ಡಾ, ಅರುಣ್ ಸಿಂಗ್ ಎಲ್ಲರೂ ಬೆಂಗಳೂರಿಗೆ ಬಂದಾಗ ಅದೇ ಫೈವ್ ಸ್ಟಾರ್ ಹೊಟೇಲಿನಲ್ಲಿಯೇ ಇದ್ದರಲ್ಲವೆ? ಅವರು ಅಲ್ಲಿದ್ದಾಗ ನಿಮ್ಮ ಕಣ್ಣಿಗೆ ಪೊರೆ ಬಂದಿತ್ತಾ? ಎಂದು ಟೀಕಿಸಿದ್ದಾರೆ.

ಮೊನ್ನೆಯಷ್ಟೆ ಬಂದು ಹೋದ ಅಮಿತ್ ಶಾ ಅವರು ಯಾವ ಹೋಟೆಲ್ ನಲ್ಲಿ ಬಿಡಾರ ಹೂಡಿದ್ದರು? ನಿಮ್ಮ ನಾಯಕರೆಲ್ಲ ಬೆಂಗಳೂರಿಗೆ ಬಂದಾಗ ಕೃಷ್ಣಾ, ಅನುಗ್ರಹ ಅಥವಾ ಕಾವೇರಿ ಹಿಂದೆ ಗುಡಿಸಿಲಿನಲ್ಲಿ ಮಲಗುತ್ತಾರಾ? ಹೇಳಿಯಪ್ಪ ಅಶ್ವತ್ಥನಾರಾಯಣ? ನಕಲಿ ಸರ್ಟಿಫಿಕೇಟ್ ಡೀಲರ್ ಯಾರು? ಬ್ಲ್ಯಾಕ್ ಮೇಲರ್ ಯಾರು? ಬಿಲ್ಡರ್ ಯಾರು? ಎನ್ನುವುದು ನನಗಿಂತ ನಿಮ್ಮ ಪಕ್ಷದ ನಾಯಕರಿಗೆ ಚೆನ್ನಾಗಿ ಗೊತ್ತಿದೆ. ಬಿಲ್ ಮಾಡಿಕೊಳ್ಳಬೇಕಾದರೆ ಯಾರಿಗೆಲ್ಲ ಬ್ಲಾಕ್ ಮೇಲ್ ಮಾಡಿದಿರಿ?  ಅಕ್ರಮಗಳ ಗೂಡಿಗೆ ಯಾರಿಂದ ಬೆಂಕಿ ಹಾಕಿಸಿದಿರಿ? ಎನ್ನುವುದನ್ನೂ ಬಲ್ಲೆ ಎಂದು ವ್ಯಂಗ್ಯವಾಡಿದ್ದಾರೆ.

ಮಲ್ಲೇಶ್ವರದಲ್ಲಿ ನೀವು ನಡೆಸಿರುವ ಕರ್ಮಕಾಂಡವನ್ನು ಬಿಚ್ಚಿಡುತ್ತೇನೆ. ಕಲಾಪ ನಡೆಸಿ ನೋಡಿ. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ ಎನ್ನುವಂತೆ ಮಲ್ಲೇಶ್ವರದಲ್ಲಿ ನಿಮ್ಮ ಸದಾರಮೆ ಶೋಕಿ ಎಂಥದು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತಾಗಿದೆ.ನಾನು ಕಲಾಪ ನಡೆಸಿ ಎಂದಷ್ಟೇ ಕೇಳಿದೆ. ನಾನು ನಿಮ್ಮ ಹೆಸರೆತ್ತಲಿಲ್ಲ. ನಿಮಗೆ ಗೊತ್ತಿರಲಿ. ಆದರೆ,  ನಿಮಗ್ಯಾಕೆ ಸಿಟ್ಟು ಬಂತೋ ನಾ ಕಾಣೆ. ಪಿಎಸ್ಐ ಅಕ್ರಮ, ಪ್ರಾಧ್ಯಾಪಕರ ನೇಮಕ ಅಕ್ರಮ, ಬಿಲ್ಲುಗಳ ಭಾಗವತ, ಮಹಾ ಡೀಲುಗಳ ಬಗ್ಗೆ ಚರ್ಚೆ ಮಾಡೋಣ. ನಾನು ತಯಾರಿದ್ದೇನೆ. ಕಲಾಪ ಕರಪಂಗನಾಮ ಬೂಟಾಟಿಕೆದಾಸಯ್ಯನಿಗೆಮೈಯ್ಯೆಲ್ಲಾ_ಪಂಗನಾಮ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.