ಪಟಾಕಿ ತುಂಬಿದ್ದ ಇ-ರಿಕ್ಷಾ ಸ್ಪೋಟ : ಎದೆ ಝಲ್ಲೆನ್ನಿಸುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
Team Udayavani, Feb 28, 2023, 3:05 PM IST
ಉತ್ತರ ಪ್ರದೇಶ: ಜಗನ್ನಾಥ ಶೋಭಾ ಯಾತ್ರೆಗೆಂದು ಪಟಾಕಿಗಳನ್ನು ತುಂಬಿದ್ದ ಎಲೆಕ್ಟ್ರಿಕ್ ರಿಕ್ಷಾದ ಮೇಲೆಯೇ ಪಟಾಕಿ ಕಿಡಿ ಬಿದ್ದು ಸ್ಪೋಟಗೊಂಡ ಪರಿಣಾಮ ಓರ್ವ ಮೃತಪಟ್ಟ ಘಟನೆ ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಪಟಾಕಿ ತುಂಬಿದ್ದ ರಿಕ್ಷಾ ಸ್ಪೋಟಗೊಳ್ಳುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಬೆಚ್ಚಿ ಬೀಳಿಸುವಂತಿದೆ.
ಯಾತ್ರೆಯ ಸಂದರ್ಭದಲ್ಲಿ ಸಿಡಿಸಲೆಂದು ತರಲಾಗಿದ್ದ ಪಟಾಕಿಗಳನ್ನು ಇ-ರಿಕ್ಷಾದಲ್ಲಿ ಇಡಲಾಗಿತ್ತು. ಈ ವೇಳೆ ಅದರ ಪಕ್ಕದಲ್ಲೇ ಸಿಡಿಸಲಾಗಿದ್ದ ಪಟಾಕಿಯ ಕಿಡಿ ಇತರೆ ಪಟಾಕಿಗಳನ್ನು ತುಂಬಿದ್ದ ಪೆಟ್ಟಿಗೆಗಳಿದ್ದ ರಿಕ್ಷಾದ ಮೇಲೆ ಬಿದ್ದಿದೆ. ಆ ವೇಳೆಗೆ ಭಾರೀ ಸ್ಪೋಟ ಸಂಭವಿಸಿದ್ದು,ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ. ಘಟನೆಯ ದೃಶ್ಯಗಳು ಅಲ್ಲೇ ಇದ್ದ ಸಿಸಿ ಕ್ಯಾಮರಾಗಳಲ್ಲಿ ದಾಖಲಾಗಿವೆ.
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ದಾದ್ರಿ ಪ್ರದೇಶದಲ್ಲಿರುವ ಜನನಿಬಿಡ ಮಾರುಕಟ್ಟೆಯಲ್ಲಿ ಕೆಲವಾರು ಮಂದಿ ಅಂಗಡಿಗಳ ಮುಂಭಾಗ ನಿಂತಿರುವುದು ಕಂಡುಬಂದಿದೆ. ಕೆಲವೇ ಕ್ಷಣಗಳಲ್ಲಿ ಸಿಡಿಮದ್ದುಗಳನ್ನು ತುಂಬಿದ್ದ ಇ-ರಿಕ್ಷಾ ಸ್ಪೋಟಗೊಳ್ಳುವ ದೃಶ್ಯ ಎಂಥವನನ್ನೂ ಝಲ್ಲೆನ್ನಿಸುವುದು ಖಂಡಿತ.
ಸ್ಪೋಟ ಸಂಭವಿಸಿದ ತಕ್ಷಣವೇ ಅಲ್ಲಿ ಸೇರಿದ್ದ ಜನ ಅಕ್ಕಪಕ್ಕದ ಅಂಗಡಿಗಳ ಒಳಗೆ ನುಗ್ಗಿದ್ದರಿಂದ ಹೆಚ್ಚಿನ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೋಲಿಸರು ಹೇಳಿದ್ದಾರೆ. ಘಟನೆಯಲ್ಲಿ ಪಟಾಕಿ ಸಿಡಿಸುತ್ತಿದ್ದ ಸಲ್ಮಾನ್ ಮತ್ತು ಇ-ರಿಕ್ಷಾದ ಚಾಲಕ ಪಪ್ಪು ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಮಂಗಳವಾರ ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಗ್ರೇಟರ್ ನೋಯ್ಡಾ ಎಡಿಜಿಪಿ ಟ್ವೀಟ್ ಮಾಡಿದ್ದಾರೆ.
थाना दादरी क्षेत्रांतर्गत कस्बा दादरी में जगन्नाथ शोभा यात्रा के दौरान आतिशबाजी के समान में आग लग गई। इस घटना में 02 व्यक्ति घायल हो गए जिनको इलाज हेतु हॉस्पिटल भेजा गया है, आवश्यक कार्यवाही की जा रही है।
उक्त प्रकरण में एडीसीपी ग्रेटर नोएडा द्वारा दी गयी बाइट। pic.twitter.com/UFYa1NfukL— POLICE COMMISSIONERATE GAUTAM BUDDH NAGAR (@noidapolice) February 27, 2023
ಇದನ್ನೂ ಓದಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಮೂವರು ಸ್ಥಳದಲ್ಲೇ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ