ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ
ಹವಾಮಾನ ಇಲಾಖೆ ಮುಂಬೈ ಮತ್ತು ಥಾಣೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.
Team Udayavani, Jul 5, 2022, 4:57 PM IST
ಮುಂಬೈ: ಮುಂಬೈಯಲ್ಲಿ ಧಾರಾಕಾರ ಮಳೆಯಾಗಿದ್ದು, ಇದರ ಪರಿಣಾಮ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ರಸ್ತೆಗಳಲ್ಲಿ ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಶುಕ್ರವಾರದವರೆಗೂ ಭಾರೀ ವರ್ಷಧಾರೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ (ಜುಲೈ 05) ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ:ಪೊಲೀಸರ ಮಿಂಚಿನ ಕಾರ್ಯಾಚರಣೆ: ಚಂದ್ರಶೇಖರ ಗುರೂಜಿ ಹಂತಕರ ಬಂಧನ
ಹವಾಮಾನ ಇಲಾಖೆ ಮುಂಬೈ ಮತ್ತು ಥಾಣೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಮುಂಬೈಗೆ ಐದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.
ಭಾರೀ ಮಳೆಯಿಂದಾಗಿ ತಗ್ಗುಪ್ರದೇಶ ಜಲಾವೃತಗೊಂಡಿದ್ದು, ರೈಲು ಸಂಚಾರ ವ್ಯವಸ್ಥೆಯಲ್ಲೂ ವ್ಯತ್ಯಯ ಉಂಟಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, 24ಗಂಟೆಗಳ ಅವಧಿಯಲ್ಲಿ ಸುಮಾರು 95.81 ಮಿಲಿ ಮೀಟರ್ ಮಳೆ ಸುರಿಯಲಿದೆ ಎಂದು ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ಮುಂಬೈನ ಸೈಯನ್ ಪ್ರದೇಶದ ಜಲಾವೃತಗೊಂಡಿದೆ. ಅದೇ ರೀತಿ ಥಾಣೆ ಮತ್ತು ನವಿ ಮುಂಬಯಿ ಪ್ರದೇಶ ಕೂಡಾ ಮಳೆಯ ಆರ್ಭಟದಿಂದ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್
ಮೀನು ಮಾರಾಟ ಮಾಡುತ್ತಿದ್ದ ಮಮತಾ ಆಪ್ತ ಮಂಡಲ್ ಇಂದು ಸಾವಿರ ಕೋಟಿ ಆಸ್ತಿ ಒಡೆಯ!
ರಾಜಕೀಯ ಪಕ್ಷಗಳ ಉಚಿತ ಕೊಡುಗೆ ದೇಶದ ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತಿದೆ: ಸುಪ್ರೀಂಕೋರ್ಟ್
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,299 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಪ್ರಮಾಣವಚನ ಸ್ವೀಕಾರ