ಪಿರಿಯಾಪಟ್ಟಣದಲ್ಲಿ ಭಾರಿ ಮಳೆ: ಮರ ಮುರಿದು ಬಿದ್ದು ಮಹಿಳೆ ಸಾವು
Team Udayavani, Apr 1, 2022, 7:50 PM IST
ಪಿರಿಯಾಪಟ್ಟಣ: ಭಾರಿ ಗಾಳಿ ಮಳೆಯ ಪರಿಣಾಮ ಭಾರಿ ಗಾತ್ರದ ಮರವೊಂದು ಮುರಿದು ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಾಲೂಕಿನ ಹೆಚ್.ಮಠದಕೊಪ್ಪಲು ಗ್ರಾಮದ ಸ್ವಾಮಿ ಎಂಬುವರ ಪತ್ನಿ ಪುಟ್ಟಮ್ಮ (30) ಮೃತ ದುರ್ದೈವಿ. ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗಿ ಬರುತ್ತಿರುವ ಸಂದರ್ಭದಲ್ಲಿ ಅವಘಡ ನಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಟ್ಟದಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರಿ ಗಾಳಿ ಬೀಸಿದ ಪರಿಣಾಮ ರಾವಂದೂರು ಗ್ರಾಮದ ಸಂದೀಪ್ ರವರ ಮನೆಯ ಮೇಲ್ಚಾವಣಿ ಹಾರಿ ಹೋಗಿದ್ದು, ವಿದ್ಯುತ್ ಕಂಬದ ಮೇಲೆ ಸಿಲುಕಿದೆ. ಅಕ್ಕಪಕ್ಕದ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿವೆ. ರಾವಂದೂರಿನ ಸುತ್ತಮುತ್ತ ಹಲವಾರು ಮರಗಳು ವಿದ್ಯುತ್ ಕಂಬಗಳು
ಮುರಿದುಬಿದ್ದಿವೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ನೌಕರರು ಹಾಗೂ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ