ತಮಿಳುನಾಡು: ಭಾರೀ ಮಳೆಗೆ ತತ್ತರಿಸಿದ ಚೆನ್ನೈ, ಶಾಲಾ, ಕಾಲೇಜು, ಸರ್ಕಾರಿ ಕಚೇರಿ ಬಂದ್
ಬರೋಬ್ಬರಿ 21 ಸೆಂಟಿ ಮೀಟರ್ ಮಳೆ ಸುರಿದಿರುವುದಾಗಿ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Nov 8, 2021, 10:42 AM IST
ಚೆನ್ನೈ: ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಷ್ಟೇ ಅಲ್ಲ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ವರದಿ ತಿಳಿಸಿದೆ.
ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಪರಿಣಾಮ ಸೋಮವಾರ(ನವೆಂಬರ್ 08) ಬಹುತೇಕ ಸರ್ಕಾರಿ ಕಚೇರಿಗಳು ಬಂದ್ ಆಗಿದ್ದು, ಖಾಸಗಿ ಕಚೇರಿಯ ಉದ್ಯೋಗಿಗಳಿಗೆ ರಜೆ ನೀಡಿ ಅಥವಾ ವರ್ಕ್ ಫ್ರಂ ಹೋಮ್ ಕೊಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ.
ಭಾನುವಾರ ಬೆಳಗ್ಗೆವರೆಗೆ ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಬರೋಬ್ಬರಿ 21 ಸೆಂಟಿ ಮೀಟರ್ ಮಳೆ ಸುರಿದಿರುವುದಾಗಿ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿತ್ತು. ಅಲ್ಲದೇ ಮಂಗಳವಾರ ಮತ್ತು ಬುಧವಾರ ಕೂಡಾ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು