ದಿಡುಪೆ ಹೆಬ್ಬಾರ್ತಿಕಲ್ ಗುಡ್ಡದಲ್ಲಿ ಭಾರಿ ಗಾತ್ರದ ಬಂಡೆ ಕುಸಿತ: ಸ್ಥಳೀಯರಲ್ಲಿ ಆತಂಕ !
Team Udayavani, Jul 19, 2020, 11:57 AM IST
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮಲವಂತಿಗೆ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ಬಂಡೆಯೊಂದು ಉರುಳಿಬಿದ್ದಿದೆ.
ದಿಡುಪೆ ಹೆಬ್ಬಾರ್ತಿಕಲ್ ಗುಡ್ಡದಲ್ಲಿ ರವಿವಾರ ಮುಂಜಾನೆ 9.30 ಸಮಯದಲ್ಲಿ ಈ ಬಂಡೆ ಕುಸಿದಿದ್ದು, ಉರುಳಿಬಿದ್ದ ಸದ್ದಿಗೆ ಆತಂಕದಿಂದ ಸ್ಥಳೀಯ ನಿವಾಸಿಗಳು ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಬಂಡೆ ಬಿದ್ದ ಸ್ಥಳದಲ್ಲಿ ದಟ್ಟ ಹೊಗೆ ಆಡಿದ ವಾತಾವರಣ ಕಂಡಿದ್ದು, ಕಳೆದ ಕೆಲದಿನಗಳಿಂದ ಮಳೆ ಸುರಿದಿದ್ದರಿಂದ ಮಣ್ಣು ಸಡಿಲಗೊಂಡು ಬಂಡೆ ಉರುಳಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮೈದಾಡಿ ಘಾಟಿ ಕೆಳಗಿರುವ ಹೆಬ್ಬಾರ್ತಿಕಲ್ ಗುಡ್ಡದಲ್ಲಿ ಈ ಘಟನೆ ಸಂಭವಿಸಿದ್ದು, ಗುಡ್ಡದ 3 ಕಿ.ಮೀ. ದೂರದಲ್ಲಿ 10 ಕ್ಕೂ ಅಧಿಕ ಮನೆಗಳಿವೆ. ಹೀಗಾಗಿ ಸ್ಥಳೀಯ ನಿವಾಸಿಗಳಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ.
ಕಳೆದ ಬಾರಿ ಕೂಡ ಇದೇ ವ್ಯಾಪ್ತಿಯ ತುಲುಪುಲೆ ಬದಿ ಗುಡ್ಡ ಜರಿದು ತೋಟಗಳಿಗೆ ಹಾನಿಯಾಗಿತ್ತು.
ಕಳೆದ ಬಾರಿ ಕುಸಿತಗೊಂಡಿದ್ದ ಪಕ್ಕದ ಬೆಟ್ಟ ಬಣ್ಣಕಲ್ ಗುಡ್ಡ ಚಿತ್ರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ