ಸಾಂಸ್ಕೃತಿಕ ನಗರಿಯಲ್ಲಿ ಹೆಲಿಟೂರಿಸಂ ವಿವಾದ


Team Udayavani, Apr 19, 2021, 7:10 AM IST

ಸಾಂಸ್ಕೃತಿಕ ನಗರಿಯಲ್ಲಿ ಹೆಲಿಟೂರಿಸಂ ವಿವಾದ

ಬೆಂಗಳೂರು: ಆಗಸದಿಂದ ನಗರ ಹಾಗೂ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳುವ, ಮುಗಿಲೆತ್ತರದಲ್ಲಿ ಜಾಲಿ ರೈಡ್‌ ಮಾಡುತ್ತಾ ಅಸ್ವಾದಿಸುವ ಹೆಲಿಟೂರಿಸಂ ಪರ-ವಿರೋಧ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಹೆಲಿಟೂರಿಸಂ ಮಾಡಲು ಉದ್ದೇಶಿಸಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಸಭೆಗಳ ಮೇಲೆ ಸಭೆ ನಡೆಸಿ ಮೈಸೂರು ಸೇರಿದಂತೆ ರಾಜ್ಯದಲ್ಲಿ 5 ಕಡೆ ಹೆಲಿಟೂರಿಸಂ ಮಾಡುವುದಾಗಿ ಘೋಷಿಸಿದ್ದಾರೆ. ಇದಕ್ಕೆ ಉತ್ಸುಕರಾಗಿ ಯೋಜನೆ ಜಾರಿಗೆ ಸರ್ವ ಪ್ರಯತ್ನ ಕೈಗೊಂಡಿದ್ದಾರೆ. ಆದರೆ ಈ ಹೆಲಿಟೂರಿಸಂಗೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಸೇರಿದಂತೆ ಸಂಘ ಸಂಸ್ಥೆಗಳು ಹಾಗೂ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಂಘಟನೆಗಳು ಇದರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿವೆ. ಜತೆಗೆ ಆನ್‌ಲೈನ್‌ನಲ್ಲಿ ಹೆಲಿಟೂರಿಸಂ ವಿರೋಧಿಸಿ ನಡೆಸಿದ ಸಹಿ ಸಂಗ್ರಹ ಚಳವಳಿ ನಡೆಸಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, 72 ಸಾವಿರಕ್ಕೂ ಅಧಿಕ ಮಂದಿ ಇದಕ್ಕೆ ಸಹಿ ಹಾಕಿದ್ದಾರೆ.

ಹೆಲಿಟೂರಿಸಂ ಬೇಕು
ಉದ್ಯಮಿಗಳು, ಹೊಟೇಲ್‌ ಮಾಲಕರು ಹೆಲಿಟೂರಿಸಂ ಆವಶ್ಯಕತೆ ಇದೆ ಎಂದು ಪ್ರತಿಪಾದಿಸಿ, ಪ್ರವಾಸೋದ್ಯಮ ಉತ್ತೇಜನ ಹಾಗೂ ಆರ್ಥಿಕತೆ ವೃದ್ಧಿ ಈ ಯೋಜನೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೆಲಿಟೂರಿಸಂನಿಂದ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ. ಬೆಳೆಯುತ್ತಿರುವ ನಗರ ಅಭಿವೃದ್ಧಿಗೆ ಈ ಯೋಜನೆಗಳು ಪೂರಕವಾಗಿದೆ. ಪರಿಸರ ನೆಪದಲ್ಲಿ ಇದನ್ನು ವಿರೋಧಿಸುವುದು ಸಲ್ಲ. ಆಧುನಿಕತೆಗಳನ್ನು ಕೈಬಿಡುವುದು ಸರಿಯಲ್ಲ. ಹೀಗೆ ವಿರೋಧಿಸುವುದಾದರೆ ಅಂತರ್ಜಲ ಕುಸಿದಿರುವ ಗ್ರಾಮೀಣ ಪ್ರದೇಶಗಳಲ್ಲಿ ಬೋರ್‌ವೆಲ್‌ ಕೊರೆಸುವಂತಿಲ್ಲ ಎಂಬ ನಿಯಮ ಇದೆ. ಆದರೆ ಇದು ನಿಜಕ್ಕೂ ಪಾಲನೆಯಾಗುತ್ತಿಯೇ, ಕೃಷಿಗೆ ನೀರು ಬೇಕಿಲ್ಲವೇ, ರಸ್ತೆ ನಿರ್ಮಿಸಲು ಅದಕ್ಕೆ ಅಡ್ಡಿಯಾಗಿರುವ ಮರ ಕಡಿಯಲೇ ಬೇಕಾಗುತ್ತದೆ ಎಂಬುದು ಇವರ ವಾದ. ಹೆಲಿಟೂರಿಸಂ ಎಂಬುದು ಉಡಾನ್‌ ಸ್ಕೀಮ್‌ನಡಿ 100 ಸ್ಥಳಗಳಲ್ಲಿ ಹೆಲಿಪ್ಯಾಡ್‌ ನಿರ್ಮಿಸುವ ಒಂದು ಯೋಜನೆ. ಪ್ರವಾಸೋದ್ಯಮ ಪ್ರೋತ್ಸಾಹಿಸಲು ಇದು ಯೋಜನೆ ಅತ್ಯವಶ್ಯ ಎಂದು ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಸುಧಾಕರ್‌ ಎನ್‌. ಶೆಟ್ಟಿ ಪ್ರತಿಪಾದಿಸಿದ್ದಾರೆ.

ಹೆಲಿಟೂರಿಸಂ ಬೇಡ
ಮೈಸೂರಿನಲ್ಲಿ 2ನೇ ಅತೀ ದೊಡ್ಡ ಅರಮನೆಯಾದ ಲಲಿತಮಹಲ್‌ ಬಳಿ ಹೆಲಿಟೂರಿಸಂ ನಿರ್ಮಿಸಲು ಉದ್ದೇಶಿಸಲಾಗಿದೆ. ಮಹಾರಾಜರು 1921ರಲ್ಲಿ ಕಟ್ಟಿರುವ ಈ ಕಟ್ಟಡದ ಸುತ್ತ ಹಸುರು ಮರಗಳು ಇವೆ. ಪಕ್ಕದಲ್ಲೇ ಚಾಮುಂಡಿಬೆಟ್ಟವೂ ಇದೆ. ತಂಪು ವಾತಾವರಣ ಇದೆ. ಸಹಸ್ರಾರು ಪಕ್ಷಿಗಳಿಗೆ ಆಶ್ರಯ ಒದಗಿಸಿದೆ. ಲಲಿತ ಮಹಲ್‌ ಬಳಿ ಬೆಳೆದಿರುವ 160 ಮರಗಳನ್ನು ಕಡಿದು ಹೆಲಿಟೂರಿಸಂ ಮಾಡುವ ಅನಿವಾರ್ಯತೆ ಇಲ್ಲ. ಮಹಾರಾಜರು ಈ ಭಾಗದಲ್ಲಿ ಸಸ್ಯ ಸಂಪತ್ತನ್ನು ಸಮೃದ್ಧಗೊಳಿಸಿದ್ದಾರೆ.

ಅದನ್ನು ಬೆಳೆಸಬೇಕೇ ಹೊರತು ವಿನಾಶ ಮಾಡುವ ಹಕ್ಕು ನಮಗಿಲ್ಲ. ಹೆಲಿಕಾಪ್ಟರ್‌ ಹಾರಾಟದ ಕಂಪನದಿಂದ ಪಾರಂಪರಿಕ ಕಟ್ಟಡಕ್ಕೂ ಅಪಾಯವಾಗುವ ಸಾಧ್ಯತೆಯಿದೆ. ಮರಗಳ ಜತೆಗೆ ಜೀವ ವೈವಿಧ್ಯವೂ ನಾಶವಾಗಲಿದೆ. ಹೀಗಾಗಿ ಇಲ್ಲಿ ಹೆಲಿಟೂರಿಸಂ ಬೇಡವೇ ಬೇಡ ಎಂಬುದು ಪರಿಸರವಾದಿಗಳು, ಸಂಘ ಸದ್ಯಕ್ಕೆ ಕೋರ್ಟ್‌ ಮೆಟ್ಟಿಲೇರುವ ಈ ವಿವಾದಿತ ಹೆಲಿಟೂರಿಸಂ ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.