ಹೆಲಿಕಾಪ್ಟರ್ ಪತನ: ಪ್ರತ್ಯಕ್ಷದರ್ಶಿಯ ಮೊಬೈಲ್ ಫೊರೆನ್ಸಿಕ್ ಪರೀಕ್ಷೆಗೆ


Team Udayavani, Dec 12, 2021, 7:50 PM IST

1-sfdsf

ಕೊಯಮತ್ತೂರು: ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಮಂದಿ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಸ್ಥಳದಲ್ಲಿ ಪ್ರತ್ಯಕ್ಷದರ್ಶಿಯಾಗಿ ವಿಡಿಯೋ ಚಿತ್ರೀಕರಿಸಿದ್ದ ವ್ಯಕ್ತಿಯ ಮೊಬೈಲ್ ಫೋನ್ ಅನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕೊಯಮತ್ತೂರಿನ ಛಾಯಾಗ್ರಾಹಕ ಜೋಯ್ ಅವರು ಡಿಸೆಂಬರ್ 8 ರಂದು ತಮ್ಮ ಸ್ನೇಹಿತ ನಜರ್ ಮತ್ತು ಅವರ ಕೆಲವು ಕುಟುಂಬ ಸದಸ್ಯರೊಂದಿಗೆ ಗುಡ್ಡಗಾಡು ನೀಲಗಿರಿ ಜಿಲ್ಲೆಯ ಕಟ್ಟೇರಿ ಪ್ರದೇಶಕ್ಕೆ ಫೋಟೋಗಳನ್ನು ಕ್ಲಿಕ್ಕಿಸಲು ಹೋಗಿದ್ದರು.

ಕುತೂಹಲದಿಂದ ಅವರು ತಮ್ಮ ಮೊಬೈಲ್ ಫೋನ್‌ನಲ್ಲಿ ಅಪಘಾತಕ್ಕೀಡಾಗುವ ಕೆಲವೇ ಕ್ಷಣಗಳ ಮೊದಲು ಹೆಲಿಕಾಪ್ಟರ್‌ನ ವಿಡಿಯೋವನ್ನು ರೆಕಾರ್ಡ್ ಮಾಡಿದ್ದರು, ಮಂಜಿನ ನಡುವೆ ಹೆಲಿಕಾಪ್ಟರ್ ಕಣ್ಮರೆಯಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಕರಣದ ತನಿಖೆಯ ಭಾಗವಾಗಿ ಜಿಲ್ಲಾ ಪೊಲೀಸರು ಜೋಯ್ ಅವರ ಮೊಬೈಲ್ ಫೋನ್ ಅನ್ನು ಸಂಗ್ರಹಿಸಿ ಕೊಯಮತ್ತೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಛಾಯಾಗ್ರಾಹಕ ಮತ್ತು ಅವರೊಂದಿಗೆ ಇನ್ನೂ ಕೆಲವರು ಕಾಡು ಪ್ರಾಣಿಗಳ ಸಂಚಾರವಿರುವ ನಿಷೇಧಿತ ಪ್ರದೇಶವಾಗಿರುವ ದಟ್ಟ ಅರಣ್ಯ ಪ್ರದೇಶಕ್ಕೆ ಏಕೆ ಹೋಗಿದ್ದರು ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯು ಚೆನ್ನೈನ ಹವಾಮಾನ ಇಲಾಖೆಯಿಂದ ದುರಂತದ ದಿನದಂದು ಪ್ರದೇಶದ ಹವಾಮಾನ ಮತ್ತು ತಾಪಮಾನಕ್ಕೆ ಸಂಬಂಧಿಸಿದ ವಿವರಗಳನ್ನು ಕೇಳಿದೆ. ಅಲ್ಲದೆ, ಅಪಘಾತದ ಬಗ್ಗೆ ಸುಳಿವುಗಳನ್ನು ಸಂಗ್ರಹಿಸಲು ಪೊಲೀಸರು ಸಾಕ್ಷಿಗಳನ್ನು ಪ್ರಶ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಎಂಐ-17ವಿಎಚ್ ಹೆಲಿಕಾಪ್ಟರ್ ಕೂನೂರಿನ ಕಟ್ಟೇರಿ-ನಂಜಪ್ಪನ್‌ಛತ್ರಂ ಪ್ರದೇಶದಲ್ಲಿ ಪತನಗೊಂಡು ಸಿಡಿಎಸ್ ಜನರಲ್ ರಾವತ್, ಅವರ ಪತ್ನಿ ಮತ್ತು ಇತರ 11 ಮಂದಿ ಸಾವನ್ನಪ್ಪಿದ್ದರು.

ಅಪಘಾತದಲ್ಲಿ ಓರ್ವ ಐಎಎಫ್ ಸಿಬ್ಬಂದಿ ಬದುಕುಳಿದಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.