ಜಮೀರ್ ಗೆ ಹೈಕಮಾಂಡ್ ನೋಟಿಸ್: ಇದು ಡಿಕೆಶಿಯ ಅಸಹಾಯಕತೆ ಎಂದ ಬಿಜೆಪಿ
Team Udayavani, Jul 26, 2022, 11:58 AM IST
ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ಹೈಕಮಾಂಡ್ ನೀಡಿರುವ ನೋಟಿಸ್ ಕೂಡಾ ಈಗ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ.
ಡಿಕೆ ಶಿವಕುಮಾರ್ ವಿರುದ್ಧದ ಪಿಸುಮಾತು ಪ್ರಕರಣಕ್ಕಾಗಿ ಉಗ್ರಪ್ಪ ಅವರಿಗೆ ಈ ಹಿಂದೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಆದೇ ಉಗ್ರಪ್ಪ ಸಿದ್ದರಾಮಯ್ಯ ಜೊತೆ ವೇದಿಕೆಯಲ್ಲಿ ವಿರಾಜಮಾನರಾದರು, ಡಿಕೆ ಶಿವಕುಮಾರ್ ಜತೆ ಪತ್ರಿಕಾಗೋಷ್ಠಿ ನಡೆಸಿದರು. ತಾನು ಕೊಟ್ಟ ನೋಟಿಸ್ ಗೆ ತಾನೇ ಬೆಲೆ ನೀಡಲಾಗದ ಸ್ಥಿತಿಗೆ ಡಿಕೆ ಶಿವಕುಮಾರ್ ತಲುಪಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಶಿಸ್ತು ಸಮಿತಿ ಎಂದರೆ ರಾಜಕೀಯ ಜವಾಬ್ದಾರಿ ಇಲ್ಲದವರಿಗೆ ನೀಡುವ ತಾತ್ಕಾಲಿಕ ಕಚೇರಿಯಾಗಿದೆ. ಶಿಸ್ತು ಸಮಿತಿಯ ನೋಟಿಸ್ ಕತೆ ಬಿಡಿ, ಹೈಕಮಾಂಡ್ ನಿರ್ದೇಶನವನ್ನೇ ಗಾಳಿಗೆ ತೂರಲಾಗುತ್ತಿದೆ. ನಾಯಕತ್ವ ಎನ್ನುವುದು ಗಾಳಿ ಬಂದತ್ತ ತೂರುವಂತಾದರೆ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಪ್ರಶ್ನಿಸಿದೆ.
ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನೀಡಿದ ಎಚ್ಚರಿಕೆ ಡಿಕೆಶಿಯ ಅಸಹಾಯಕತೆಗೆ ಹಿಡಿದ ಕನ್ನಡಿ. ತನ್ನ ಮಾತು ಕೇಳುವುದಿಲ್ಲ ಎಂದು ಸಾಮಾನ್ಯ ಶಾಸಕನ ಬಾಯಿ ಮುಚ್ಚಿಸಲು ಹೈಕಮಾಂಡ್ ಮೊರೆ ಹೋಗುವಂತಾಯ್ತು. ಇದು ಅಸಹಾಯಕತೆ ಅಲ್ಲದೆ ಮತ್ತೇನು? ಎಂದು ವ್ಯಂಗ್ಯವಾಡಿದೆ.
ಇದನ್ನೂ ಓದಿ:ಕಾಗದದ ಹುಲಿ ಮೋದಿ, ಚೀನಾದ ಎದುರು ಇಲಿಯಾಗುವುದು ಯಾಕೆ?: ದಿನೇಶ್ ಗುಂಡೂರಾವ್
ಡಿಕೆ ಶಿವಕುಮಾರ್ ವಿರುದ್ಧ ಮಾತನಾಡಿದ್ದಕ್ಕಾಗಿ ಸಿದ್ದರಾಮಯ್ಯ ಬಣದ ವ್ಯಕ್ತಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ನೀಡುವ ನೋಟಿಸ್ ಈಗ ನಗೆಪಾಟಲಿಯ ಸರಕಾಗಿದೆ. ನೋಟಿಸ್ ನೀಡಿದ ಮರುದಿನವೇ ಮತ್ತೆ ಟೀಕೆ ಶುರುವಾಗುತ್ತದೆ. ಡಿಕೆಶಿ ಅವರ ಅಸಹಾಯಕ ಸ್ಥಿತಿಗೆ ಮರುಕಪಡುವಂತಾಗಿದೆ ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ