ದತ್ತ ಜಯಂತಿಗೆ ಅನುಮತಿ ನೀಡಿದ ಹೈಕೋರ್ಟ್
Team Udayavani, Nov 30, 2022, 1:18 PM IST
ಬೆಂಗಳೂರು: ಬಾಬಾ ಬುಡನ್ ಗಿರಿ ದತ್ತಪೀಠದಲ್ಲಿ ಡಿ.6,7 ಮತ್ತು 8ರಂದು ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಪ್ರಕರಣದ ಕುರಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ:ಜೆಡಿಎಸ್ ಗೆ ರಸ್ತೆಯಲ್ಲಿ ಹೋಗೋ ನಾಯಿ ಕೂಡ ಹೋಗಲ್ಲ: ಈಶ್ವರಪ್ಪ ವ್ಯಂಗ್ಯ
ಈಗಾಗಲೇ ನಿರ್ವಹಣಾ ಸಮಿತಿ ರಚಿಸಲಾಗಿದೆ. ಹಿಂದೂ-ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಆಗಿದೆ. ಪ್ರತಿ ದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿ ಆಚರಣೆಗೆ ಅನುಮತಿ ನೀಡಬೇಕು ಸರ್ಕಾರದ ಮನವಿ ಮಾಡಿತ್ತು.