ಉನ್ನತ ಶಿಕ್ಷಣ ಇಲಾಖೆ: ಸಿಬಂದಿ ಸಮಸ್ಯೆ ಪರಿಹರಿಸಲು ಸಮಗ್ರ ಪೋರ್ಟಲ್‌ ಸಿದ್ಧ

ಡಿ.25ರ 'ಸುಶಾಸನ ದಿನ'ದಂದು ಲೋಕಾರ್ಪಣೆ: ಅಶ್ವತ್ಥನಾರಾಯಣ

Team Udayavani, Dec 12, 2022, 6:52 PM IST

1-adadddada

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬಂದಿಗಳ ಕುಂದುಕೊರತೆಗಳನ್ನು ಸುಲಭವಾಗಿ ಪರಿಹರಿಸಲು ಸಮಗ್ರ ಪೋರ್ಟಲ್‌ ಅಭಿವೃದ್ಧಿಪಡಿಸಲಾಗುತ್ತಿದೆ. ಇದನ್ನು ‘ಸುಶಾಸನ ದಿನ’ವಾದ ಡಿ.25ರಂದು ಉದ್ಘಾಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಸರಕಾರಿ ಪಾಲಿಟೆಕ್ನಿಕ್‌ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಬೋಧಕರನ್ನು ಉದ್ದೇಶಿಸಿ ವರ್ಚುವಲ್ ಮೂಲಕ ಅವರು ಸೋಮವಾರ ಮಾತನಾಡಿದರು.

ಇಲಾಖೆಯ ಸಿಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಆದಷ್ಟೂ ಮಟ್ಟಿಗೆ ನ್ಯಾಯಾಲಯದ ಹೊರಗೆಯೇ ನಿವಾರಿಸಲು ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಪೋರ್ಟಲ್‌ ಸಿದ್ಧಪಡಿಸಲಾಗುತ್ತಿದೆ. ಇದರಲ್ಲಿ ಸರಳವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಕುಂದುಕೊರತೆಗಳನ್ನು ಆಲಿಸಿ, ಪಿಂಚಣಿ, ಬಡ್ತಿ, ನಿಯೋಜನೆ, ವರ್ಗಾವಣೆ ಮುಂತಾದ ವಿಚಾರಗಳನ್ನು ಸುಲಭವಾಗಿ ಬಗೆಹರಿಸಲಾಗುವುದು ಎಂದು ಅವರು ತಿಳಿಸಿದರು.

ಉನ್ನತ ಶಿಕ್ಷಣದ ಹಂತದಲ್ಲಿ ಎನ್‌ಇಪಿಯಲ್ಲಿ ಅವಕಾಶವಿರುವ ‘ಓಪನ್‌ ಎಲೆಕ್ಟೀವ್ಸ್‌’ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಇದರಿಂದ ಸ್ಪಷ್ಟವಾಗಿ ಗುರುತಿಸಬಹುದು. ಹಾಗೆಯೇ, ಪದವಿಯ ಅಂತಿಮ ವರ್ಷದಲ್ಲಿರುವ ವಿದ್ಯಾರ್ಥಿಗಳ ವಿವರಗಳನ್ನು ಸ್ಕಿಲ್‌ ಕನೆಕ್ಟ್‌ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಜತೆಗೆ, ಪದವೀಧರರಾಗಿ ಹೊರಹೋಗಿರುವ ವಿದ್ಯಾರ್ಥಿಗಳನ್ನೂ ಇದರಲ್ಲಿ ನೋಂದಾಯಿಸಬೇಕು. ಇದರಿಂದ ಆ ಮಕ್ಕಳಿಗೆ ಯಾವ ಕೌಶಲಗಳನ್ನು ಕಲಿಸಬಹುದು ಎನ್ನುವುದು ಉದ್ಯಮ ವಲಯದವರಿಗೂ ಗೊತ್ತಾಗುತ್ತದೆ. ಆದ್ದರಿಂದ ಎನ್‌ಇಪಿ ಬಗ್ಗೆ ಕಾಲೇಜು ಹಂತದಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚಿಸಿದರು.

ಕರ್ನಾಟಕದಲ್ಲಿ ಮೂರು ರಾಜ್ಯಗಳಿಗೆ ಆಗುವಷ್ಟು ಉದ್ಯೋಗಾವಕಾಶಗಳಿವೆ. ಇನ್ನೊಂದೆಡೆಯಲ್ಲಿ ರಾಜ್ಯದಲ್ಲಿ ನಿರುದ್ಯೋಗವು ಅತ್ಯಂತ ಕನಿಷ್ಠ ಪ್ರಮಾಣದಲ್ಲಿದೆ. ನಮ್ಮ ಮುಂದಿರುವ ಉಜ್ವಲ ಅವಕಾಶಗಳು ಸ್ಥಳೀಯ ಯುವಜನರಿಗೇ ಸಿಗುವುದನ್ನು ಕಲಿಕೆಯ ಹಂತದಲ್ಲೇ ಖಾತ್ರಿ ಪಡಿಸಿಕೊಳ್ಳಬೇಕು. ಇದು ಸಾಧ್ಯವಾಗಬೇಕೆಂದರೆ ಉನ್ನತ ಶಿಕ್ಷಣದ ಸುಸ್ಥಿರ ಅಭಿವೃದ್ಧಿ ಮತ್ತು ಕಲಿಕೆಯಲ್ಲಿ ಜಾಗತಿಕ ಗುಣಮಟ್ಟಗಳನ್ನು ಕಾಪಾಡಿಕೊಳ್ಳುವುದು ಅಗತ್ಯ ಎಂದು ಅವರು ಪ್ರತಿಪಾದಿಸಿದರು.

ಜಾಗತಿಕ ಸ್ಪರ್ಧೆಯ ಈ ಯುಗದಲ್ಲಿ ರಿಯಾಯಿತಿಗಾಗಲಿ, ರಾಜಿಗಾಗಲಿ ಅವಕಾಶವಿಲ್ಲ. ಆದ್ದರಿಂದ ಸ್ಮಾರ್ಟ್ ಕ್ಲಾಸ್‌ರೂಂ ಇರುವೆಡೆಗಳಲ್ಲಿ ಅದರ ಮೂಲಕವೇ ಬೋಧನೆ ನಡೆಯಬೇಕು. ಕೆಎಲ್‌ಎಂಎಸ್‌ ವ್ಯವಸ್ಥೆಯಲ್ಲಿರುವ ಪಠ್ಯಗಳನ್ನು ನೂರಕ್ಕೆ ನೂರರಷ್ಟು ಉಪಯೋಗಿಸಿಕೊಳ್ಳಬೇಕು. ಜತೆಗೆ ಇದರ ಅಡಿಯಲ್ಲಿ ಪ್ರತೀ ವಿದ್ಯಾರ್ಥಿಯೂ ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ನಿರ್ದೇಶಿಸಿದರು.

ಇಲಾಖೆಯಲ್ಲಿ ಸುಶಾಸನದ ಅತ್ಯುತ್ತಮ ಅಂಶಗಳೆಲ್ಲವೂ ಜಾರಿಗೆ ಬರಬೇಕು. ಕಳೆದ ಮೂರು ವರ್ಷಗಳಲ್ಲಿ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳನ್ನು ಸಾಕಷ್ಟು ಸುಧಾರಿಸಲಾಗಿದೆ. ಈಗಂತೂ ಆಯಾ ಕಾಲೇಜುಗಳಲ್ಲಿ ಸಂಗ್ರಹವಾಗುವ ಹಣವನ್ನು ಆಯಾ ಕಾಲೇಜುಗಳಿಗೇ ನೀಡಲಾಗುತ್ತಿದೆ. ಈ ಮೂಲಕ ಆರ್ಥಿಕ ಸ್ವಾತಂತ್ರ, ಪಾರದರ್ಶಕತೆ ಮತ್ತು ಹೆಚ್ಚಿನ ಉತ್ತರದಾಯಿತ್ವಗಳನ್ನು ರೂಢಿಗೆ ತರಲಾಗಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.

ವರ್ಚುಯಲ್‌ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌, ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.