ಹೆದ್ದಾರಿ ಬದಿಗಳಾಗುತ್ತಿವೆ ತಿಪ್ಪೆಗುಂಡಿ!

ತ್ಯಾಜ್ಯ ಮುಕ್ತ ಹೆದ್ದಾರಿ ಸಂಕಲ್ಪಕ್ಕೆ ಬೇಕು ಕಾನೂನಿನ ಬಲ

Team Udayavani, Mar 29, 2021, 1:30 AM IST

ಹೆದ್ದಾರಿ ಬದಿಗಳಾಗುತ್ತಿವೆ ತಿಪ್ಪೆಗುಂಡಿ!

ಕಾರ್ಕಳ: ಸ್ವಚ್ಛತೆ ಕುರಿತು ಯಾರು ಏನೇ ಹೇಳಿದರೂ, ಎಷ್ಟೇ ಜಾಗೃತಿ ಮೂಡಿಸಿದರೂ ರಸ್ತೆ ಬದಿ, ತ್ಯಾಜ್ಯ ಸುರಿಯುವುದು, ಕಸ ಎಸೆಯುವುದು ಇನ್ನೂ ಕಡಿಮೆಯಾಗಿಲ್ಲ. ಪರಿಸರ ಸ್ವತ್ಛತೆ ಹೇಳಿಕೆಗಷ್ಟೆ ಸೀಮಿತವಾಗಿದ್ದು, ಹೆದ್ದಾರಿ ಬದಿಗಳಲ್ಲಿ ಮಾಲಿನ್ಯ ಹೆಚ್ಚುತ್ತಲೇ ಇದೆ.

ನಗರ ವ್ಯಾಪ್ತಿಯಿಂದ ಹೊರ ಬರುತ್ತಿದ್ದಂತೆ ಬಹುತೇಕ ರಸ್ತೆ ಬದಿ ತ್ಯಾಜ್ಯಗಳ ರಾಶಿ ಕಾಣಿಸುತ್ತದೆ.

ಮಿಯ್ಯಾರು- ಕಡಾರಿ ಹೆದ್ದಾರಿ, ಬೈಲೂರು- ಜೋಡುರಸ್ತೆ, ಸಾಣೂರು ಹೆದ್ದಾರಿ, ಮಠದ ಕೆರೆಯಿಂದ ನಿಟ್ಟೆ ತೆರಳುವ ಹೆದ್ದಾರಿ, ಕಾರ್ಕಳ ಬಜಗೋಳಿ ಹೆದ್ದಾರಿಯುದ್ದಕ್ಕೂ ರಸ್ತೆ ಬದಿಗಳು ಕಸದ ಕೊಂಪೆಯೇ ಆಗಿವೆ. ಪಾನೀಯ, ನೀರು ಕುಡಿದವರು ಪ್ಲಾಸ್ಟಿಕ್‌ ಬಾಟಲಿ ರಸ್ತೆ ಬದಿಗಳಲ್ಲಿ ಎಸೆಯುತ್ತಿದ್ದಾರೆ. ತ್ಯಾಜ್ಯಗಳನ್ನೂ ತಂದು ಸುರಿಯಲಾಗುತ್ತಿದೆ.

ಮೂಗಿಗೆ ಬಡಿಯುತ್ತಿದೆ ವಾಸನೆ
ಕೊಳೆತ ಆಹಾರ ಪದಾರ್ಥಗಳು, ಮಕ್ಕಳಿಗೆ ಹಾಕುವ ಪ್ಯಾಂಪರ್ಸ್‌, ಮೊಟ್ಟೆ ಹೊರ ಕವಚ, ಕೋಳಿ ಮಾಂಸದ ಉಳಿಕೆ, ಮದ್ಯದ ಖಾಲಿ ಬಾಟಲಿಗಳು, ಆಹಾರ ಪೊಟ್ಟಣಗಳು ಹೀಗೆ ಎಲ್ಲವನ್ನೂ ಚೀಲದಲ್ಲಿ ತಂದು ಎಸೆಯಲಾಗುತ್ತಿದೆ. ಒಂದೆರಡು ದಿನಗಳಲ್ಲಿ ಇವುಗಳಿಂದ ವಾಸನೆ ಬರಲಾರಂಭಿಸಿ, ರಸ್ತೆಯಲ್ಲಿ ತೆರಳುವವರಿಗೆ ಯಾತನೆಯಾಗುತ್ತಿದೆ. ಕೆಲವು ಕಡೆ ಸ್ಥಳೀಯರು ತ್ಯಾಜ್ಯಕ್ಕೆ ಬೆಂಕಿ ಹಾಕುವುದರಿಂದ ಮತ್ತಷ್ಟು ಮಾಲಿನ್ಯ ಉಂಟಾಗುತ್ತಿದೆ.

ವಿದ್ಯಾವಂತರೇ ತಪ್ಪೆಸಗುತ್ತಿದ್ದಾರೆ
ರಸ್ತೆಗೆ ಕಸ ಎಸೆಯುವವರಲ್ಲಿ ಬಹುತೇಕರು ಕಾರು, ಬೈಕ್‌, ಸ್ಕೂಟರ್‌ಗಳಲ್ಲಿ ಹೋಗುವಾಗ ರಸ್ತೆ ಬದಿ ಎಸೆದು ಹೋಗುತ್ತಾರೆ. ಕೆಲವರು ತಮ್ಮ ಜತೆ ಮಕ್ಕಳನ್ನು ಕರೆತಂದು ಅವರೆದುರೇ ತ್ಯಾಜ್ಯ ಎಸೆಯುತ್ತಾರೆ. ಇದರಿಂದ ಮಕ್ಕಳೂ ಅದನ್ನೇ
ಕಲಿಯುವಂತಾಗಿದೆ.

ಜಾನುವಾರುಗಳಲ್ಲಿ ರೋಗ ಭೀತಿ
ರಸ್ತೆ ಬದಿಗಳಲ್ಲಿ ಬಿಸಾಕಿದ ತ್ಯಾಜ್ಯ, ವಿಷಯುಕ್ತ ಆಹಾರಗಳನ್ನು ಜಾನುವಾರುಗಳು ತಿನ್ನುತ್ತವೆ. ಬಿಸಿಲ ಬೇಗೆಗೆ ಆಹಾರ ಅರಸಿಕೊಂಡು ಬರುವ ಗೋವುಗಳು ರಸ್ತೆ ಬದಿಯ ಪ್ಲಾಸ್ಟಿಕ್‌, ಹಳಸಿದ ಆಹಾರ ಇತ್ಯಾದಿಗಳನ್ನು ತಿನ್ನುವುದರಿಂದ ಬೇಸಗೆಯ ಈ ಅವಧಿಯಲ್ಲಿ ಅವುಗಳು ಜೀರ್ಣವಾಗದೆ ಜಾನುವಾರುಗಳು ಕೂಡ ಅನಾರೋಗ್ಯಕ್ಕೆ ಒಳಗಾಗುತ್ತಿವೆ.

ಸಾಮಾಜಿಕ ಅಪರಾಧವಾಗಿ ಪರಿಗಣಿಸಬೇಕು
ಸ್ವತ್ಛತೆ ಕಾಪಾಡುವುದು ಎಲ್ಲರ ಕರ್ತವ್ಯ. ಆದರೂ ಕೂಡ ಇದು ಕಟ್ಟುನಿಟ್ಟಾಗಿ ಪಾಲನೆ ಯಾಗುತ್ತಿಲ್ಲ. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕಸ ಎಸೆಯುವುದು ಸಾಮಾಜಿಕ ಅಪರಾಧವಾಗಿ ಪರಿಗಣಿಸಿ ಕ್ರಿಮಿನಲ್‌ ಪ್ರಕರಣ ದಾಖಲಿಸ ಲಾಗುತ್ತದೆ. ಅದೇ ರೀತಿ ಇಲ್ಲೂ ಮಾಡುವುದು ಅನಿವಾರ್ಯವಾಗಿದೆ.

ನಾಮಫ‌ಲಕ ಲೆಕ್ಕಕ್ಕೆ ಮಾತ್ರ
ಹೆದ್ದಾರಿ ಹಾದುಹೋಗುವ ಆಯಾ ಪಂಚಾಯತ್‌, ಸ್ಥಳೀಯಾಡಳಿತಗಳು ತ್ಯಾಜ್ಯ ಸುರಿಯಬಾರದು ಎಂದು ಬೋರ್ಡ್‌ ಅಳವಡಿಸಿದ್ದರೂ, ಅದರ ಬುಡದಲ್ಲೇ ಕಸ ತಂದು ಸುರಿಯ ಲಾಗುತ್ತಿದೆ. ನಗರಸಭೆ, ಪುರಸಭೆ, ಸ್ಥಳಿಯಾಡಳಿತ ಮಟ್ಟದಲ್ಲಿ ಸಾರ್ವಜನಿಕ ರಲ್ಲಿ ಸ್ವತ್ಛತಾ ಜಾಗೃತಿ ಮೂಡಿಸಲಾಗುತ್ತಿದೆ. ಸಂಘ ಸಂಸ್ಥೆಗಳೂ ಕಸ ಸ್ವತ್ಛಗೊಳಿಸುವ ಕೆಲಸ ಮಾಡುತ್ತಿವೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.