ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಹಿಜಾಬ್ ವಿವಾದ: ಸಿದ್ದರಾಮಯ್ಯ

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ಹ್ಯಾರಿಸ್ ನಲಪಾಡ್ ಪ್ರಮಾಣ ವಚನ ಸ್ವೀಕಾರ

Team Udayavani, Feb 10, 2022, 2:42 PM IST

1-dsdsd

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಭಾವಿಸಿಯೇ ಹಿಜಾಬ್ ನಂತಹ ಭಾವನಾತ್ಮಕ ವಿಷಯಗಳನ್ನ ತಂದಿದ್ದಾರೆ ಎಂದು ವಿಪಕ್ಷ ನಾಯಕ‌ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ಹ್ಯಾರಿಸ್ ನಲಪಾಡ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಲಪಾಡ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ,ಪಕ್ಷ ಸಂಘಟನೆ ಮಾಡಲು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಲಪಾಡ್ ಹಾಗೂ ಯುವ ಪಡೆಗೆ ಅಭಿನಂದನೆಗಳು. ಇಂದು ದೇಶ ಬಹಳ ಬಿಕ್ಕಟ್ಟನ್ನ ಎದುರಿಸುತ್ತಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದ ನಂತರ ಶೋಷಣೆ, ಮಹಿಳೆಯರಿಗೆ, ಬಡವರಿಗೆ, ಕಾರ್ಮಿಕರಿಗೆ ತೊಂದರೆಯಾಗಿದೆ. ಹೀಗಾಗಿ ಕಾಂಗ್ರೆಸ್ ಮುಂದೆ ದೊಡ್ಡ ಸವಾಲು ಇದೆ. ದೇಶ ಉಳಿಸಬೇಕಾಗಿದೆ, ಸಂವಿಧಾನ ಉಳಿಸಬೇಕಾಗಿದೆ. ದೇಶ ಆರ್ಥಿಕವಾಗಿ ದಿವಾಳಿಯಾಗ್ತಾ ಇದೆ. ಯುವಕರು ಭವಿಷ್ಯದ ನಾಯಕರಾಗುವಂಥವರು. ಭವಿಷ್ಯವನ್ನ ರೂಪಿಸುವಂಥವರು, ರಾಷ್ಟ್ರ ನಿರ್ಮಾಣ ಮಾಡುವಂಥವರು. ನಿಮ್ಮ ಜವಾಬ್ದಾರಿ ಹೆಚ್ಚಿದೆ ಎಂದು ನಿಮಗೆ ಅರ್ಥವಾಗಿರಬೇಕು‌ ಎಂದರು.

ಬಿಜೆಪಿ ಏಳೆಂಟು ವರ್ಷದಲ್ಲಿ ಜನಪರ ಕೆಲಸ ಮಾಡಿಲ್ಲ. ನುಡಿದಂತೆ ನಡೆಯಲಿಲ್ಲ, ಸುಳ್ಳು ಹೇಳಿದ್ದಾರೆ. ಭಾವನಾತ್ಮಕ ವಿಷಯಗಳನ್ನ ಜನರ ಮುಂದೆ ಇಟ್ಟು ಧರ್ಮ ನಶೆ ಏರಿಸಿದ್ದಾರೆ. ರಾಜ್ಯ ಸರ್ಕಾರ ಕಳೆದ ಎರಡು ವರ್ಷದಿಂದ ಏನೂ ಮಾಡಿಲ್ಲ‌. ಭ್ರಷ್ಟಾಚಾರ ಮುಗಿಲುಮುಟ್ಟಿದೆ. ರಾಜ್ಯವನ್ನ ಲೂಟಿ ಮಾಡ್ತಾಯಿದ್ದಾರೆ. ಇದನ್ನ ಮುಚ್ಚಿಸುವ ಸಲುವಾಗಿ ಭಾವನಾತ್ಮಕ ವಿಷಯಗಳನ್ನ ಮುಂದಿಟ್ಟು ಜನರನ್ನ ಹಾದಿ ತಪ್ಪಿಸುತ್ತಿದ್ದಾರೆ ಎಂದರು.

ಹಿಜಾಬ್ ಇದೊಂದು ವಿಷಯವೇ ಅಲ್ಲ

ಹಿಜಾಬ್ ಬಹಳ ವರ್ಷಗಳಿಂದ ಮುಸ್ಲಿಂ ಯುವತಿಯವರು ಧರಿಸುತ್ತಿದ್ದಾರೆ. ಈಗ ಇದ್ದಕ್ಕಿದ್ದಂತೆ ಇದನ್ನ ವಿವಾದ ಮಾಡಿಬಿಟ್ಟರು ಹಿಂದುತ್ವ, ಹಾಗೂ‌ ಮತ ಕ್ರೋಢಿಕರಣಕ್ಕಾಗಿ ಈ ರೀ‌ತಿ‌ಮಾಡ್ತಾಯಿದ್ದಾರೆ. ನಾನು ಶಾಲಾ ದಿನಗಳಲ್ಲಿ ಕೇಸರಿ ಶಾಲು ನೋಡಿರಲಿಲ್ಲ. ಕೇಸರಿ ಶಾಲು ಹಾಕ್ಕೊಂಡು ಯಾರೂ ಬರ್ತಾಯಿರಲಿಲ್ಲ. ಸಂಘ ಪರಿವಾರದವರು ಕೇಸರಿ ಶಾಲು ಖರೀದಿಸಿ ವಿದ್ಯಾರ್ಥಿಗಳಿಗೆ ಹಂಚಿದ್ದಾರೆ . ರಾಜ್ಯದಲ್ಲಿ ಬೆಂಕಿ ಹಚ್ಚಿದ್ದಾರೆ. ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿ ಕಳುಹಿಸಿದವರು ಅವರೇ , ಬೇರೇಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗ್ತಿದೆ. ತನಿಖೆಯಾಗಲಿ, ಕೇಸರಿ ಶಾಲು ಹಾಕಿಸಿದವರು ಯಾರು ಎಂದರು.

ಹಿಜಾಬ್ ಅವರ ಧರ್ಮದ ಪ್ರಕಾರ ನಡೆದುಕೊಳ್ಳುತ್ತಿದ್ದಾರೆ. ಅವರ ಕುರಾನ್ ನ ಸಂಪ್ರದಾಯಯಂತೆ ಧರಿಸುತ್ತಿದ್ದಾರೆ. ಹಿಜಾಬ್ ಧರಿಸಿದರೆ ಏನು ತೊಂದರೆ, ಕಾಲೇಜಿನ ಪ್ರಿನ್ಸಿಪಲ್ ಅವರನ್ನ ಹೊರಗಡೆ ಹಾಕಿಸಿದ್ದಾರೆ. ಅವರನ್ನ ಕೂಡಲೇ ಅಮಾನತು ಮಾಡಬೇಕಿತ್ತು. ಮಕ್ಕಳಲ್ಲಿ ಧರ್ಮ, ಜಾತಿ ತುಂಬಿ, ಹಾಳು ಮಾಡುತ್ತಿರುವುದು ಬಿಜೆಪಿ, ಆರ್ ಎಸ್ ಎಸ್ ಇದು ದೇಶಕ್ಕೆ ಯಾವ ರೀತಿ ಅಪಾಯ ಆಗುತ್ತೆ ಎಂದು ಊಹಿಸಿಲ್ಲ
ರಾಷ್ಟ್ರ ಧ್ವಜ ಇಳಿಸಿ ಈ ಕೇಸರಿ ಧ್ವಜ ಹಾರಿಸಿದ್ದಾರೆ. ಓರ್ವ ಮಂತ್ರಿ, ಆ ಮಂತ್ರಿ ನಾಲಾಯಕ್ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೀನಿ ಅಂತ ಹೇಳಿದ್ದಾರೆ. ಇವರು ಸಾರ್ವಜನಿಕ ವಲಯದಲ್ಲಿ ಇರಲು ಯೋಗ್ಯರಲ್ಲ, ಇದನ್ನ ತೀವ್ರವಾಗಿ ಖಂಡಿಸುತ್ತೇನೆ. ಪ್ರತಿಯೊಬ್ಬರು ಸಂವಿಧಾನ ಓದಬೇಕು ಎಂದರು.

ಮೋದಿ ಹುಟ್ಟಿದ್ದೇ ಸ್ವಾತಂತ್ರ್ಯ ಬಂದ ನಂತರ, ಮೋದಿಗೆ ಇನ್ನೂ75  ವರ್ಷ ಆಗಿಲ್ಲ. ಅವರು ನೆಹರೂ ಕುಟುಂಬದ ಬಗ್ಗೆ ಮಾತನಾಡ್ತಾರೆ. ನೆಹರೂ ಒಂಬತ್ತು ವರ್ಷ ಜೈಲಿನಲ್ಲಿದ್ದರು. ದೇಶಕ್ಕಾಗಿ ಜೈಲಿಗೆ ಹೋದವರು ನೆಹರೂ. ಅಂಥವರ ಬಗ್ಗೆ ಇವರು ಲಘುವಾಗಿ‌ ಮಾತನಾಡ್ತಾರೆ. ಇವರು ಸ್ವಾತಂತ್ರ್ಯ ಕ್ಕಾಗಿ ಬಲಿಯಾಗಿದ್ದಾರಾ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿರುವುದು ಗಾಂಧಿ ನೇತೃತ್ವದ ಕಾಂಗ್ರೆಸ್ ದೇಶ ಇಂದು ಅಭಿವೃದ್ಧಿ ಆಗಿದ್ದರೆ ಅದಕ್ಕೆ ಕಾರಣ ಕಾಂಗ್ರೆಸ್ , ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ, ನಿನ್ನೆ ಮೋದಿ ಎಲ್ಲಾ ಸಂದರ್ಶನದಲ್ಲಿ ಎಲ್ಲೂ ಕೂಡ ದೇಶಕ್ಕಾಗಿ ಏನ್ ಮಾಡಿದ್ದೇವೆ ಎಂದು ಹೇಳಲಿಲ್ಲ. ಅವರು ಕಾಂಗ್ರೆಸ್ ಬಗ್ಗೆ ಹಾಗೂ ನೆಹರೂ ಕುಟುಂಬವನ್ನ ಟೀಕೆ ಮಾಡೋದಷ್ಟೆ ಮಾಡಿದ್ದಾರೆ. ಬರೀ ಸುಳ್ಳು ಹೇಳಿದ್ದಾರೆ ಎಂದರು.

ಎರಡು ಕೋಟಿ ಉದ್ಯೋಗ ಕೊಡ್ತೀವಿ ಅಂತ ಹೇಳಿದ್ದರು, ನೋಟ್ ಬ್ಯಾನ್ ಮಾಡಿದ್ದು, ಕಪ್ಪು ಹಣ ಹೋಗಲಾಡಿಸುವೆ ಎಂದು ಹೇಳಿದ್ದು,ಇವುಗಳ ಬಗ್ಗೆ ಮೋದಿ ಮಾತನಾಡಬೇಕಿತ್ತು ಆದರೆ ಇವುಗಳ ಬಗ್ಗೆ ಚಕಾರ ಎತ್ತಿಲ್ಲ‌. ದೇಶ ವಿನಾಶದ ಕಡೆ ಸಾಗುತ್ತಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂತಾರೆ ಇದೇನಾ ಸಬ್ ಕಾ ವಿಕಾಸ್ ಅಂದ್ರೆ. ದೇಶದಲ್ಲಿ ಅತ್ಯಹತ್ಯೆಗಳು ಹೆಚ್ಚಾಗುತ್ತಿವೆ. ಆತ್ಮಹತ್ಯೆ ಹೆಚ್ಚಾಗುತ್ತಿರುವುದು ಯಾಕೆ ಅಂತ ಉತ್ತರ ಕೊಡಬೇಕು ಅಲ್ಲವೇ. ದೇಶದ ಮೇಲೆ ಇಂದು ಸಾಲ ಹೆಚ್ಚಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದೇಶ ೫೩ ಲಕ್ಷದ ೧೧ ಸಾವಿರ ಕೋಟಿ ಸಾಲ ಇತ್ತು . ಮೋದಿ ನಂತರ ೧೩೫ ಲಕ್ಷದ ೮೭ ಸಾವಿರ ಕೋಟಿ ಸಾಲ ಇದೆ. ಮೋದಿ ದೇಶವನ್ನ ಹಾಳು ಮಾಡಿಬಿಟ್ಟರು. ನೀವಾಗಿ ನೀವೇ ರಾಜೀನಾಮೇ ಕೊಟ್ಟು ತೊಲಗಬೇಕು‌ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ತೊಲಗಲೇ ಬೇಕು
ಇದನ್ನೆಲ್ಲಾ ಯುವಕರು ಅರ್ಥ ಮಾಡಿಕೊಳ್ಳಬೇಕು. ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಮೋಸ ಮಾಡಿದ್ದಾರೆ. ಸರಿಯಾಗಿ ಯಾರಿಗೂ ಪರಿಹಾರ ನೀಡಿಲ್ಲ. ರೈತರ ವಿರುದ್ಧದ ಮೂರು ಕಾಯ್ದೆಗಳನ್ನ ತಂದರು. ಒಂದು ವರ್ಷ ರೈತರು ಹೋರಾಟ ಮಾಡಿದ್ರು ವಾಪಾಸ್ ಪಡೆಯಲಿಲ್ಲ.ಐದು ರಾಜ್ಯಗಳ ಚುನಾವಣೆ ಕಾರಣಕ್ಕೆ ಕಾಯ್ದೆಗಳನ್ನ ವಾಪಾಸ್ ಪಡೆದರು ಎಂದು ಕಿಡಿ ಕಾರಿದರು.

ಚುನಾವಣೆ ಸನಿಹದಲ್ಲಿದ್ದಾಗ ಹಿಜಾಬ್ ವಿಚಾರ ಎತ್ತಿದ್ದಾರೆ. ಯುವಕ, ಯುವತಿಯರ ಮಧ್ಯೆ ವಿಷ ಬೀಜ ಬಿತ್ತಿದ್ದಾರೆ. ಪ್ರಕರಣ ಕೋರ್ಟ್ ನಲ್ಲಿದೆ, ಹೆಚ್ಚಾಗಿ ಮಾತನಾಡುವುದಿಲ್ಲ.ಗುತ್ತಿಗೆದಾರರು ಮೋದಿಗೆ ಪತ್ರ ಬರೆಯುತ್ತಾರೆ. ೪೦% ಕಮೀಷನ್ ವಿಚಾರವಾಗಿ ಪತ್ರ ಬರೆಯುತ್ತಾರೆ. ಪತ್ರ ಬರೆದು ಆರು ತಿಂಗಳಾಗಿದೆ ಆದ್ರೆ ಇಲ್ಲಿಯವರೆಗೆ ಉತ್ತರ ಇಲ್ಲ‌. ನಾವು ತಿನ್ನಲ್ಲ, ತಿನ್ನೋರ್ನಾ ಬಿಡಲ್ಲ ಅಂತಾರೆ, ಬರೀ ಸುಳ್ಳು ಜಾತಿಯತೆ ಅನ್ನೋದು ಭ್ರಷ್ಟಾಚಾರಕ್ಕಿಂತ ಹೆಚ್ಚು ಅಪಾಯಕಾರಿ ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.