ಹಿಂದೂ-ಹಿಂದುತ್ವ ಒಂದೇ ನಾಣ್ಯದ ಎರಡು ಮುಖ : ವಿಪಕ್ಷಗಳ ವಿರುದ್ಧ ಸಿ.ಟಿ.ರವಿ ಕಿಡಿ

ಸೊರಬ ಬಿಜೆಪಿಯಲ್ಲಿ ಗೊಂದಲ? ; ಚುನಾವಣ ಸಮಯದಲ್ಲಿ ಸಾಮಾನ್ಯ ಎಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

Team Udayavani, Feb 6, 2023, 4:45 PM IST

CT RAVI 2

ಶಿವಮೊಗ್ಗ : ”ಹಿಂದೂ-ಹಿಂದುತ್ವ ಅನ್ನೋದು ಒಂದೇ ನಾಣ್ಯದ ಎರಡು ಮುಖ.ಸನಾತನ ಧರ್ಮ ಬೇರೆ ಅಲ್ಲ. ಹಿಂದೂ, ಹಿಂದುತ್ವ ಬೇರೆ ಅಲ್ಲ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ನೀಡಿದ್ದಾರೆ.

ಹಿಂದುತ್ವದ ಕುರಿತು ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸೊರಬದಲ್ಲಿ ಪ್ರತಿಕ್ರಿಯಿಸಿ , ಹಿಂದುತ್ವ ಎಲ್ಲವನ್ನೂ ಒಪ್ಪಿಕೊಳ್ಳುವಂತದ್ದು.ದೇವನೊಬ್ಬ ನಾಮ ಹಲವು ಎಂಬ ತತ್ವ ಹಿಂದುತ್ವದಲ್ಲಿದೆ. ಹಿಂದೂ ಎಲ್ಲಾರಲ್ಲೂ ಕೂಡ ಸಮಾನತೆ ಬಯಸುತ್ತಾನೆ. ಇವರು ಸಮಾನತೆಯನ್ನು ಬಯಸಲ್ಲ. ಜಾತಿ ಸಮಾನತೆ ಬಯಸಲ್ಲ. ಸಿದ್ದರಾಮಯ್ಯ ಹಿಂದುತ್ವ ಒಪ್ಪಲ್ಲ ಅಂದರೆ ಸಮಾನತೆ ಬೇಕಾಗಿಲ್ಲ ಎಂದು ಅರ್ಥ.ಅವರಿಗೆ ಜಾತೀಯತೆ, ಅಸ್ಪೃಶ್ಯತೆ ಬೇಕು.ಅದಕ್ಕಾಗಿಯೇ ಅವರು ಪರಮೇಶ್ವರ್ ಸೋಲಿಸುವ ಕೆಲಸ ಮಾಡಿದರು ಎಂದು ಕಿಡಿ ಕಾರಿದರು.

ಸಮಾನತೆ ಬಯಸದ ಅವರು ಹಿಂದುತ್ವ ಒಪ್ಪಿಕೊಳ್ಳದಿರುವುದು ಸರಿ ಇದೆ.ಜಾತಿ ಬೇಳೆ ಬೇಯಿಸುವ ರಾಜಕೀಯ ಮಾ ಡುತ್ತಿರುವುದು ಅವರ ಹೇಳಿಕೆಯಿಂದ ಸ್ಪಷ್ಟ ಎಂದರು.

ಸೊರಬದಲ್ಲಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಚುನಾವಣ ಸಮಯದಲ್ಲಿ ಇದು ಸಾಮಾನ್ಯ, ಎಲ್ಲವನ್ನು ಮೀರಿ, ಬಿಜೆಪಿ ಇಲ್ಲಿ ಗೆಲ್ಲುತ್ತದೆ. ರಾಜ್ಯ ಸಮಿತಿ ಚುನಾವಣೆಗೆ ಅಭ್ಯರ್ಥಿ ಪಟ್ಟಿ ಕಳುಹಿಸುತ್ತದೆ. ಟಿಕೆಟ್ ನೀಡುವ ಬಗ್ಗೆ ಪಾರ್ಲಿಮೆಂಟ್ರಿ ಬೋರ್ಡ್ ನಿರ್ಧಾರ ಮಾಡುತ್ತದೆ. ನಮ್ಮದು ಜೆಡಿಎಸ್ ರೀತಿ ಫ್ಯಾಮಿಲಿ ಶೋ ಅಲ್ಲ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಬ್ರಾಹ್ಮಣ ಸಮುದಾಯದ ಕುರಿತು ಮಾಜಿ ಸಿಎಂ ಹೆಚ್ ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ಬೆಂಬಲ ನೋಡಿ ಕುಮಾರಸ್ವಾಮಿಗೆ ಹತಾಶೆ ಆಗಿದೆ. ಕಳೆದ ಬಾರಿ ಹಾಸನದಲ್ಲಿ ಗೆದ್ದಿದ್ದೇ ಅವರಿಗೆ ಅರಗಿಸಿಕೊಳ್ಳಲಾಗಲಿಲ್ಲ.ಈ ಬಾರಿ ಇನ್ನೂ ನಾಲ್ಕು ಸ್ಥಾನ ಗೆಲ್ಲುತ್ತೇ ಅನ್ನುವ ವರದಿ ಅವರಿಗೆ ಸಿಕ್ಕಿದೆ. ಹಾಸನದಲ್ಲೂ ಈ ಬಾರಿ 7 ರಲ್ಲಿ 5 ಕ್ಷೇತ್ರ ಗೆಲ್ಲುತ್ತೇವೆ. ಹೀಗಾಗಿ ನಿರಾಶೆಯಿಂದ ಮಾತನಾಡುತ್ತಿದ್ದಾರೆ ಎಂದರು.

ಸಾಮಾನ್ಯ ಕಾರ್ಯಕರ್ತನಿಗೂ ಸಿಎಂ, ಪಿಎಂ ಆಗುವ ಯೋಗ್ಯತೆ ಇದೆ. ಚಹಾ ಮಾರುವ ಮೋದಿ ಪ್ರಧಾನಿ, ರೈತನ ಮಗ ಯಡಿಯೂರಪ್ಪ ಸಿಎಂ ಆದರು. ಆದರೆ ಅವರ ಪಕ್ಷದಲ್ಲಿ ಹಾಗೇ ಇಲ್ಲ.ಹಾಸನ ಅಂದರೇ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗಬೇಕು. ಎಂಎಲ್ಸಿ ಟಿಕೆಟ್ ಸೂರಜ್, ಎಂಪಿ ಟಿಕೆಟ್ ಬೇಕು ಅಂದರೆ ಪ್ರಜ್ವಲ್ ರೇವಣ್ಣರಿಗೆ ಕೊಡಬೇಕು. ರಾಮನಗರ ಬಿಟ್ಟು ಕೊಡಲು ಅನಿತಾ ಕುಮಾರಸ್ವಾಮಿ ಅವರಿಗೆ ಯೋಗ್ಯತೆ ಇರೋದು, ಬಿಟ್ಟು ಕೊಟ್ಟರೂ ನಿಖಿಲ್ ಕುಮಾರಸ್ವಾಮಿ ಅವರಿಗೆ ಮಾತ್ರ.ಮತ್ತೆ ಅದನ್ನೆಲ್ಲಾ ಕರಿಯೋದು ತ್ಯಾಗ ಎಂದು. ಅವರ ಪಕ್ಷದಲ್ಲಿ ದೊಡ್ಡಗೌಡ್ರು, ಸಣ್ಣಗೌಡ್ರು, ಮರೀಗೌಡ್ರಿಗೆ ಮಾತ್ರ ಅವಕಾಶ ಇರುವುದು ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.