ಪಂಜಾಬ್: ಅಮೃತ್ ಸರ್ ನಲ್ಲಿ ಹಾಡಹಗಲೇ ಶಿವಸೇನಾ ಮುಖಂಡ ಗುಂಡೇಟಿಗೆ ಬಲಿ
ದಾಳಿಕೋರ ಸುಧೀರ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಆಸ್ಪತ್ರೆಗೆ ಕೊಂಡೊಯ್ದಿದ್ದರು.
Team Udayavani, Nov 4, 2022, 5:14 PM IST
ಅಮೃತ್ ಸರ್(ಪಂಜಾಬ್): ಆಡಳಿತ ಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ದೇವಾಲಯದ ಹೊರಭಾಗದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಲಪಂಥೀಯ ಸಂಘಟನೆಯ(ಶಿವಸೇನಾ) ಮುಖಂಡ ಸುಧೀರ್ ಸೂರಿ ಎಂಬವರನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಶುಕ್ರವಾರ (ನವೆಂಬರ್ 04) ನಡೆದಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ಒಬ್ಬ ಪರದೇಶಿ ಗಿರಾಕಿ: ಏಕವಚನದಲ್ಲೇ ವ್ಯಂಗ್ಯವಾಡಿದ ಶ್ರೀರಾಮುಲು
ಸ್ಥಳೀಯ ಅಂಗಡಿಯಾತ ಸುಧೀರ್ ಸೂರಿ ಅವರ ಮೇಲೆ ಐದು ಬಾರಿ ಗುಂಡಿನ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ. ಸೂರಿಗೆ ಪೊಲೀಸ್ ಭದ್ರತೆ ಕಲ್ಪಿಸಿದ್ದರೂ ಕೂಡಾ ದಾಳಿಕೋರ ಸುಧೀರ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಆದರೆ ಮಾರ್ಗ ಮಧ್ಯದಲ್ಲಿಯೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ಆರೋಪಿ ಸಂದೀಪ್ ಸಿಂಗ್ ಎಂಬಾತನನ್ನು ಕೂಡಲೇ ಬಂಧಿಸಲಾಗಿದ್ದು, ಆತನ ದಾಳಿಗೆ ಉಪಯೋಗಿಸಿದ್ದ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿರುವುದಾಗಿ ಸ್ಥಳೀಯ ಪೊಲೀಸ್ ಕಮಿಷನರ್ ತಿಳಿಸಿದ್ದು, ಈವರೆಗೆ ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ ಎಂದು ವರದಿ ಹೇಳಿದೆ.
ಮೂಲಗಳ ಪ್ರಕಾರ, ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿಕೋರ ಸಿಂಗ್ ಹಾಗೂ ಇತರ ಮೂವರು ವ್ಯಕ್ತಿಗಳ ಜತೆ ಎಸ್ ಯುವಿ ಕಾರಿನಲ್ಲಿ ಆಗಮಿಸಿದ್ದರು. ಶೂಟೌಟ್ ಬಳಿಕ ಮೂವರು ಕಾರಿನಲ್ಲಿ ಪರಾರಿಯಾಗಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು