ಅಳಿದು ಹೋದ ಐತಿಹಾಸಿಕ ಮಲ್ಲಾರು ಕೋಟೆ !


Team Udayavani, Apr 21, 2021, 6:00 AM IST

ಅಳಿದು ಹೋದ ಐತಿಹಾಸಿಕ ಮಲ್ಲಾರು ಕೋಟೆ !

ಕಾಪು: ಸರಕಾರ, ಜಿಲ್ಲಾಡಳಿತ, ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ಪುರಾತತ್ವ ಇಲಾಖೆಯ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ನಂದಾವರ ಮತ್ತು ಉದ್ಯಾವರ ಅರಮನೆ – ಕೋಟೆಯ ರೀತಿಯಲ್ಲೇ ಕಾಪು ತಾಲೂಕಿನ ಐತಿಹಾಸಿಕ ಮಲ್ಲಾರು ಕೋಟೆಯೂ ಕೂಡ ಅಳಿದು ಹೋಗಿದೆ. ಅದರೊಂದಿಗೆ ಮಲ್ಲಾರು ಕೋಟೆ ಪ್ರದೇಶದಲ್ಲಿ ಐತಿಹಾಸಿಕ ಕುರುಹಾಗಿರುವ ನಿನ್ನಿಕೆರೆ/ನಂದಿಕೆರೆಗೂ ನಾಶದ ಭೀತಿ ಎದುರಾಗಿದೆ.

ವಿಜಯನಗರ ಅರಸರ ಕಾಲದ್ದು
ವಿಜಯನಗರ ರಾಜರ ಆಡಳಿತ ಕಾಲದ್ದು ಎನ್ನಲಾಗುತ್ತಿದ್ದ ಮಲ್ಲಾರುವಿನ ಕೋಟೆ ಹದಿನಾರು ಎಕರೆಗೂ ಅಧಿಕ ಸ್ಥಳದಲ್ಲಿ ವ್ಯಾಪಿಸಿತ್ತು. ಈಗ ಕೋಟೆ ಕಲ್ಲುಗಳೂ ಕಾಣಿಸುತ್ತಿಲ್ಲ. ಇಲ್ಲಿನ ದಿಬ್ಬಗಳನ್ನು ನೆಲ ಸಮಗೊಳಿಸಲಾಗಿದ್ದು, ಐತಿಹಾಸಿಕ ವಸ್ತುಗಳೂ ನಾಶ ವಾಗಿವೆ. ಈಗ ಕೆರೆಯ ಕುರುಹು ಮಾತ್ರ ಕಾಣುತ್ತಿದೆ.

ಶಾಲಿವಾಹನ ಶಕ 1665ನೇ ರುಧಿರೋದ್ಗಾರಿ ಸಂವತ್ಸರದಲ್ಲಿ ಕಾಪುವಿನ ಮರ್ದ ಹೆಗ್ಗಡೆ ಮಲ್ಲಾರಿನ ಕೋಟೆಯನ್ನು ಪುನರ್‌ ನಿರ್ಮಿಸಿದ ಬಗ್ಗೆ ಮತ್ತು ಕಾಪು ಕಡಲ ಕಿನಾರೆಯಲ್ಲಿರುವ ಬೃಹತ್‌ ಬಂಡೆಯ ಮೇಲೆ ಇನ್ನೊಂದು ಕೋಟೆ (ಮನೋಹರ ಗಢ) ಕಟ್ಟಿಸಿದ ಬಗ್ಗೆ ಇತಿಹಾಸಕಾರರಾದ ಎಂ. ಗಣಪತಿ ರಾವ್‌ ಐಗಳ್‌ ಅವರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸ ಗ್ರಂಥದಲ್ಲಿ ಉಲ್ಲೇಖವಿದೆ.

ಖಡ್ಗ ಹೊರತಾಗಿ ಉಳಿದಿರುವುದು ನಂದಿಕೆರೆ ಅಥವಾ ನಿನ್ನಿಕೆರೆ. ಈ ಕೆರೆಯನ್ನು ಪ್ರಸ್ತುತ ಪೂರ್ಣವಾಗಿ ಗಿಡಗಂಟಿ ಆವರಿಸಿದೆ ಇಲ್ಲೊಂದು ಕೆರೆ ಇದೆ ಎನ್ನುವುದನ್ನು ಯಾರೂ ಊಹಿಸಲೂ ಸಾಧ್ಯವಿಲ್ಲದಂತಾಗಿದೆ.

ಮಾಯವಾದ ಪ್ರವಾಸಿ ಸ್ಥಳ
ಕಳೆದ ನಾಲ್ಕೈದು ದಶಕದ ಹಿಂದಿನವರೆಗೂ ಕೆಲವು ಶಾಲೆಗಳ ಶಿಕ್ಷಕರು ಮಕ್ಕಳನ್ನು ಇಲ್ಲಿಗೆ ಕರೆದುಕೊಂಡು ಬಂದು ಈ ಕೋಟೆಯನ್ನು ತೋರಿಸುತ್ತಿದ್ದರು ಎಂಬ ವಿಷಯವನ್ನು ಗ್ರಾಮದ ಹಿರಿಯರು ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ. ಕಾಪು ಪುರಸಭೆ, ಉಡುಪಿ ಜಿಲ್ಲಾಡಳಿತ, ಪುರಾತತ್ವ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಕೋಟೆಯ ಭಾಗಗಳು, ನಂದಿಕೆರೆಯನ್ನು ಪುನರುಜ್ಜೀವನಗೊಳಿಸಬೇಕಾಗಿದೆ.

ಖಡ್ಗಕ್ಕೆ ಕೋಟೆಮನೆಯಲ್ಲಿ ಪೂಜೆ
1740ರ ದಶಕದ ಅವಧಿಯಲ್ಲಿ ಕೆಳದಿ ಸಂಸ್ಥಾನದ ಅಧೀನಕ್ಕೆ ಒಳಪಟ್ಟ ಬಳಿಕ, ಮಲ್ಲಾರಿನ ಕೋಟೆಯು ಬಸಪ್ಪ ನಾಯಕನ ಆಡಳಿತದಲ್ಲಿದ್ದರೆ, ಆನಂತರ ಟಿಪ್ಪುವಿನ ಆಡಳಿತಕ್ಕೆ ಒಳಪಟ್ಟಿತ್ತು. ಬಳಿಕ ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿತು. ಟಿಪ್ಪು ಕಾಲದ ಖಡ್ಗವೊಂದು ಇಂದಿಗೂ ಉಳಿದಿದ್ದು, ಇದು ಕೋಟೆ ಬಳಿಯ ಕಾಪು ಶ್ರೀ ಮಾರಿಯಮ್ಮ ದೇವಿಯ ಆದಿಸ್ಥಳ (ತ್ರಿಶಕ್ತಿ ಸನ್ನಿಧಿ)ದ ಮನೆಯಲ್ಲಿ ಕೋಟೆ ಮಾರಿಯೊಂದಿಗೆ ಗುಡಿಯಲ್ಲಿದೆ. ಇದಕ್ಕೆ ಆಯುಧ ಪೂಜೆಯ ದಿನದಂದು ಪೂಜೆ ನಡೆಸಲಾಗುತ್ತಿದೆ.

ಪುನರುತ್ಥಾನಕ್ಕೆ ಪ್ರಯತ್ನಿಸಿ
ಮಲ್ಲಾರು ಕೋಟೆಗೆ ಸಂಬಂಧಪಟ್ಟ ಜಮೀನು ಈಗ ಅನ್ಯರ ಪಾಲಾಗಿದೆ. ಇಲ್ಲಿನ ಪುರಾತನ ನಂದಿಕೆರೆ ಪುನರುತ್ಥಾನಕ್ಕೆ ಸ್ಥಳೀಯಾಡಳಿತ ಸಂಸ್ಥೆ ಯೋಜನೆ ರೂಪಿಸಬೇಕಿದೆ.
-ದಯಾನಂದ ಸೇರ್ವೆಗಾರ್‌ ಕೋಟೆಮನೆ, ಕಾಪು ಹಳೇ ಮಾರಿಗುಡಿ ದರ್ಶನ ಪಾತ್ರಿ

ಉಳಿವಿಗೆ ಯತ್ನ
ಕಾಪುವಿನ ಐತಿಹಾಸಿಕ ನಂದಿಕೆರೆ ಸರಕಾರಿ ಜಾಗದಲ್ಲಿ ಇದೆಯೋ ಅಥವಾ ಖಾಸಗಿ ಜಾಗದಲ್ಲಿದೆಯೋ ಎನ್ನುವುದರ ಬಗ್ಗೆ ಕಡತಗಳಲ್ಲಿ ಪರಿಶೀಲಿಸಿ ತಿಳಿದುಕೊಳ್ಳಬೇಕಿದೆ. ಸರಕಾರಿ ಕೆರೆಯಾಗಿದ್ದರೆ ಮುತುವರ್ಜಿ ವಹಿಸಿ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುವುದು. ಅದೇ ರೀತಿಯಲ್ಲಿ ಕೌನ್ಸಿಲ್‌ನ ಸಹಕಾರದೊಂದಿಗೆ ಕಾಪುವಿನ ಐತಿಹಾಸಿಕ ಪ್ರದೇಶಗಳನ್ನು ಉಳಿಸಿಕೊಳ್ಳಲೂ ಪ್ರಯತ್ನಿಸುತ್ತೇವೆ.
-ವೆಂಕಟೇಶ ನಾವಡ , ಮುಖ್ಯಾಧಿಕಾರಿ, ಕಾಪು ಪುರಸಭೆ

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.