ಅಳಿದು ಹೋದ ಐತಿಹಾಸಿಕ ಮಲ್ಲಾರು ಕೋಟೆ !


Team Udayavani, Apr 21, 2021, 6:00 AM IST

ಅಳಿದು ಹೋದ ಐತಿಹಾಸಿಕ ಮಲ್ಲಾರು ಕೋಟೆ !

ಕಾಪು: ಸರಕಾರ, ಜಿಲ್ಲಾಡಳಿತ, ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ಪುರಾತತ್ವ ಇಲಾಖೆಯ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ನಂದಾವರ ಮತ್ತು ಉದ್ಯಾವರ ಅರಮನೆ – ಕೋಟೆಯ ರೀತಿಯಲ್ಲೇ ಕಾಪು ತಾಲೂಕಿನ ಐತಿಹಾಸಿಕ ಮಲ್ಲಾರು ಕೋಟೆಯೂ ಕೂಡ ಅಳಿದು ಹೋಗಿದೆ. ಅದರೊಂದಿಗೆ ಮಲ್ಲಾರು ಕೋಟೆ ಪ್ರದೇಶದಲ್ಲಿ ಐತಿಹಾಸಿಕ ಕುರುಹಾಗಿರುವ ನಿನ್ನಿಕೆರೆ/ನಂದಿಕೆರೆಗೂ ನಾಶದ ಭೀತಿ ಎದುರಾಗಿದೆ.

ವಿಜಯನಗರ ಅರಸರ ಕಾಲದ್ದು
ವಿಜಯನಗರ ರಾಜರ ಆಡಳಿತ ಕಾಲದ್ದು ಎನ್ನಲಾಗುತ್ತಿದ್ದ ಮಲ್ಲಾರುವಿನ ಕೋಟೆ ಹದಿನಾರು ಎಕರೆಗೂ ಅಧಿಕ ಸ್ಥಳದಲ್ಲಿ ವ್ಯಾಪಿಸಿತ್ತು. ಈಗ ಕೋಟೆ ಕಲ್ಲುಗಳೂ ಕಾಣಿಸುತ್ತಿಲ್ಲ. ಇಲ್ಲಿನ ದಿಬ್ಬಗಳನ್ನು ನೆಲ ಸಮಗೊಳಿಸಲಾಗಿದ್ದು, ಐತಿಹಾಸಿಕ ವಸ್ತುಗಳೂ ನಾಶ ವಾಗಿವೆ. ಈಗ ಕೆರೆಯ ಕುರುಹು ಮಾತ್ರ ಕಾಣುತ್ತಿದೆ.

ಶಾಲಿವಾಹನ ಶಕ 1665ನೇ ರುಧಿರೋದ್ಗಾರಿ ಸಂವತ್ಸರದಲ್ಲಿ ಕಾಪುವಿನ ಮರ್ದ ಹೆಗ್ಗಡೆ ಮಲ್ಲಾರಿನ ಕೋಟೆಯನ್ನು ಪುನರ್‌ ನಿರ್ಮಿಸಿದ ಬಗ್ಗೆ ಮತ್ತು ಕಾಪು ಕಡಲ ಕಿನಾರೆಯಲ್ಲಿರುವ ಬೃಹತ್‌ ಬಂಡೆಯ ಮೇಲೆ ಇನ್ನೊಂದು ಕೋಟೆ (ಮನೋಹರ ಗಢ) ಕಟ್ಟಿಸಿದ ಬಗ್ಗೆ ಇತಿಹಾಸಕಾರರಾದ ಎಂ. ಗಣಪತಿ ರಾವ್‌ ಐಗಳ್‌ ಅವರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸ ಗ್ರಂಥದಲ್ಲಿ ಉಲ್ಲೇಖವಿದೆ.

ಖಡ್ಗ ಹೊರತಾಗಿ ಉಳಿದಿರುವುದು ನಂದಿಕೆರೆ ಅಥವಾ ನಿನ್ನಿಕೆರೆ. ಈ ಕೆರೆಯನ್ನು ಪ್ರಸ್ತುತ ಪೂರ್ಣವಾಗಿ ಗಿಡಗಂಟಿ ಆವರಿಸಿದೆ ಇಲ್ಲೊಂದು ಕೆರೆ ಇದೆ ಎನ್ನುವುದನ್ನು ಯಾರೂ ಊಹಿಸಲೂ ಸಾಧ್ಯವಿಲ್ಲದಂತಾಗಿದೆ.

ಮಾಯವಾದ ಪ್ರವಾಸಿ ಸ್ಥಳ
ಕಳೆದ ನಾಲ್ಕೈದು ದಶಕದ ಹಿಂದಿನವರೆಗೂ ಕೆಲವು ಶಾಲೆಗಳ ಶಿಕ್ಷಕರು ಮಕ್ಕಳನ್ನು ಇಲ್ಲಿಗೆ ಕರೆದುಕೊಂಡು ಬಂದು ಈ ಕೋಟೆಯನ್ನು ತೋರಿಸುತ್ತಿದ್ದರು ಎಂಬ ವಿಷಯವನ್ನು ಗ್ರಾಮದ ಹಿರಿಯರು ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ. ಕಾಪು ಪುರಸಭೆ, ಉಡುಪಿ ಜಿಲ್ಲಾಡಳಿತ, ಪುರಾತತ್ವ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಕೋಟೆಯ ಭಾಗಗಳು, ನಂದಿಕೆರೆಯನ್ನು ಪುನರುಜ್ಜೀವನಗೊಳಿಸಬೇಕಾಗಿದೆ.

ಖಡ್ಗಕ್ಕೆ ಕೋಟೆಮನೆಯಲ್ಲಿ ಪೂಜೆ
1740ರ ದಶಕದ ಅವಧಿಯಲ್ಲಿ ಕೆಳದಿ ಸಂಸ್ಥಾನದ ಅಧೀನಕ್ಕೆ ಒಳಪಟ್ಟ ಬಳಿಕ, ಮಲ್ಲಾರಿನ ಕೋಟೆಯು ಬಸಪ್ಪ ನಾಯಕನ ಆಡಳಿತದಲ್ಲಿದ್ದರೆ, ಆನಂತರ ಟಿಪ್ಪುವಿನ ಆಡಳಿತಕ್ಕೆ ಒಳಪಟ್ಟಿತ್ತು. ಬಳಿಕ ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿತು. ಟಿಪ್ಪು ಕಾಲದ ಖಡ್ಗವೊಂದು ಇಂದಿಗೂ ಉಳಿದಿದ್ದು, ಇದು ಕೋಟೆ ಬಳಿಯ ಕಾಪು ಶ್ರೀ ಮಾರಿಯಮ್ಮ ದೇವಿಯ ಆದಿಸ್ಥಳ (ತ್ರಿಶಕ್ತಿ ಸನ್ನಿಧಿ)ದ ಮನೆಯಲ್ಲಿ ಕೋಟೆ ಮಾರಿಯೊಂದಿಗೆ ಗುಡಿಯಲ್ಲಿದೆ. ಇದಕ್ಕೆ ಆಯುಧ ಪೂಜೆಯ ದಿನದಂದು ಪೂಜೆ ನಡೆಸಲಾಗುತ್ತಿದೆ.

ಪುನರುತ್ಥಾನಕ್ಕೆ ಪ್ರಯತ್ನಿಸಿ
ಮಲ್ಲಾರು ಕೋಟೆಗೆ ಸಂಬಂಧಪಟ್ಟ ಜಮೀನು ಈಗ ಅನ್ಯರ ಪಾಲಾಗಿದೆ. ಇಲ್ಲಿನ ಪುರಾತನ ನಂದಿಕೆರೆ ಪುನರುತ್ಥಾನಕ್ಕೆ ಸ್ಥಳೀಯಾಡಳಿತ ಸಂಸ್ಥೆ ಯೋಜನೆ ರೂಪಿಸಬೇಕಿದೆ.
-ದಯಾನಂದ ಸೇರ್ವೆಗಾರ್‌ ಕೋಟೆಮನೆ, ಕಾಪು ಹಳೇ ಮಾರಿಗುಡಿ ದರ್ಶನ ಪಾತ್ರಿ

ಉಳಿವಿಗೆ ಯತ್ನ
ಕಾಪುವಿನ ಐತಿಹಾಸಿಕ ನಂದಿಕೆರೆ ಸರಕಾರಿ ಜಾಗದಲ್ಲಿ ಇದೆಯೋ ಅಥವಾ ಖಾಸಗಿ ಜಾಗದಲ್ಲಿದೆಯೋ ಎನ್ನುವುದರ ಬಗ್ಗೆ ಕಡತಗಳಲ್ಲಿ ಪರಿಶೀಲಿಸಿ ತಿಳಿದುಕೊಳ್ಳಬೇಕಿದೆ. ಸರಕಾರಿ ಕೆರೆಯಾಗಿದ್ದರೆ ಮುತುವರ್ಜಿ ವಹಿಸಿ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುವುದು. ಅದೇ ರೀತಿಯಲ್ಲಿ ಕೌನ್ಸಿಲ್‌ನ ಸಹಕಾರದೊಂದಿಗೆ ಕಾಪುವಿನ ಐತಿಹಾಸಿಕ ಪ್ರದೇಶಗಳನ್ನು ಉಳಿಸಿಕೊಳ್ಳಲೂ ಪ್ರಯತ್ನಿಸುತ್ತೇವೆ.
-ವೆಂಕಟೇಶ ನಾವಡ , ಮುಖ್ಯಾಧಿಕಾರಿ, ಕಾಪು ಪುರಸಭೆ

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.