ಸದ್ಯಕ್ಕೆ ಎಸ್ಮಾ ಜಾರಿ ಇಲ್ಲ; ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ: ಗೃಹ ಸಚಿವರ ಮನವಿ
Team Udayavani, Dec 12, 2020, 3:52 PM IST
ಬೆಂಗಳೂರು : ನಷ್ಟದ ಸಂದರ್ಭದಲ್ಲಿ ಸರಕಾರ ನೌಕರರ ಪರವಾಗಿತ್ತು ಈಗಲೂ ನೌಕರರ ಪರವಾಗಿದೆ ಕೋವಿಡ್ ಕಾಲದಲ್ಲಿ ನೌಕರರ ಬೇಡಿಕೆ ಈಡೇರಿಸುವುದು ಕಷ್ಟದ ಕೆಲಸ ಮೊದಲು ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಭಟನಾ ನಿರತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸಿಎಂ ಸರಕಾರಿ ನಿವಾಸ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರಕಾರ ಯಾವತ್ತೂ ನೌಕರರ ಕಷ್ಟದ ಜೊತೆಗೆ ಇದೆ ಅಲ್ಲದೆ ಸಾರಿಗೆ ಸಚಿವರು ಈ ವಿಚಾರದಲ್ಲಿ ನಿರ್ಲಕ್ಷ ತೋರಿಲ್ಲ ಬೆಳಿಗ್ಗೆಯಿಂದಲೇ ನಿರಂತರವಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದಾರೆ, ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ ಬಹುತೇಕ ನೌಕರರು ಗೈರಾಗಿದ್ದರೆ ಎಂದರು.
ಸಾರಿಗೆ ನೌಕರರು ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ ಆದರೆ ಕೆಲವರು ಈಗ ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿರಬಹುದು ಎಸ್ಮಾ ಜಾರಿಯ ಪರಿಸ್ಥಿತಿ ಇನ್ನೂ ಬಂದಿಲ್ಲ, ನೌಕರರರಿಗೂ ಜನರ ಕಷ್ಟ ಏನೆಂದು ಗೊತ್ತಾಗಿದೆ, ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.
ಇದನ್ನೂ ಓದಿ:ಕೊಡಪಾನದ ಒಳಗೆ ಮೂಗು ತೂರಿಸಲು ಹೋಗಿ ತಲೆ ಸಿಲುಕಿಕೊಂಡು ಒದ್ದಾಡಿದ ಬೀದಿ ನಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ