ಹೋ ಮಿಯೋಪತಿ : ಸುರಕ್ಷಿತ, ಪರಿಣಾಮಕಾರಿ ಪರ್ಯಾಯ ವೈದ್ಯಕೀಯ ಪದ್ಧತಿ


Team Udayavani, Apr 10, 2021, 6:30 AM IST

ಹೋ ಮಿಯೋಪತಿ : ಸುರಕ್ಷಿತ, ಪರಿಣಾಮಕಾರಿ ಪರ್ಯಾಯ ವೈದ್ಯಕೀಯ ಪದ್ಧತಿ

ಹೋಮಿಯೋಪತಿ ವೈದ್ಯಕೀಯ ಪದ್ಧತಿಯ ಸ್ಥಾಪಕ ಜರ್ಮನ್‌ ತಜ್ಞ ಡಾ| ಕ್ರಿಶ್ಚಿಯನ್‌ ಫ್ರೆಡ್ರಿಚ್‌ ಸ್ಯಾಮುವೆಲ್‌
ಹೆನ್‌ಮೆನ್‌ 1755ರ ಎಪ್ರಿಲ್‌ 10ರಂದು ಜನಿಸಿದರು. ಇವರ ಸವಿನೆನಪಿನಲ್ಲಿ ವೈದ್ಯಕೀಯ ಜಗತ್ತಿಗೆ ಹೋಮಿಯೋಪತಿ ನೀಡಿದ ಕೊಡುಗೆಯನ್ನು ಸ್ಮರಿಸಿಕೊಳ್ಳಲು ಹಾಗೂ ಹೋಮಿಯೋಪತಿಯ ಕುರಿತಂತೆ ಜನರಲ್ಲಿ ಅರಿವು ಮೂಡಿಸಲು ಪ್ರತೀ ವರ್ಷ
ಹೆನ್‌ಮೆನ್‌ ಅವರ ಜನ್ಮದಿನವನ್ನು ವಿಶ್ವ ಹೋಮಿಯೋಪತಿ ದಿನವನ್ನಾಗಿ ಆಚರಿಸಲಾಗುತ್ತದೆ.

ಜರ್ಮನಿಯ ಚಿಕಿತ್ಸಾ ವಿಧಾನವಾಗಿರುವ ಹೋಮಿಯೋಪತಿಯು ಇಂದು ವಿಶ್ವದೆಲ್ಲೆಡೆಯಲ್ಲಿ ಅತೀ ವೇಗವಾಗಿ ಜನಪ್ರಿಯವಾಗುತ್ತಿರುವ ವೈದ್ಯಕೀಯ ಚಿಕಿತ್ಸಾ ಪದ್ಧತಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ವಿಶ್ವದಲ್ಲಿ ಹೋಮಿಯೋಪತಿ ಪದ್ಧತಿಯ ಬಳಕೆಯು ಎರಡನೇ ಸ್ಥಾನದಲ್ಲಿದೆ. ಈ ವೈದ್ಯಕೀಯ ಚಿಕಿತ್ಸಾ ಪದ್ಧತಿಯು ಇಂದು ಭಾರತದಲ್ಲಿ ಜನಪ್ರಿಯವಾಗಿದೆ.

ವ್ಯಕ್ತಿಕೇಂದ್ರಿತ ಚಿಕಿತ್ಸೆ
ಈ ಚಿಕಿತ್ಸೆಯಲ್ಲಿ ರೋಗಿಯ ಒಟ್ಟಾರೆ ಆರೋಗ್ಯವನ್ನು ಪರಿಶೀಲಿಸಿದ ಬಳಿಕ ಚಿಕಿತ್ಸೆಯನ್ನು ವೈದ್ಯರು ಸೂಚಿಸುತ್ತಾರೆ. ಹವಾಮಾನ ಪರಿಸ್ಥಿತಿ, ರೋಗಿಯನ್ನು ಬಾಧಿಸುತ್ತಿರುವ ಅಲರ್ಜಿ, ಒತ್ತಡದ ಅಂಶಗಳು, ಆಹಾರ ಪದ್ಧತಿ ಮತ್ತು ಜೀವನ ಶೈಲಿಯನ್ನು ಗಮನದಲ್ಲಿಟ್ಟುಕೊಂಡು ಔಷಧವನ್ನು ಪ್ರತ್ಯೇಕವಾಗಿ ತಯಾರಿಸಲಾಗುತ್ತದೆ.

ಅಡ್ಡ ಪರಿಣಾಮಗಳಿಲ್ಲ
ಔಷಧಗಳನ್ನು ನೈಸರ್ಗಿಕ ವಸ್ತುಗಳಿಂದ ತಯಾರಿಸಲಾಗುವುದರಿಂದ ಇವು ಅಡ್ಡಪರಿಣಾಮಗಳಿಂದ ಮುಕ್ತವಾಗಿವೆ. ಈ ಔಷಧಗಳನ್ನು ಚಿಕ್ಕ ಪ್ರಮಾಣದಿಂದ ಆರಂಭಿಸಿ ಬಳಿಕ ಅಗತ್ಯವಿದ್ದಲ್ಲಿ ಮಾತ್ರವೇ ಹಂತಹಂತವಾಗಿ ಹೆಚ್ಚಿಸಲಾಗುತ್ತದೆ. ಇದರಿಂದಾಗಿ ಚಿಕಿತ್ಸೆಯು ನಿಧಾನವಾಗಿ ಫ‌ಲ ನೀಡುತ್ತದೆ. ಈ ಚಿಕಿತ್ಸೆಯನ್ನು ಯಾವುದೇ ವಯಸ್ಸಿನ ವ್ಯಕ್ತಿಗಳು, ಗರ್ಭಾವಸ್ಥೆ, ದೀರ್ಘ‌ಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಕೂಡ ಪಡೆಯಬಹುದು. ಈ ಔಷಧವು ಬೇರೆ ಔಷಧಗಳ ಜತೆಗೆ ಬೆರೆಯುವುದಿಲ್ಲ. ಇದರಿಂದಾಗಿ ನೀವು ಬೇರೆ ಔಷಧಗಳನ್ನು ಸೇವಿಸುತ್ತಿದ್ದರೂ ಹೋಮಿಯೋಪತಿ ಔಷಧಗಳನ್ನು ಸೇವಿಸಲು ಯಾವುದೇ ಅಡ್ಡಿಯಿಲ್ಲ.

ಏನಿದು ಹೋಮಿಯೋಪತಿ ಚಿಕಿತ್ಸಾ ಪದ್ಧತಿ?
ಮಾನವ ದೇಹ ತನ್ನನ್ನು ತಾನೇ ಸರಿಪಡಿಸಿಕೊಳ್ಳುವ ವಿಶಿಷ್ಟ ಶಕ್ತಿಯನ್ನು ಹೊಂದಿದೆ. ದೇಹದಲ್ಲಿನ ಈ ನೈಸರ್ಗಿಕ ರೋಗ ನಿರೋಧಕ ಶಕ್ತಿಯನ್ನೇ ಬಳಸಿಕೊಂಡು ಚಿಕಿತ್ಸೆ ನೀಡುವ ಪದ್ದತಿಯೇ ಹೋಮಿಯೋಪತಿ. ಈ ಚಿಕಿತ್ಸಾ ಪದ್ಧತಿ ತುಂಬಾ ಸರಳ, ಕಡಿಮೆ ವೆಚ್ಚ, ಸುರಕ್ಷಿತ ಹಾಗೂ ಪರಿಣಾಮಕಾರಿಯಾದುದಾಗಿದೆ. ಯಾವುದೇ ತೆರನಾದ ರೋಗಗಳಿಗೆ ಈ ಪದ್ಧತಿಯಲ್ಲಿ ಚಿಕಿತ್ಸೆ ನೀಡುವಾಗ ಕೃತಕ ರಾಸಾಯನಿಕಗಳನು ಬಳಸಲಾಗುವುದಿಲ್ಲ.

ಸುಲಭಸಾಧ್ಯ ಔಷಧಗಳು
ಹೋಮಿಯೋಪತಿ ಔಷಧಗಳಲ್ಲಿ ಬಳಸಲಾಗುವ ಬಹುತೇಕ ಸಾಮಗ್ರಿಗಳು ಸುಲಭವಾಗಿ ಲಭ್ಯವಿರುವು ದರಿಂದ ಇವುಗಳ ತಯಾರಿಕೆ ಸುಲಭ. ಕೆಲವು ಗಿಡಮೂಲಿಕೆ, ಬೇರು, ಸಸ್ಯ, ಪ್ರಾಣಿ, ಕೀಟ ಇತ್ಯಾದಿಗಳಿಂದ ಔಷಧಗಳನ್ನು ತಯಾರಿಸಲಾಗುತ್ತದೆ. ಇದಕ್ಕಿಂತ ಮುಖ್ಯವಾಗಿ ಈ ಔಷಧಗಳ ಬಳಕೆಗೆ ಕಾಲಾವಧಿಯ ಮಿತಿ ಇಲ್ಲದಿರುವುದರಿಂದ ಅವುಗಳನ್ನು ದೀರ್ಘ‌ಕಾಲದವರೆಗೂ ಸಂರಕ್ಷಿಸಿಡಬಹುದು.

ಚಟವಾಗದು
ಹೋಮಿಯೋಪತಿ ಪದ್ಧತಿಯಲ್ಲಿ ಔಷಧ ಸೇವನೆ ಒಂದು ಚಟವಾಗಿ ಮಾರ್ಪಡುವ ಯಾವುದೇ ಸಾಧ್ಯತೆ ಇಲ್ಲದಿರುವುದರಿಂದಾಗಿ ಕಾಯಿಲೆ ಶಮನದ ಬಳಿಕ ಆ ವ್ಯಕ್ತಿಯು ಸುರಕ್ಷಿತವಾಗಿ ಈ ಔಷಧಗಳ ಬಳಕೆಯನ್ನು ನಿಲ್ಲಿಸಬಹುದು. ಈ ಔಷಧಗಳು ಶಿಶು, ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ವಯಸ್ಸಾದ ವ್ಯಕ್ತಿಗಳು ಮತ್ತು ಯಾವುದೇ ವ್ಯಸನದ ಚಟವುಳ್ಳವರಿಗೂ ಸುರಕ್ಷಿತವಾಗಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.