ಬೆಳಗಾವಿಯಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಐವರು ಪೋಲೀಸರ ಬಲೆಗೆ
Team Udayavani, Jul 29, 2020, 9:58 PM IST
ಬೆಳಗಾವಿ: ಮಹಿಳೆಯರನ್ನು ಇಟ್ಟುಕೊಂಡು ವ್ಯಕ್ತಿಯನ್ನು ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟು ಹನಿ ಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಥಣಿಯ ಸದಾಶಿವ ಚಿಪ್ಪಲಕಟ್ಟಿ, ಬೆಳಗಾವಿಯ ನೆಹರು ನಗರದ ರಘುನಾಥ ಧುಮಾಳೆ, ಸವದತ್ತಿಯ ಗೌರಿ ಲಮಾಣಿ, ಮಂಜುಳಾ ಜತ್ತೆನ್ನವರ ಹಾಗೂ ಸವದತ್ತಿ ತಾಲೂಕಿನ ಉಗರಗೋಳದ ಸಂಗೀತಾ ಕಣಕಿಕೊಪ್ಪ ಎಂಬುವರನ್ನು ಬಂಧಿಸಲಾಗಿದೆ.
ಜಮಖಂಡಿ ಮೂಲದ ವ್ಯಕ್ತಿಯನ್ನು ಪರಿಚಯ ಮಾಡಿಕೊಂಡ ಈ ಮಹಿಳೆಯರು ಲಾಡ್ಜ್ ಗೆ ಕರೆಯಿಸಿಕೊಂಡಿದ್ದಾರೆ. ನಗರದ ಲಾಡ್ಜ್ ಗೆ ಕರೆಯಿಸಿ ಮಾತುಕತೆ ನಡೆಸಿದ್ದಾರೆ. ವ್ಯಕ್ತಿಯೊಂದಿಗೆ ಸಲುಗೆ ಬೆಳೆಸಿಕೊಂಡ ಈ ಮಹಿಳೆಯರು ಹನಿಟ್ರ್ಯಾಪ್ ಜಾಲ ಬೀಸಿದ್ದಾರೆ. ಅಷ್ಟರೊಳಗೆ ಪ್ರೈಮ್ ನ್ಯೂಸ್ ಯೂಟ್ಯುಬ್ ಚಾನೆಲ್ ಎಂದು ಹೇಳಿಕೊಂಡು ಲಾಡ್ಜ್ ಗೆ ಬಂದಿದ್ದಾರೆ. ಮಹಿಳೆಯರೊಂದಿಗೆ ಕುಳಿತಿದ್ದ ವ್ಯಕ್ತಿಯ ವಿಡಿಯೋ ಮಾಡಿಕೊಂಡಿದ್ದಾರೆ. ಜತೆಗೆ ಸಂಭಾಷಣೆಯ ಆಡಿಯೋ ಇಟ್ಟುಕೊಂಡು ಹೆದರಿಸಿದ್ದಾರೆ.
ಈ ವಿಡಿಯೋ ಹಾಗೂ ಸಂಬಾಷಣೆಯ ಆಡಿಯೋ ಚಾನೆಲ್ನಲ್ಲಿ ಪ್ರಸಾರ ಮಾಡುವುದಾಗಿ ಹೆದರಿಸಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ನಂತರ 5 ಲಕ್ಷ ರೂ.ಗೆ ವ್ಯವಹಾರ ಕುದಿರಿಸಿದ್ದಾರೆ. ಬಳಿಕ ಜಮಖಂಡಿಯ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಐವರನ್ನು ಲಾಡ್ಜ್ ನಲ್ಲಿ ಬಂಧಿಸಿ ವಿಚಾರಣೆ ನಡೆಸಿದಾಗ ಹನಿಟ್ರ್ಯಾಪ್ ಮಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರಿಂದ ಪ್ರೈಮ್ನ್ಯೂಸ್ ಎಂಬ ಚಾನೆಲ್ ನ ಗುರುತಿನ ಚೀಟಿ, ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರ್ಕೆಟ್ ಎಸಿಪಿ ಎನ್.ವಿ. ಭರಮನಿ, ಮಾಳಮಾರುತಿ ಇನ್ಸಪೆಕ್ಟರ್ ಬಿ.ಆರ್. ಗಡ್ಡೇಕರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಹನಿಟ್ರ್ಯಾಪ್ ಜಾಲವನ್ನು ಭೇದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ