ಕುಸಿದು ಬೀಳುತ್ತಿವೆ ಗ್ರಾಮ ಚಾವಡಿಗಳು: ಸ್ವಾತಂತ್ರ್ಯ ಬಂದು 70ವರ್ಷವಾದರೂ ಕಟ್ಟಡ ಬದಲಾಗಲಿಲ್ಲ
Team Udayavani, Nov 26, 2020, 3:57 PM IST
ಹೊನ್ನಾವರ: ಸ್ವಾತಂತ್ರ್ಯ ಬಂದು 70 ವರ್ಷವಾದರೂ ಈ ಹಿಂದಿನ ಕಟ್ಟಡದಲ್ಲೆ ಸರ್ಕಾರಿ ಕೆಲಸಗಳು ನಡೆಯುತ್ತಿರುವುದು
ಗ್ರಾಮ ಚಾವಡಿ ಅಂದರೆ ತಪ್ಪಾಗಲಾರದು. ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ಸಕಲ ಸೇವೆ ನೀಡುವ ಈ ಕಚೇರಿಗೆ ಯಾವುದೇ ಮೂಲ ಸೌಕರ್ಯಗಳಿಲ್ಲ. ತಾಲೂಕಿನಲ್ಲಿ 24 ಗ್ರಾಮ ಚಾವಡಿಗಳಲ್ಲಿ ಸಮಪರ್ಕ ಕುಡಿಯುವ ನೀರು, ಶೌಚಾಲಯ ಸೌಕರ್ಯವಿಲ್ಲದೇ ಇರುವ ಚಾವಡಿಗಳೆ ಅಧಿಕ. ಹಲವಡೆ ವಿದ್ಯುತ್ ಸಂಪರ್ಕವು ಇಲ್ಲದೇ ಪರದಾಡಬೇಕಾದ ಸ್ಥಿತಿ ಇದೆ.
ಹೊಸಾಕುಳಿ, ಕಡತೋಕಾ ಹಾಗೂ ಸಾಲ್ಕೋಡ್ ಗ್ರಾಮ ಚಾವಡಿಯಲ್ಲಿ ಕುಳಿತು ಕಾರ್ಯ ನಿರ್ವಹಿಸಲು ಭಯಪಡಬೇಕಾದ ಸ್ಥಿತಿ ಇದೆ. ಕಟ್ಟಡ ಬಿರುಕು ಬಿಟ್ಟಿರುವುದು ಒಂದಡೆಯಾದರೆ ಮೇಲ್ಛಾವಣೆ ಈಗಲೋ ಆಗಲೋ ಬೀಳುವಂತಿದೆ. ಗ್ರಾಮ ಲೆಕ್ಕಿಗರು, ಗ್ರಾಮದ ಕುಟುಂಬಗಳು ಹಾಗೂ ಆಸ್ತಿ-ಪಾಸ್ತಿಗಳ ಬಗ್ಗೆ ಕಳೆದ ಮೂರ್ನಾಲ್ಕು ದಶಕಗಳಿಂದ ಗ್ರಾಮದಲ್ಲಿ ಹುಟ್ಟಿದವರು, ಸತ್ತವರ ಲೆಕ್ಕವನ್ನೆಲ್ಲಾ ಕಡತದ ಜೊತೆ ತಲೆಯಲ್ಲಿಯೂ ತುಂಬಿಕೊಂಡಿರುವ ಉಗ್ರಾಣರು ನಿತ್ಯ ಕರ್ತವ್ಯಕ್ಕೆ ಹಾಜರಾಗುವ ಕಚೇರಿಯ ಬಗ್ಗೆ ಈ ಪರಿಯ ನಿಷ್ಕಾಳಜಿ ಯಾಕೆ?
ಇದನ್ನೂ ಓದಿ: ದೆಹಲಿ ಸರ್ಕಾರದ ಪರಿಸರ ಖಾತೆ ಸಚಿವರಿಗೂ ಕೋವಿಡ್-19 ಸೋಂಕು ದೃಢ
ಜನನ ಮರಣ ದಾಖಲೆ, ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲರ ವೇತನ, ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ಅಂತ್ಯ ಸಂಸ್ಕಾರ, ಭೂ ಹಿಡುವಳಿ, ಆದಾಯ, ಜಾತಿ, ಹಿಂದುಳಿದವರ್ಗ ಸರ್ಟಿಫಿಕೇಟ್ ಸೇರಿದಂತೆ ನಾಡಕಚೇರಿಯಲ್ಲಿ ಸಲ್ಲಿಸುವ ಪ್ರತಿಯೊಂದು ಅರ್ಜಿಯೂ ಗ್ರಾಮ ಚಾವಡಿಗೆ ಬಂದು ಪರಿಶೀಲನೆಗೊಳಪಟ್ಟು ಮುಂದಿನ ಹಂತಕ್ಕೆ ಕಳುಹಿಸಲಾಗುತ್ತದೆ. ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವುದರಲ್ಲಿ, ಜನಸಾಮಾನ್ಯರು ತಮ್ಮ
ದಾಖಲಾತಿಗಳನ್ನು ಅ ಧಿಕೃತವಾಗಿ ಯಾವುದೇ ಇಲಾಖೆಗೆ ಸಲ್ಲಿಸುವುದಿದ್ದರೂ ಗ್ರಾಮಲೆಕ್ಕಿಗರ ಪರಿಶೀಲನೆ ಅತೀ ಅಗತ್ಯ.
ಮೂರು ಗ್ರಾಮ ಚಾವಡಿಯ ಒಂದು ಭಾಗ ಮುರಿದು ಬಿಳುವಂತಿದ್ದರೆ, ಅಲ್ಲಲ್ಲಿ ಹಂಚು ಪಕಾಸುಗಳು ಆಗಲೋ ಈಗಲೋ ಬೀಳುವಂತಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ