ಭಾರಿ ಮಳೆಗೆ ಕುಸಿದು ಬಿತ್ತು ಹೊಸೂರು ಸೇತುವೆ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
Team Udayavani, Sep 27, 2020, 3:33 PM IST
ರಾಯಚೂರು : ಸಿರವಾರ ತಾಲೂಕಿನ ಎನ್.ಹೊಸೂರು ಸೇತುವೆಯು ಭಾನುವಾರ ಬೆಳಗ್ಗೆ ಮಳೆಯಿಂದ ಕುಸಿದಿದೆ.
ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು ಸುತ್ತ-ಮುತ್ತಲಿನ ಅನೇಕ ಹಳ್ಳಗಳು ತುಂಬಿ ಹರಿಯುತ್ತಿದ್ದು ನುಗುಡೋಣಿ ಮಾರ್ಗವಾಗಿ ಎನ್.ಹೊಸೂರು ಗ್ರಾಮಕ್ಕೆ ತೆರಳುವ ಮಧ್ಯದಲ್ಲಿ ಬರುವ ಸೇತುವೆಯು ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಕುಸಿದಿದೆ.
ಸದ್ಯಕ್ಕೆ ಬೇರೆ ಕಾಲುವೆ ಪಕ್ಕದ ರಸ್ತೆಯ ಮೂಲಕ ವಾಹನಗಳು ಸಂಚರಿಸುತ್ತಿದ್ದು , ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಭಾರಿ ಮಳೆಗೆ ಸುತ್ತ ಮುತ್ತಲಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ರೈತರು ಬೆಳೆದ ಬೆಳೆಗಳು ಪ್ರವಾಹದ ನೀರಿನಿಂದ ಕೊಚ್ಚಿ ಹೋಗಿದ್ದು ಇದರಿಂದ ರೈತರಿಗೆ ಸಾಕಷ್ಟು ನಷ್ಟ ಸಂಭವಿಸಿದೆ.
ಇದನ್ನೂ ಓದಿ:ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುವ ಮುಂಡಗೋಡು ಟಿಬೇಟಿಯನ್ ಕ್ಯಾಂಪ್ ಎಂಬ ಅದ್ಭುತ ತಾಣ !
ಮಳೆಯ ಹೊಡೆತಕ್ಕೆ ಕೆಲವೊಂದು ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದಿದ್ದು ಅಪಾರ ಹಾನಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ