ಉತ್ತರಕ್ಕೆ ಬಿಸಿ ಗಾಳಿ ಎಚ್ಚರಿಕೆ; ಮೂರು ದಿನಗಳ ಕಾಲ ಇದೇ ಪರಿಸ್ಥಿತಿ: ಐಎಂಡಿ
Team Udayavani, May 25, 2020, 5:55 AM IST
ಸಾಂದರ್ಭಿಕ ಚಿತ್ರ.
ಕಲಬುರಗಿ/ ಬೆಂಗಳೂರು/ಹೊಸದಿಲ್ಲಿ: ಕಲಬುರಗಿ ಸಹಿತ ಕರ್ನಾಟಕದ ಉತ್ತರ ಒಳನಾಡು,ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮುಂದಿನ 3 ದಿನ ಉಷ್ಣ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಉತ್ತರ ಕರ್ನಾಟಕ ಮಾತ್ರವಲ್ಲದೆ ದಖ್ಖನ್ ಪ್ರಸ್ಥಭೂಮಿಯಲ್ಲಿರುವ ನೆರೆಯ ಆಂಧ್ರದ ರಾಯಲಸೀಮಾ, ಯಾಣಂ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಛತ್ತೀಸ್ಗಢ, ಒಡಿಶಾ, ರಾಜಸ್ಥಾನ, ಪಂಜಾಬ್,ಹರಿಯಾಣ, ಚಂಡೀಗಢ, ದಿಲ್ಲಿ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿಯೂ ಬಿಸಿಗಾಳಿ ಬೀಸಲಿದೆ ಎಂದು ಐಎಂಡಿ ಎಚ್ಚರಿಸಿದೆ.
ಕಲಬುರಗಿ: 44.5 ಡಿಗ್ರಿ ಸೆ. ತಾಪ
ರವಿವಾರವೇ ಕರ್ನಾಟಕ ಮತ್ತು ದೇಶದ ಹಲವೆಡೆ ಗರಿಷ್ಠ ಉಷ್ಠಾಂಶ ಏರಿಕೆಯಾಗಿದೆ. ಪಶ್ಚಿಮ ರಾಜಸ್ಥಾನದ ಚುರುವಿನಲ್ಲಿ 47.4 ಡಿಗ್ರಿ ಸೆ. ದಾಖಲಾಗಿತ್ತು. ಕಲಬು ರಗಿಯಲ್ಲಿ ರವಿವಾರ ಬಿಸಿಲಿನ ಝಳ ಜೋರಾಗಿಯೇ ಇತ್ತು. ಇಲ್ಲಿ ರಾಜ್ಯದ ಅತಿ ಗರಿಷ್ಠ 44.5 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ಗರಿಷ್ಠ ತಾಪ ಮಾನದಲ್ಲಿ 4.2 ಡಿಗ್ರಿ ಸೆ. ಹೆಚ್ಚಳವಾಗಿದೆ. ರಾಯಚೂರಿನಲ್ಲಿ 43 ಡಿಗ್ರಿ ಸೆ. ಮತ್ತು ವಿಜಯಪುರದಲ್ಲಿ 41.8 ಡಿ.ಸೆ. ತಾಪಮಾನ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು