ಈ ಬಾರಿ ಐಪಿಎಲ್‌ ಮಾದರಿ ಹೇಗಿದೆ? : ಅಂಕಿ ಸಂಖ್ಯೆಗಳು


Team Udayavani, Mar 31, 2023, 7:11 AM IST

tata ipl 2023

10: ಭಾಗವಹಿಸುವ ಒಟ್ಟು ತಂಡಗಳು

74: ನಡೆಯುವ ಒಟ್ಟು ಪಂದ್ಯಗಳು

12: ಒಟ್ಟು 12 ಮೈದಾನಗಳಲ್ಲಿ ಪಂದ್ಯಗಳು ನಡೆಯುತ್ತವೆ

2: ಮಾ.31ರಿಂದ ಮೇ 29ರವರೆಗೆ ಹತ್ತಿರಹತ್ತಿರ ಎರಡು ತಿಂಗಳು ಕೂಟ ನಡೆಯಲಿದೆ. ನಿರ್ದಿಷ್ಟವಾಗಿ ಹೇಳುವುದಾದರೆ 52 ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

ಪಂದ್ಯಗಳ ಮಾದರಿ ಹೇಗಿರುತ್ತದೆ?
ಈ ಬಾರಿ 10 ತಂಡಗಳನ್ನು ತಲಾ 5 ತಂಡಗಳ ಎರಡು ಗುಂಪುಗಳಾಗಿ ವಿಭಜಿಸಲಾಗಿದೆ. ಗುಂಪು ಹಂತದಲ್ಲಿ ತಂಡವೊಂದು ತನ್ನದೇ ಗುಂಪಿನ ಉಳಿದ 4 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಅಲ್ಲಿಗೆ ತಂಡವೊಂದು 8 ಪಂದ್ಯಗಳನ್ನು ಆಡಿದಂತಾಗುತ್ತದೆ. ಅನಂತರ ಎರಡೂ ಗುಂಪುಗಳ ತಂಡಗಳ ನಡುವೆ ಪಂದ್ಯಗಳು ಆರಂಭವಾಗುತ್ತವೆ. ಅರ್ಥಾತ್‌ ಮೊದಲ ಗುಂಪಿನ ಒಂದು ತಂಡ, ಇನ್ನೊಂದು ಗುಂಪಿನ ತಂಡವೊಂದರ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಇತರ ನಾಲ್ಕು ತಂಡಗಳ ವಿರುದ್ಧ ತಲಾ 1 ಪಂದ್ಯವಾಡುತ್ತದೆ.

ಇದೇ ಮಾದರಿ ಇತರ ತಂಡಗಳಿಗೂ ಅನ್ವಯವಾಗುತ್ತದೆ. ಅಲ್ಲಿಗೆ ತಂಡವೊಂದು ಲೀಗ್‌ ಹಂತದಲ್ಲಿ 14 ಪಂದ್ಯಗಳನ್ನಾಡಿದಂತಾಗುತ್ತದೆ. ಪ್ಲೇಆಫ್ ಹಂತ ಎಂದಿನಂತೆಯೇ ಇರುತ್ತದೆ. ಅಗ್ರ 2 ಸ್ಥಾನಗಳನ್ನು ಪಡೆದ ತಂಡಗಳು ಮೊದಲ ಅರ್ಹತಾ ಪಂದ್ಯದಲ್ಲಾಡುತ್ತವೆ. ಗೆದ್ದ ತಂಡ ನೇರವಾಗಿ ಫೈನಲ್‌ಗೇರಲಿದೆ. ಸೋತ ತಂಡ 2ನೇ ಅರ್ಹತಾ ಪಂದ್ಯದಲ್ಲಾಡುತ್ತದೆ. 3 ಮತ್ತು 4ನೇ ಸ್ಥಾನ ಪಡೆದ ತಂಡಗಳು ನಿರ್ಗಮನ ಪಂದ್ಯದಲ್ಲಾಡುತ್ತವೆ. ಇಲ್ಲಿ ಗೆದ್ದ ತಂಡ 2ನೇ ಅರ್ಹತಾ ಪಂದ್ಯದಲ್ಲಿ ಆಡುತ್ತದೆ. 2ನೇ ಅರ್ಹತಾ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ಗೇರುತ್ತದೆ.
ವಿಶೇಷ ಹೊಸ ನಿಯಮಗಳು

ಇಂಪ್ಯಾಕ್ಟ್ ಪ್ಲೇಯರ್‌: ಆಸ್ಟ್ರೇಲಿಯದ ಬಿಗ್‌ಬಾಶ್‌ ಟಿ20 ಲೀಗ್‌ನಿಂದ ಪ್ರಭಾವಿತಗೊಂಡು ಐಪಿಎಲ್‌ನಲ್ಲೂ ಈ ಬಾರಿಯಿಂದ ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಅಳವಡಿಸಲಾಗಿದೆ. ತಂಡವೊಂದು ಆಡುತ್ತಿರುವಾಗ ಪರಿಸ್ಥಿತಿಗೆ ಅನುಗುಣವಾಗಿ ಒಬ್ಬ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಅರ್ಥಾತ್‌ 11ರ ಬಳಗದಿಂದ ಹೊರಗಿರುವ ವ್ಯಕ್ತಿಯನ್ನು ಒಳಕ್ಕೆಳೆದುಕೊಳ್ಳಬಹುದು. ಇನಿಂಗ್ಸ್‌ ಆರಂಭಕ್ಕೂ ಮುನ್ನ, ಒಂದು ಓವರ್‌ ಮುಗಿದ ಮೇಲೆ, ವಿಕೆಟ್‌ ಬಿದ್ದಾಗ, ಓವರ್‌ಗಳ ನಡುವಿನ ವಿರಾಮದಲ್ಲಿ ಬದಲಿಯನ್ನು ಪಡೆಯಬಹುದು. ಒಟ್ಟಾರೆ ಒಬ್ಬ ಬದಲಿ ಆಟಗಾರನನ್ನು ಪಡೆದುಕೊಳ್ಳುವುದಕ್ಕೆ ಮಾತ್ರ ಅವಕಾಶವಿದೆ.

* ಟಾಸ್‌ ವೇಳೆ ತಂಡದ ಅಂತಿಮಪಟ್ಟಿ ಕೊಡಬೇಕಾಗಿಲ್ಲ

* ಇದೊಂದು ಅತ್ಯಂತ ಮಹತ್ವದ ಬದಲಾವಣೆ. ಇದೀಗ ತಂಡಗಳ ನಾಯಕರು ಟಾಸ್‌ ಹಾರಿಸುವಾಗ 11 ಆಟಗಾರರ ಅಂತಿಮಪಟ್ಟಿಯನ್ನು ನೀಡಬೇಕಾಗಿಲ್ಲ. ಟಾಸ್‌ ಫ‌ಲಿತಾಂಶ ನೋಡಿಕೊಂಡು ಆಗ 11ರ ಪಟ್ಟಿಯನ್ನು ಅಂತಿಮಗೊಳಿಸಬಹುದು.

ವೈಡ್‌, ನೋಬಾಲ್‌ಗ‌ಳೂ ಡಿಆರ್‌ಎಸ್‌ ವ್ಯಾಪ್ತಿಗೆ
ತಂಡಗಳಿಗೆ ಇನ್ನೊಂದು ವಿಶೇಷ ಅವಕಾಶ ಸಿಕ್ಕಿದೆ. ಅಂಪಾಯರ್‌ಗಳು ನೀಡಿದ ವೈಡ್‌, ನೋಬಾಲ್‌ ಕರೆಗಳನ್ನು ಡಿಆರ್‌ಎಸ್‌ ಮೂಲಕ ಈಗ ಪ್ರಶ್ನಿಸಬಹುದು. ಇದು ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ವಿಶೇಷ ಪರಿಣಾಮ ಬೀರಿತ್ತು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.