ಪಂಜಾಬ್ ನಲ್ಲಿ ಎಷ್ಟು ಸೀಟು ಗೆದ್ದಿದ್ದೀರಿ?: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ರಾಜ್ಯದಲ್ಲಿ ನಿಮ್ಮ ಕನಸು ನನಸಾಗುವುದಿಲ್ಲ
Team Udayavani, Mar 11, 2022, 12:07 PM IST
ಬೆಂಗಳೂರು : ಪಂಜಾಬ್ ನಲ್ಲಿ ನೀವು ಎಷ್ಟು ಸೀಟು ಗೆದ್ದಿದ್ದೀರಿ ? ಎರಡೇ….! ಹೀಗೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ಮಾತಿಗೆ ತಿರುಗೇಟು ನೀಡಿದ ಅವರು, ಯಾವ ರಾಜ್ಯದಲ್ಲಿ ನೀವು ಅಧಿಕಾರದಲ್ಲಿದ್ದಿರೋ, ಅಲ್ಲಿ ಗೆದ್ದಿದ್ದೀರಿ. ಪಂಜಾಬಿನಲ್ಲಿ ನಮ್ಮ ತಪ್ಪಿನಿಂದ ಅಧಿಕಾರಕ್ಕೆ ಕಳೆದುಕೊಂಡಿದ್ದೇವೆ. ಆದರೆ ರಾಜ್ಯದ ಸ್ಥಿತಿ ಬೇರೆಯೇ ಇದೆ ಎಂದರು.
ಇಲ್ಲಿನ ಜನ ಬಿಜೆಪಿಯನ್ನು ಸೋಲಿಸಬೇಕೆಂದು ತೀರ್ಮಾನಿಸಿದ್ದಾರೆ. ನಾವು ಭ್ರಮೆಯಲ್ಲಿ ಇಲ್ಲ. ಜನರ ನಾಡಿ ಮಿಡಿತವನ್ನು ಅರಿತುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಿದ್ದೇವೆ. ರಾಜ್ಯದ ಜನ ನಿಮ್ಮನ್ನು ಅಧಿಕಾರದಿಂದ ಕಿತ್ತು ಹಾಕುತ್ತಾರೆ. ನಿಮ್ಮ ಕನಸು ನನಸಾಗುವುದಿಲ್ಲ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ