ಹುಣಸೂರು: ಕಾಡಿನಿಂದ ನಾಡಿಗೆ ಬಂದ ಆನೆಗಳು; ರೈತರಲ್ಲಿ ಆತಂಕ


Team Udayavani, Nov 18, 2021, 5:19 PM IST

26elepant

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಮೇವನ್ನರಸಿ ನಾಡಿಗೆ ಬಂದಿದ್ದ ಆರು ಕಾಡಾನೆಗಳು  ಕಾಡಿಗೆ ಮರಳದೆ ಹುಣಸೇಕಟ್ಟೆ ಸಾಮಾಜಿಕ ಅರಣ್ಯದಲ್ಲಿ ಬೀಡು ಬಿಟ್ಟಿದ್ದು. ಸುತ್ತಮುತ್ತಲ ರೈತರನ್ನು ಆತಂಕಕ್ಕೀಡು ಮಾಡಿದ್ದರೆ, ಅರಣ್ಯ ಇಲಾಖೆ ಸಿಬ್ಬಂದಿಗಳ ನಿದ್ದೆ ಗೆಡಿಸಿದೆ.

ಹನಗೋಡು ಹೋಬಳಿಯ ಕಾಳೇನಹಳ್ಳಿಯ ಜಮೀನಿನಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಆರು ಕಾಡಾನೆಗಳು ಬೀಡು ಬಿಟ್ಟಿದ್ದನ್ನು ಕಂಡ ರೈತರು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ.

ಕಾಡಾನೆಗಳ ಹಿಂಡು ಕಂಡ ಗ್ರಾಮಸ್ಥರು ಕಾಡಾನೆಗಳ ಸುತ್ತ-ಮುತ್ತ ಸುತ್ತುವರಿದು ಕೇಕೆ ಹಾಕುತ್ತಾ, ಶಿಳ್ಳೆ ಹಾಕಿ. ಕೂಗಾಡಿ.  ಕಾಡಿಗಟ್ಟಲು ಪ್ರಯತ್ನಿಸಿದರಾದರೂ ಬೆದರದ ಆನೆಗಳು ಠಿಕಾಣಿ ಹೂಡಿದ್ದ ಸ್ಥಳದಿಂದ ಕದಲಲಿಲ್ಲ.ಕಲ್ಲೇಟಿನಿಂದ   ಗಾಬರಿಗೊಂಡ ಆನೆಗಳು ಅಲ್ಲಿಯೇ ಸುತ್ತ ಮುತ್ತ ಗಿರಕಿ ಹೊಡೆಯುತ್ತ ಬೆಳಗ್ಗೆ  ಎಂಟು ಗಂಟೆಯವರೆಗೆ ಕಾಲ ಕಳೆದವು.

ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಳೇನಹಳ್ಳಿ ಜಮೀನು ಬಳಿಗೆ ದಾವಿಸಿ ಬೆಳಿಗ್ಗೆ ಹತ್ತು ಗಂಟೆವರೆವಿಗೂ ಕಾಡಿಗಟ್ಟಲು ಹರ ಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಕಾಡಾನೆ ಓಡಿಸಲು ಯತ್ನಿಸುತ್ತಿದ್ದಂತೆ ಅತ್ತಿಂದಿತ್ತ ಓಡಾಡುತ್ತಿದ್ದ ಆನೆಗಳ ಹಿಂದಿದಿಂದೆಯೇ ನೂರಾರು ಮಂದಿ ಸೇರಿ ಕೂಗಾಟ ನಡೆಸಿದರು. ಇದರಿಂದಾಗಿ ಕಾರ್ಯಚರಣೆಗೂ ಅಡಚಣೆಯಾಯಿತು. ಕೊನೆಗೆ ಪೋಲಿಸರು ಜನ ಸಮೂಹವನ್ನು ನಿಯಂತ್ರಿಸಿದರು.

ಇದನ್ನೂ ಓದಿ:ಸಯ್ಯದ್ ಮುಷ್ತಾಕ್ ಅಲಿ: ಬಂಗಾಳದ ಕೈಯಿಂದ ಜಯ ಕಸಿದ ಕರ್ನಾಟಕಕ್ಕೆ ‘ಸೂಪರ್’ ಜಯ

ಅರಣ್ಯ ಇಲಾಖೆಯವರು ಹತ್ತಾರು ಬಾರಿ ಗಾಳಿಯಲ್ಲಿ ಬೆದರು ಗುಂಡು ಹಾರಿಸಿ ಪಟಾಕಿ ಸಿಡಿಸಿ  2ಕಿ.ಮೀ.ದೂರದ  ಕಾಡಿನ ಕಡೆಗೆ ಆನೆಗಳು ಮುಖ ಮಾಡಿದರೂ  ಹೆಚ್ಚು ಜನಜಂಗುಳಿ ಕೂಡಿದರಿಂದ ಗಾಬರಿಗೊಂಡ ಕಾಡಾನೆಗಳು ಗುರುಪುರ ಬಳಿಯ  ಹುಣಸೇಕಟ್ಟೆ ಅರಣ್ಯ ಪ್ರದೇಶದೊಳಗೆ ಸೇರಿಕೊಂಡವು.

ಸಂಜೆ ಕಾರ್ಯಾಚರಣೆ

ಬೆಳಿಗ್ಗೆ ಜನಜಂಗುಳಿ ಹೆಚ್ಚಾದ ಕಾರಣ ಗಾಬರಿಗೊಂಡ ಕಾಡಾನೆಗಳು ಗುರುಪುರ ಅರಣ್ಯಪ್ರದೇಶದ ಹುಣಸೆಕಟ್ಟೆ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಸೇರಿಸಲಾಗಿದೆ. ಮುಖ್ಯ ರಸ್ತೆಯ ಸುತ್ತಲೂ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಕಾವಲು ಹಾಕಿ ಸಾರ್ವಜನಿಕರಿಗೆ ಕಾಡಾನೆಗಳು‌ ಇರುವಿಕೆಯ ಮಾಹಿತಿ ನೀಡಲಾಗುತ್ತಿದೆ‌.   ಇಂದು ಸಂಜೆ ಹುಣಸೆಕಟ್ಟೆ ಅರಣ್ಯ ಪ್ರದೇಶದಿಂದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಆನೆಗಳ ಹಿಂಡನ್ನು ಕಾರ್ಯಾಚರಣೆ ನಡೆಸಿ ಕಾಡಿಗಟ್ಟಲಾಗುವುದೆಂದು   ವೀರನಹೊಸಳ್ಳಿ ಆರ್ ಎಫ್ ಓ ನಮನ ನಾರಾಯಣ ನಾಯಕ್ ಪತ್ರಿಕೆಗೆ ತಿಳಿಸಿದ್ದಾರೆ

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.