ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಸೆರೆಹಿಡಿದು ಬ್ಲ್ಯಾಕ್ಮೇಲ್ :ಪತ್ನಿಯಿಂದ ಠಾಣೆಗೆ ದೂರು
Team Udayavani, Jan 16, 2021, 9:05 PM IST
ಬೆಂಗಳೂರು: ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪತಿಯ ವಿರುದ್ಧ ಪತ್ನಿಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಫ್ರೆಜರ್ಟೌನ್ ನಿವಾಸಿ 39 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಪುಲಕೇಶಿನಗರ ಪೊಲೀಸರು ಆರೋಪಿ ಪತಿ ರಾಜು ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೊಬೈಲ್ನಲ್ಲಿ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಸೆರೆ ಹಿಡಿದು ಬೇರೆಯವರಿಗೆ ಕಳಿಸುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣದ ಹಿನ್ನೆಲೆ:
ಸಂತ್ರಸ್ತೆ 2019ರಲ್ಲಿ ರಾಜು ಎಂಬಾತನನ್ನು ಮದುವೆಯಾಗಿದ್ದು, ಅತ್ತಿಗುಪ್ಪೆಯ ಇಂದಿರಾ ಕಾಲೋನಿಯಲ್ಲಿ ವಾಸವಾಗಿದ್ದರು. ಆರಂಭದಲ್ಲಿ ದಂಪತಿ ಅನ್ಯೂನ್ಯವಾಗಿದ್ದರು. ಅನಂತರ ಪತಿ ರಾಜು ನಿತ್ಯ ಕುಡಿದು ಬಂದು ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ಹಲ್ಲೆ ನಡೆಸುತ್ತಿದ್ದ. ಪತಿಯ ಕಿರುಕುಳವನ್ನು ಸಿಹಿಸಿಕೊಂಡು ಮಹಿಳೆ ಜೀವನ ಮಾಡುತ್ತಿದ್ದರು. ಆದರೆ, ಪರಪುರುಷನ ಜತೆ ಅಕ್ರಮ ಸಂಬಂಧ ಇಟ್ಟು ಕೊಂಡಿರುವುದಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಆಕೆಯ ಸಹೋದ್ಯೋಗಿಗಳಿಗೆ ಕರೆ ಮಾಡಿ “ನನ್ನ ಪತ್ನಿಗೆ ನಿಮಗೂ ಏನು ಸಂಬಂಧ’ ಎಂದು ಕೇಳುತ್ತಿದ್ದ. ಅಲ್ಲದೆ, ತನ್ನ ಮೊಬೈಲ್ನಲ್ಲಿ ಪತ್ನಿಯ ಅಶ್ಲೀಲ ಫೋಟೋ, ವಿಡಿಯೋಗಳನ್ನು ಸೆರೆ ಹಿಡಿದು ಇತರರಿಗೆ ಕಳುಹಿಸುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಅಮಿತ್ ಶಾ ಭೇಟಿಗೆ ಸಮಯ ಕೇಳಿದ 15ಕ್ಕೂ ಹೆಚ್ಚು ಅತೃಪ್ತ ಶಾಸಕರು
ಕಾರು ಉಡುಗೊರೆ
ಮದುವೆ ಸಂದರ್ಭದಲ್ಲಿ ಸಂತ್ರಸ್ತೆ ಮನೆಯವರು ಆರೋಪಿಗೆ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ, ಪತ್ನಿಗೆ ಗೊತ್ತಿಲ್ಲದಂತೆ ಆರೋಪಿ ಕಾರು ಮಾರಾಟ ಮಾಡಿದ್ದ. ಅದನ್ನು ಕೇಳಿದ್ದಕ್ಕೆ ಮಹಿಳೆ ಕೊಲೆಗೆ ಯತ್ನಿಸಿದ್ದ. ದುಪ್ಪಟ್ಟದಿಂದ ಪತ್ನಿಯ ಕತ್ತನ್ನು ಬಿಗಿದು ಹತ್ಯೆಗೆ ಯತ್ನಿಸಿದ್ದ. ಆಕೆಗೆ ಉಸಿರಾಡಲು ಸಾಧ್ಯವಾಗದೇ ಕೈ, ಕಾಲು ಒದರುತ್ತಿದ್ದಾಗ ಅಡುಗೆ ಮನೆಯಲ್ಲಿದ್ದ ವಸ್ತುಗಳು ಕಾಲಿಗೆ ಸಿಕ್ಕಿ ಕೆಳಗೆ ಬಿದ್ದು ಜೋರಾಗಿ ಶಬ್ದ ಉಂಟಾಗಿತ್ತು. ಶಬ್ದ ಕೇಳಿ ಸ್ಥಳೀಯರು ಮನೆಗೆ ಬಂದಿದ್ದರು.ಆಗ ಆತಂಕಗೊಂಡ ಪತಿ, “ಇವತ್ತು ನೀನು ಬದುಕಿದೆ. ಮುಂದೆ ನಿನ್ನನ್ನು ಬಿಡುವುದಿಲ್ಲ’ ಎಂದು ಪ್ರಾಣ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಮೂರು ಮದುವೆ
ಅನಂತರ ಆರೋಪಿಯ ಹಿನ್ನೆಲೆ ವಿಚಾರಿಸಿದಾಗ ಆರೋಪಿ ಈಗಾಗಲೇ ಮೂರು ಮದುವೆಯಾಗಿದ್ದು, ಮೂವರಿಗೆ ವಂಚಿಸಿದ್ದು, ತನ್ನನ್ನು ನಾಲ್ಕನೇ ಮದುವೆಯಾಗಿದ್ದಾನೆ ಎಂಬುದು ಗೊತ್ತಾಗಿದೆ. ಹೀಗಾಗಿ ಆರೋಪಿ ಪತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ