ನಕಲಿ ಆಧಾರ್ ಜೊತೆ ಕೊಚ್ಚಿಯಲ್ಲಿದ್ದ ಆಫ್ಘನ್ ಪ್ರಜೆಯ ಬಂಧನ
ಬಂಧಿತನಿಂದ ನಕಲಿ ಆಧಾರ್, ವಿವಿಧ ಶಾಲೆಗಳ ನಕಲಿ ಪ್ರಮಾಣಪತ್ರಗಳು ವಶ
Team Udayavani, Jul 21, 2021, 7:52 PM IST
ಕೊಚ್ಚಿ: ಕೇರಳದ ಕೊಚ್ಚಿಯಲ್ಲಿರುವ ಕೊಚಿನ್ ಹಡಗು ನಿರ್ಮಾಣ ಸಂಸ್ಥೆಯಲ್ಲಿ (ಸಿಎಸ್ಎಲ್), ಭಾರತಕ್ಕೆ ಸಂಬಂಧಿಸಿದ ಹಲವಾರು ನಕಲಿ ಪ್ರಮಾಣಪತ್ರಗಳೊಂದಿಗೆ ಕೆಲಸ ಗಿಟ್ಟಿಸಿಕೊಂಡಿದ್ದ ಆಫ್ಘಾನಿಸ್ತಾನದ ಪ್ರಜೆಯೊಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ಟಾಸ್ ಅಲಿಯಾಸ್ ಈದ್ಗುಲ್ ಎಂದು ಗುರುತಿಸಲಾಗಿದ್ದು, ಈತ ಅಫ್ಘಾನಿಸ್ತಾನದಿಂದ ನೇಪಾಳಕ್ಕೆ, ಅಲ್ಲಿಂದ ಅಸ್ಸಾಂಗೆ ಬಂದಿದ್ದ. ಅಸ್ಸಾಂನಲ್ಲಿದ್ದಾಗಲೇ ಶಾಲಾ ಪ್ರಮಾಣಪತ್ರಗಳು ಹಾಗೂ ನಕಲಿ ಆಧಾರ್ ಕಾರ್ಡ್ಗಳನ್ನು ಸಂಪಾದಿಸಿಕೊಂಡ ಆತ, ಆನಂತರ ಕೊಚ್ಚಿಗೆ ಆಗಮಿಸಿ, ಸಿಎಸ್ಎಲ್ ಕಂಪನಿಯಲ್ಲಿ ಸೇವೆಗೆ ಸೇರಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯಲ್ಲಿ ಈತನ ಕೆಲವು ಸಂಬಂಧಿಕರೂ ಸಿಎಸ್ಎಲ್ನಲ್ಲಿ ಈಗಾಗಲೇ ಸೇವೆ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಹಾಗಾಗಿ, ಅಬ್ಟಾಸ್ನನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಕೇರಳದ ಮೊದಲ ತೃತೀಯ ಲಿಂಗಿ ಆರ್ಜೆ ಅನನ್ಯಾ ಕುಮಾರಿ ಆತ್ಮಹತ್ಯೆ
ಸುಳಿವು ಸಿಕ್ಕಿದ್ದು ಹೇಗೆ?
ಜೂನ್ ತಿಂಗಳಲ್ಲಿ ಕೊಚ್ಚಿ ಬಳಿಯ ವಿಲ್ಲಿಂಗ್ಟನ್ ದ್ವೀಪ, ಗೋಶ್ರೀ ಸೇತುವೆಗಳ ಮೇಲೆ ಡ್ರೋನ್ ಒಂದು ಹಾರಾಟ ನಡೆಸಿತ್ತು. ಈ ಪ್ರಾಂತ್ಯದಲ್ಲಿ ಭಾರತೀಯ ನೌಕಾಪಡೆಯ ದಕ್ಷಿಣ ಕೇಂದ್ರ, ಸಿಎಸ್ಎಲ್ ಕಂಪನಿ ಹಾಗೂ ಕಂಪನಿಯ ಸಿಬ್ಬಂದಿ ವಸತಿ ಗೃಹಗಳಿವೆ. ಹಾಗಾಗಿ, ಪೊಲೀಸರು ಡ್ರೋನ್ ಜಾಡು ಹಿಡಿದು ತನಿಖೆ ನಡೆಸಿದ್ದರು. ಆಗ, ಆಫ್ಘನ್ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಿತ್ತೆಂದು ಹೇಳಲಾಗಿದೆ. ಆದರೆ, ಡ್ರೋನ್ಗೂ ಈತನಿಗೂ ಸಂಬಂಧ ಇದೆಯೇ ಎಂಬುದಿನ್ನೂ ತಿಳಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ