ಈಗಲ್ ಇನ್ಪ್ರಾಸ್ಟ್ರಕ್ಚರ್ ಇಂಡಿಯಾದಲ್ಲಿ ನಾನು ಪಾಲುದಾರನಲ್ಲ: ಮಾಜಿ ಶಾಸಕ ಸೈಲ್

ಶಾಸಕಿ ತೀರಾ ವೈಯಕ್ತಿಕ ಮಟ್ಟಕ್ಕೆ ಇಳಿದಿದ್ದಾರೆ... ಸಾಬೀತಾದರೆ ರಾಜಕೀಯ ನಿವೃತ್ತಿ...

Team Udayavani, Mar 10, 2023, 7:10 PM IST

1-wdsadsadas-d

ಕಾರವಾರ: ಈಗಲ್ ಇನ್ಪ್ರಾಸ್ಟ್ರಕ್ಚರ್ ಇಂಡಿಯಾದಲ್ಲಿ ನಾ ಪಾಲುದಾರನಲ್ಲ ,‌ನನ್ನ ಶೇರ್ ಆ ಕಂಪನಿಯಲ್ಲಿ ಇಲ್ಲ ಎಂದು ಮಾಜಿ ಶಾಸಕ ಸತೀಶ್ ಸೈಲ್ ಸ್ಪಷ್ಟಪಡಿಸಿದರು‌.

ಕಾರವಾರದ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಮಾಡಿದ ಅವರು ಈಗಲ್ ಇನ್ಪ್ರಾಸ್ಟ್ರಕ್ಚರ್ ಇಂಡಿಯಾದಲ್ಲಿ ನನ್ನ ಶೇರ್ ಇದೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಹೊಂದುವೆ ಹಾಗೂ ಕಾರವಾರ ಬಿಟ್ಟು ಹೋಗುವೆ ಎಂದರು‌ . ನನ್ನ ಮೇಲೆ ಶಾಸಕಿ ರೂಪಾಲಿ ನಾಯ್ಕ ಸುಳ್ಳು ಅಪಾದನೆ ಮಾಡಿದ್ದು, ಅವರು ಶಾಸಕ ವೃತ್ತಿಗೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ ರಾಜಕೀಯದಲ್ಲಿ ನನ್ನ ಜೊತೆ ಇದ್ದಾರೆ. ಅವರು ನಮ್ಮ ಪಕ್ಷದವರು. ಆದರೆ ಅವರು ವೃತ್ತಿಯಿಂದ ಇಂಜಿನಿಯರ್. ಈಗಲ್ ಇನ್ಪ್ರಾಸ್ಟ್ರಕ್ಚರ್ ಇಂಡಿಯಾದ ಕಾಮಗಾರಿಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಇದನ್ನೇ‌ ಶಾಸಕಿ ತಪ್ಪಾಗಿ ಗ್ರಹಿಸಿ ನನ್ನ ಮೇಲೆ ಅಪಾದನೆ ಮಾಡುವುದು ಎಷ್ಟು ಸರಿ ಎಂದು ಮಾಜಿ‌ ಶಾಸಕ ಸೈಲ್ ಪ್ರಶ್ನಿಸಿದರು‌ .

ಶಾಸಕಿ ತೀರಾ ವೈಯಕ್ತಿಕ ಮಟ್ಟಕ್ಕೆ ಇಳಿದು ಟೀಕೆ ಮಾಡ್ತಾರೆ. ನನ್ನ ಲೀವರ್ ಡ್ಯಾಮೇಜ್ ಆಗಿದೆ ಎಂದು ಮಾಧ್ಯಮಗಳ ಎದುರು ಹೇಳಿದ್ದಾರೆ. ಈ ಹೇಳಿಕೆ ತೀರಾ ನೋವು ತಂದಿದೆ. ಅಲ್ಲದೆ ನನ್ನಿಂದ‌ ಜೀವ ಬೆದರಿಕೆ ಇದೆ‌ ಎಂದು ದೂರು ಕೊಟ್ಟ ಬಗ್ಗೆ ಗೊತ್ತಾಗಿದೆ. ನಾವು ಬೆದರಿಕೆ ಹಾಕುವ ಸಂಸ್ಕೃತಿಯ ಮನುಷ್ಯನಲ್ಲ. ಶಾಸಕಿಯಾಗಿ ಆಯ್ಕೆಯಾದ ಎರಡನೇ ದಿನವೇ ಬೈತಖೋಲ್ ದಲ್ಲಿ ಅವರ ವಾಹನ ಸಾಗಲು ಅಡ್ಡಿಪಡಿಸಿದಾಗ, ನನಗೆ ಪೋನ್ ಮಾಡಿ ಸಹಾಯ ಕೋರಿದ್ದರು‌. ಅದನ್ನು ಶಾಸಕಿ‌ ನೆನಪಿಸಿಕೊಳ್ಳಲಿ. ನಾನು‌ ಆರ್ಯದುರ್ಗಾ ದೇವಿಯ ಎದುರು ಪ್ರಮಾಣ ಮಾಡಲು ಸಿದ್ಧನಿದ್ದೇನೆ. ಅವರೂ ಬರಲಿ ಎಂದರು‌.ನಾನು ಇನ್ನು ವಯಕ್ತಿಕ ಟೀಕೆಗೆ ಹೋಗುವುದಿಲ್ಲ. ಈ ವಿವಾದವನ್ನು ಇಷ್ಟಕ್ಕೆ ಮುಗಿಸುವೆ ಎಂದರು.

ಬಿಎಲ್ ಒ ಗಳಿಗೆ ಸೀರೆ ಹಂಚಿಕೆ
ಶಾಸಕಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಬಿಎಲ್ ಒ( ಅಂಗನವಾಡಿ ಕಾರ್ಯಕರ್ತೆಯರು) ಗಳಿಗೆ ಕಾರವಾರ ತಾಪಂ ಸಭಾಭವನದಲ್ಲಿ ಸೀರೆ ಹಂಚಿದ್ದಾರೆ. ಈ ಸಂಬಂಧ ಸಿಪಿಐಎಂ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ತಾ.ಪಂ.ಸಭಾ ಭವನದಲ್ಲಿ ಬಿಜೆಪಿ ಗ್ರಾಮೀಣ ಪದಾಧಿಕಾರಿ ಸಮ್ಮುಖದಲ್ಲಿ ಬಿಎಲ್ ಒ ಗಳಿಗೆ ಸೀರೆ ಹಂಚಿದ್ದು ಅಧಿಕಾರದ ದುರ್ಬಳಕೆ ಎಂದು ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಅಪಾದಿಸಿದರು‌. ಈ ಬಗ್ಗೆ ಸಂಬಂಧಿಸಿದವರು ಕ್ರಮಕ್ಕೆ ಮುಂದಾಗಬೇಕು ಎಂದರು‌ . ಕಾರವಾರ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.