ಸಂತೋಷ್ ಪಾಟೀಲ್ ಯಾರು ಅಂತ ನನಗೆ ಗೊತ್ತಿಲ್ಲ: ಷಡ್ಯಂತ್ರ ಎಂದ ಈಶ್ವರಪ್ಪ
ಕೆಲಸವೇ ಮಾಡಿಸಿಲ್ಲ ಎಂದ ಮೇಲೆ ಹಣ ಕೊಡುವ ಪ್ರಶ್ನೆಯೇ ಇಲ್ಲ
Team Udayavani, Mar 29, 2022, 11:33 AM IST
ಬೆಂಗಳೂರು: ಸಂತೋಷ್ ಪಾಟೀಲ್ ಯಾರು ಎಂದು ನನಗೆ ಗೊತ್ತಿಲ್ಲ,ಯಾವುದೋ ಒಂದು ಷಡ್ಯಂತ್ರ ನಡೆದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸಂತೋಷ್ ಪಾಟೀಲ್ ಎಂಬ ವ್ಯಕ್ತಿ ದೆಹಲಿಗೆ ಹೋಗಿ ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ.ನಮ್ಮ ಕಡೆಯವರು ಯಾರೋ ಕಮಿಷನ್ ಕೇಳಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಅದಕ್ಕೆ ಗಿರಿರಾಜ್ ಸಿಂಗ್ ಕಿಶೋರ್ ಅವರ ಕಚೇರಿಯಿಂದ ನಮ್ಮ ಇಲಾಖೆ ಎಸಿಎಸ್ ಅತೀಕ್ ಅವರಿಂದ ವಿವರ ಕೇಳಿದ್ದರು. ಅವರು ಪಂಚಾಯತ್ ರಾಜ್ ಇಲಾಖೆಯಿಂದ ಸಂತೋಷ್ ಅವರಿಗೆ ಯಾವುದೇ ವರ್ಕ್ ಆರ್ಡರ್ ಮಂಜೂರು ಮಾಡಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸ್ಪಷ್ಟೀಕರಣ ಕಳುಹಿಸಿದ್ದಾರೆ ಎಂದರು.
ಸಂತೋಷ್ ಪಾಟೀಲ್ ಯಾರು ಅಂತಾ ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೂ ಕೇಳಿದೆ, ಅವರಿಗೂ ಗೊತ್ತಿಲ್ಲ. ನಮ್ಮ ಪಕ್ಷದ ನಾಯಕರಿಗೆ, ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತಾ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಸಂಸದರು ಸುದ್ದಿಗೋಷ್ಠಿ ಮಾಡಿ ಹೇಳಿದ್ದಾರೆ. ನಮ್ಮ ಇಲಾಖೆಯಿಂದ ಯಾವುದೇ ವರ್ಕ್ ಆರ್ಡರ್ ಅವರಿಗೆ ಕೊಟ್ಟಿಲ್ಲ. ಕೆಲಸವೇ ಮಾಡಿಸಿಲ್ಲ ಎಂದ ಮೇಲೆ ಹಣ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.
ಷಡ್ಯಂತ್ರದ ಬಗ್ಗೆ ಈಗಾಗಲೇ ಮಾರ್ಚ್ 10 ರಂದು ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ನಮ್ಮ ವಕೀಲರು ಈಗಾಗಲೇ ವಾದ ಮಾಡಿದ್ದಾರೆ, ನಾಳೆ ಅವರಿಗೆ ನೋಟೀಸ್ ಕೊಡುತ್ತಾರೆ. ಮಾರ್ಚ್ 9 ರಂದು ಈ ವಿಚಾರ ನನ್ನ ಗಮನಕ್ಕೆ ಬಂದಿತ್ತು. ಸಂತೋಷ್ ನಮ್ಮ ಪಕ್ಷದ ಕಾರ್ಯಕರ್ತ ಅಲ್ಲ ನಮ್ಮ ಬೆಳಗಾವಿ ಜಿಲ್ಲಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ. ದೂರಿನಲ್ಲಿ ಸಂತೋಷ್ ಪಾಟೀಲ್ ಮಾಡಿರುವ ಆರೋಪಕ್ಕೂ ನಮ್ಮ ಇಲಾಖೆಗೂ ಸಂಬಂಧವಿಲ್ಲ ಎಂದರು.
ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಷಡ್ಯಂತ್ರದಲ್ಲಿ ಯಾರ್ಯಾರು ಇದ್ದಾರೆ ಅಂತಾ ಇನ್ನೂ ನನಗೆ ಗೊತ್ತಿಲ್ಲ ಎಂದರು.
ಟಿಪ್ಪು ಸುಲ್ತಾನ್ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಮಿತಿ ರಾಜ್ಯ ಸರ್ಕಾರಕ್ಕೆ ಏನೇನು ವರದಿ ಕೊಟ್ಟಿದ್ದಾರೆ ಅಂತಾ ನನಗೆ ಇನ್ನೂ ಗೊತ್ತಿಲ್ಲ. ಅದನ್ನು ತಿಳಿದುಕೊಂಡು ನಂತರ ಪ್ರತಿಕ್ರಿಯೆ ಕೊಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ