ನನಗೆ ನನ್ನದೇ ಶಕ್ತಿಯಿದೆ; ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ: ಯಡಿಯೂರಪ್ಪ
Team Udayavani, Dec 15, 2022, 10:07 AM IST
ಬೆಂಗಳೂರು: ನನಗೆ ನನ್ನದೇ ಆದ ಶಕ್ತಿಯಿದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೇ ಮುಂದುವರೆಸುತ್ತೇನೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕೊಪ್ಪಳಕ್ಕೆ ತೆರಳುವುದಕ್ಕೆ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ನಡ್ಡಾ ಅವರು ಕೊಪ್ಪಳಕ್ಕೆ ಬರ್ತಿದ್ದಾರೆ. ಅವರ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಬೇರೆ ಕಾರಣಕ್ಕೆ ನಾನು ಇವತ್ತು ಕಾರ್ಯಕ್ರಮಕ್ಕೆ ಹೋಗದೇ ಇರುವ ಸ್ಥಿತಿಯಿತ್ತು. ಹೋಗಲೇ ಬೇಕೆಂಬ ಸ್ಥಿತಿ ಬಂತು. ಹೀಗಾಗಿ ಹೋಗುತ್ತಿದ್ದೇನೆ ಎಂದರು.
ಸಿಎಂ ಕೂಡಾ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳಿಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡಲು ಹೋಗಬೇಡಿ. ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ ನಮ್ಮದು ಒಂದೇ ಅಜೆಂಡಾ. ಮುಂದೆ ಚುನಾವಣೆ ಇದೆ, ಪಕ್ಷವನ್ನ ಅಧಿಕಾರಕ್ಕೆ ತರುವುದು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕುತ್ತೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಮೋದಿ, ಅಮಿತ್ ಶಾ, ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತದೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ನನ್ನನ್ನು ಪಕ್ಷ ಕಡೆಗಣನೆ ಮಾಡುತ್ತಿಲ್ಲ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲಾ ಕಾರ್ಯಕ್ರಮಗಳಿಗೆ ನಾನು ಹೋಗುತ್ತಿದ್ದೇನೆ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೋದು ಸರಿಯಲ್ಲವೆಂದು ಹೋಗಿಲ್ಲ ಅಷ್ಟೆ. ಆದರೆ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನನ್ನನ್ನ ಯಾರು ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಮಾಡುತ್ತೇನೆ ಎಂದರು.
ಇದನ್ನೂ ಓದಿ:ಅಸಾಮಾನ್ಯ ಆಟವಾಡಿದ ಫ್ರಾನ್ಸ್ ಫೈನಲ್ ಗೆ; ಇನ್ನು ಮೆಸ್ಸಿ ವರ್ಸಸ್ ಎಂಬಪ್ಪೆ ಕಾಳಗ
ಈ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗುವ ಸ್ಥಿತಿಯಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ. ನಡ್ಡಾ ಬರುತ್ತಿದ್ದಾರೆಂದು ಹೋಗುತ್ತಿದ್ದೇನೆ ಎಂದರು.
ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಮಾತಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಆರೋಪದಲ್ಲಿ ಸತ್ಯಾಂಶ ಇಲ್ಲ.ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ