ICC WTC Final: ಫೈನಲ್‌ ಭಾರತದ ಸ್ಪಿನ್‌ ದಾಳಿ ಕುರಿತು ಆಸೀಸ್‌ ಚಿಂತನೆ


Team Udayavani, Jun 3, 2023, 7:42 AM IST

WTC INDIA

ಬೇಕನ್‌ಹ್ಯಾಮ್‌ (ಇಂಗ್ಲೆಂಡ್‌): ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ ಎಷ್ಟು ಮಂದಿ ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಲಿದೆ, ಭಾರತದ ಸ್ಪಿನ್‌ ವ್ಯೂಹ ಹೇಗಿದ್ದೀತು ಎಂಬ ಬಗ್ಗೆ ಎದುರಾಳಿ ಆಸ್ಟ್ರೇಲಿಯ ಪಾಳೆಯದಲ್ಲಿ ಗಂಭೀರ ಚರ್ಚೆ, ಚಿಂತನೆಗಳು ನಡೆದಿವೆ ಎಂಬ ಬಗ್ಗೆ ವರದಿಯಾಗಿದೆ.

ಸಾಮಾನ್ಯವಾಗಿ ಇಂಗ್ಲೆಂಡ್‌ ಟ್ರಾಕ್‌ಗಳೆಲ್ಲ ವೇಗಿಗಳಿಗೆ ಹೆಚ್ಚಿನ ನೆರವು ನೀಡುವುದರಿಂದ ಇಲ್ಲಿ ಸ್ಪಿನ್‌ ಬಳಕೆ ಕಡಿಮೆ. ಆದರೆ ಆಸ್ಟ್ರೇಲಿಯವನ್ನು ಸ್ಪಿನ್‌ ಮೂಲಕ ಮಣಿಸಬಹುದು ಎಂಬುದು ಚಿಂತಕರ ಲೆಕ್ಕಾಚಾರ. ಈ ಕುರಿತು ಆಸೀಸ್‌ ತಂಡದ ಸಹಾಯಕ ಕೋಚ್‌ ಡೇನಿಯಲ್‌ ವೆಟರಿ ಮಾಧ್ಯಮದವರೊಂದಿಗೆ ಮಾತಾಡಿದ್ದು, ಭಾರತದ ಸ್ಪಿನ್‌ ಸಂಭಾವ್ಯರ ಕುರಿತು ನಾವು ಬಹಳಷ್ಟು ಚರ್ಚಿಸಿದ್ದೇವೆ ಎಂದಿದ್ದಾರೆ.

“ನಮ್ಮ ಪ್ರಕಾರ ರವೀಂದ್ರ ಜಡೇಜ ಮತ್ತು ಆರ್‌. ಅಶ್ವಿ‌ನ್‌ ಅವರ ಕಾಂಬಿನೇಶನ್‌ ಇರಲಿದೆ. ಇಬ್ಬರೂ ಬ್ಯಾಟಿಂಗ್‌ನಲ್ಲೂ ತಂಡದ ನೆರವಿಗೆ ನಿಲ್ಲಬಲ್ಲರು. ಇಂಗ್ಲೆಂಡ್‌ನ‌ಲ್ಲಿ ಅಶ್ವಿ‌ನ್‌ ದಾಖಲೆ ಉತ್ತಮ ಮಟ್ಟದಲ್ಲಿದೆ’ ಎಂಬುದಾಗಿ ವೆಟರಿ ಹೇಳಿದರು.

ಕಳೆದ ಬೋರ್ಡರ್‌-ಗಾವಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಇವರಿಬ್ಬರು ಭಾರತದ 2-1 ಸರಣಿ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಶ್ವಿ‌ನ್‌ 25 ವಿಕೆಟ್‌, ಜಡೇಜ 22 ವಿಕೆಟ್‌ ಹಾರಿಸಿದ್ದರು.

“ಓವಲ್‌ ವಿಕೆಟ್‌ ಹಾಗೆಯೇ ಇದೆ. ದಿನ ಕಳೆದಂತೆ ಇದು ಸ್ಪಿನ್ನಿಗೆ ನೆರವಾಗಲಿದೆ’ ಎಂದೂ ವೆಟರಿ ಅಭಿಪ್ರಾಯಪಟ್ಟರು.

ಯಾರೇ ಗೆದ್ದರೂ ದಾಖಲೆ!
ಈ ಟೆಸ್ಟ್‌ ಪಂದ್ಯವನ್ನು ಯಾರೇ ಗೆದ್ದರೂ ಅಲ್ಲೊಂದು ಇತಿಹಾಸ ನಿರ್ಮಾಣವಾಗಲಿದೆ. ಈಗಾಗಲೇ ಭಾರತ ಮತ್ತು ಆಸ್ಟ್ರೇಲಿಯ ತಂಡಗಳೆರಡೂ ಏಕದಿನ ವಿಶ್ವಕಪ್‌ ಹಾಗೂ ಟಿ20 ವಿಶ್ವಕಪ್‌ ಗೆದ್ದಿವೆ. ಟೆಸ್ಟ್‌ ವಿಶ್ವಕಪ್‌ ಗೆದ್ದರೆ ಈ ಮೂರನ್ನೂ ಜಯಿಸಿದ ವಿಶ್ವದ ಪ್ರಪ್ರಥಮ ತಂಡವಾಗಿ ಮೂಡಿಬರಲಿವೆ.
ಅಂದಹಾಗೆ, ಇಲ್ಲಿ ಗೆಲ್ಲಲೇಬೇಕೆಂದಿಲ್ಲ. ಪ್ರಥಮ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದರೂ ಸಾಕು. ಆ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಕಿರೀಟ ಏರಿಸಿಕೊಳ್ಳಲಿದೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.