ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌- ಟೀಮ್‌ ಇಂಡಿಯಾ ಕಠಿನ ಅಭ್ಯಾಸ


Team Udayavani, Jun 1, 2023, 7:05 AM IST

wtc final

ಲಂಡನ್‌: ಟಾಟಾ ಐಪಿಎಲ್‌ ಮುಗಿದೊಡನೆ ಭಾರ ತೀಯ ಕ್ರಿಕೆಟ್‌ನಲ್ಲಿ ಸಣ್ಣದೊಂದು ಶೂನ್ಯ ಆವರಿಸಿರುವುದು ಸುಳ್ಳಲ್ಲ. ಮುಂಬರುವ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಈ ಕೊರತೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ನೀಗಿಸಬಹುದೆಂಬ ನಿರೀಕ್ಷೆ ಇದೆ. ಇದನ್ನು ಕೂಡ ಏಕದಿನ ವಿಶ್ವಕಪ್‌ ಫೈನಲ್‌ ಅಥವಾ ಟಿ20 ವಿಶ್ವಕಪ್‌ ಫೈನಲ್‌ ಎಂಬ ರೀತಿಯಲ್ಲಿ ನೋಡಿದರೆ ರೋಮಾಂಚನಕ್ಕೇನೂ ಕೊರತೆ ಕಾಡದು.

ಈಗಾಗಲೇ ಭಾರತ, ಆಸ್ಟ್ರೇಲಿಯ ತಂಡಗಳ ಕ್ರಿಕೆಟಿಗರು ಲಂಡನ್‌ ತಲುಪಿದ್ದಾರೆ. ಕಠಿನ ಅಭ್ಯಾಸವನ್ನೂ ಆರಂಭಿಸಿದ್ದಾರೆ. ಕೊನೆಯ ಕ್ಷಣದಲ್ಲಿ ಟೀಮ್‌ ಇಂಡಿಯಾವನ್ನು ಸೇರಿಕೊಂಡ 21 ವರ್ಷದ ಯುವ ಆರಂಭಕಾರ ಯಶಸ್ವಿ ಜೈಸ್ವಾಲ್‌ ಕೂಡ ನೆಟ್‌ ಪ್ರ್ಯಾಕ್ಟೀಸ್‌ ಪ್ರಾರಂಭಿಸಿದ್ದಾರೆ. ಇವರು ನಾಯಕ ರೋಹಿತ್‌ ಶರ್ಮ ಜತೆ 3ನೇ ಬ್ಯಾಚ್‌ನಲ್ಲಿ ಲಂಡನ್‌ಗೆಆಗಮಿಸಿದ್ದರು. ಮೀಸಲು ಆಟಗಾರ ರುತುರಾಜ್‌ ಗಾಯಕ್ವಾಡ್‌ ಮದುವೆಯ ಕಾರಣ ಲಂಡನ್‌ಗೆ ತೆರಳದೇ ಇದ್ದುದರಿಂದ ಯಶಸ್ವಿ ಜೈಸ್ವಾಲ್‌ ಅವರನ್ನು ಆರಿಸಲಾಗಿತ್ತು.

ಯಶಸ್ವಿ ಜೈಸ್ವಾಲ್‌ ಮೊದಲ ಸಲ ಟೀಮ್‌ ಇಂಡಿಯಾ ಜತೆ ಅಭ್ಯಾಸ ನಡೆಸುತ್ತಿರುವ ವೀಡಿಯೋ ದೃಶ್ಯಾವಳಿಯನ್ನು ಐಸಿಸಿ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ. ಅವರಿಗೆ ಆರ್‌. ಅಶ್ವಿ‌ನ್‌ ಬೌಲಿಂಗ್‌ ನಡೆಸಿದ್ದರು. ಅಭ್ಯಾಸದ ಬಳಿಕ ಜೈಸ್ವಾಲ್‌ಗೆ ಅಶ್ವಿ‌ನ್‌ ಕೆಲವು ಟಿಪ್ಸ್‌ ನೀಡುತ್ತಿದ್ದರು. ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರಿಂದಲೂ ಜೈಸ್ವಾಲ್‌ ಕೆಲವು ಉಪಯುಕ್ತ ಟಿಪ್ಸ್‌ ಪಡೆದರು.

ಇನ್ನೊಂದೆಡೆ ಭಾರತೀಯ ಕ್ರಿಕೆಟಿಗರ ಅಭ್ಯಾಸದ ದೃಶ್ಯಾವಳಿಯನ್ನು ಬಿಸಿಸಿಐ ಕೂಡ ಟ್ವಿಟರ್‌ನಲ್ಲಿ ಹಾಕಿದೆ. ಇದರಲ್ಲಿ ವಿರಾಟ್‌ ಕೊಹ್ಲಿ, ಚೇತೇಶ್ವರ್‌ ಪೂಜಾರ, ರೋಹಿತ್‌ ಶರ್ಮ, ಶಾದೂìಲ್‌ ಠಾಕೂರ್‌, ಆರ್‌. ಅಶ್ವಿ‌ನ್‌ ಮೊದಲಾದವರೆಲ್ಲ ಅಭ್ಯಾಸ ನಡೆಸುತ್ತಿದ್ದುದನ್ನು ಕಾಣಬಹುದಿತ್ತು.

ಪೂಜಾರ ಪಾತ್ರ ಮಹತ್ವದ್ದಾಗಲಿದೆ: ಸುನೀಲ್‌ ಗಾವಸ್ಕರ್‌
ಇಂಗ್ಲೆಂಡ್‌ನ‌ಲ್ಲಿ ಕೌಂಟಿ ಕ್ರಿಕೆಟ್‌ ಆಡುತ್ತ ಅಮೋಘ ಫಾರ್ಮ್ ಪ್ರದರ್ಶಿಸಿರುವ ಚೇತೇಶ್ವರ್‌ ಪೂಜಾರ ಪಾತ್ರ ಭಾರತ ತಂಡಕ್ಕೆ ಮಹತ್ವದ್ದಾಗಿ ಪರಿಣಮಿಸಲಿದೆ ಎಂಬುದಾಗಿ ಮಾಜಿ ಕ್ರಿಕೆಟಿಗ ಸುನೀಲ್‌ ಗಾವಸ್ಕರ್‌ ಅಭಿಪ್ರಾಯಪಟ್ಟಿದ್ದಾರೆ.

“ಪೂಜಾರ ಸಸೆಕ್ಸ್‌ ಕೌಂಟಿ ಪರ ಆಡುತ್ತ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸುತ್ತ ಬಂದಿದ್ದಾರೆ. ಕೌಂಟಿಯ ನಾಯಕತ್ವವನ್ನೂ ವಹಿಸಿದ್ದಾರೆ. ಕೆಲವು ಕಾಲದಿಂದ ಇಂಗ್ಲೆಂಡ್‌ನ‌ಲ್ಲೇ ಇರುವ ಕಾರಣ ಭಾರತಕ್ಕೆ ಖಂಡಿತವಾಗಿಯೂ ಇವರಿಂದ ನೆರ ವಾಗಲಿದೆ’ ಎಂಬುದಾಗಿ ಗಾವಸ್ಕರ್‌ ಹೇಳಿದರು. ಕೌಂಟಿ ಋತುವಿನ ವೇಳೆ ಪೂಜಾರ ಓವಲ್‌ನಲ್ಲಿ ಆಡಿಲ್ಲ. ಆದರೆ ಸಸೆಕ್ಸ್‌ ಲಂಡನ್‌ನಿಂದ ಬಹಳ ದೂರವೇನಲ್ಲ ಎಂದೂ ಗಾವಸ್ಕರ್‌ ಹೇಳಿದರು.

ಇದೇ ಸಂದರ್ಭ ಸುನೀಲ್‌ ಗಾವಸ್ಕರ್‌ ಭಾರತದ ಬ್ಯಾಟರ್‌ಗಳಿಗೆ ಕೆಲವು ಉಪಯುಕ್ತ ಸಲಹೆಗಳನ್ನೂ ನೀಡಿದರು. “ಐಪಿಎಲ್‌ನಿಂದ ಬಂದವರಾದ ಕಾರಣ ಎಲ್ಲರೂ ತಮ್ಮ ಬ್ಯಾಟಿಂಗ್‌ ವೇಗವನ್ನು ಕಡಿಮೆ ಮಾಡಿಕೊಳ್ಳ ಬೇಕಾದ ಅಗತ್ಯವಿದೆ. ಹಾಗೆಯೇ ಬ್ಯಾಟಿಂಗ್‌ ನಿಯಂತ್ರಣ ಸಾಧಿಸಿ ಕ್ರೀಸ್‌ನಲ್ಲಿ ನಿಂತು ಆಡುವುದು ಮುಖ್ಯ’ ಎಂದರು.
ಇಂಗ್ಲೆಂಡ್‌ ವಾತಾವರಣ ಭಿನ್ನ ರೀತಿ ಯದ್ದು. ಚೆಂಡು ಸ್ವಿಂಗ್‌ ಪಡೆದುಕೊಳ್ಳುತ್ತದೆ. ಹೀಗಾಗಿ ಅವಸರದ ಬ್ಯಾಟಿಂಗ್‌ ಸಲ್ಲದು ಎಂದು ಗಾವಸ್ಕರ್‌ ಹೇಳಿದರು.

ಟಾಪ್ ನ್ಯೂಸ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.