ಅಜಿತ್ ಬಣ ಬಂದರೆ ನಾವಿಲ್ಲ – BJPಗೆ ಶಿಂಧೆ ಬಣದ ಎಚ್ಚರಿಕೆ
ಮಹಾರಾಷ್ಟ್ರ ಮತ್ತೂಂದು ರಾಜಕೀಯ ಬಿಕ್ಕಟ್ಟಿನ ಸುಳಿವು
Team Udayavani, Apr 20, 2023, 7:29 AM IST
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಬಲ ಕಂಪನ ಉಂಟಾಗುವ ಬಗೆಗಿನ ಸುಳಿಗಳು ಈಗಾಗಲೇ ವ್ಯಕ್ತವಾಗತೊಡಗಿವೆ ಎಂಬ ಸಂಕೇತಗಳು ಈಗಾಗಲೇ ವ್ಯಕ್ತವಾಗಿವೆ. ಎನ್ಸಿಪಿ ನಾಯಕ ಅಜಿತ್ ಪವಾರ್ ನೇತೃತ್ವದಲ್ಲಿ 40 ಮಂದಿ ಶಾಸಕರು ಬಿಜೆಪಿ ಜತೆಗೆ ಮೈತ್ರಿ ಮಾಡುಕೊಳ್ಳುವ ಸದ್ಯದ ವದಂತಿ ನಿಜವೇ ಆದರೆ, ನಾವು ಆ ಮೈತ್ರಿಕೂಟದಲ್ಲಿ ಇರುವುದಿಲ್ಲ. ಜತೆಗೆ ಸರ್ಕಾರದಲ್ಲೂ ಭಾಗಿಯಾಗುವುದಿಲ್ಲ ಎಂದು ಶಿವಸೇನೆಯ ಏಕನಾಥ ಶಿಂಧೆ ಬಣ ಬುಧವಾರ ಕಟುವಾದ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮುಂಬೈನಲ್ಲಿ ಮಾತನಾಡಿದ ಶಿಂಧೆ ಬಣದ ವಕ್ತಾರ ಸಂಜಯ ಶಿರ್ಸತ್ “ಎನ್ಸಿಪಿ ನೇರವಾಗಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ನಮ್ಮ ಗುಂಪಿನ ನಿಲುವು ಅತ್ಯಂತ ಸ್ಪಷ್ಟವಾಗಿದೆ. ಒಂದು ವೇಳೆ ಬಿಜೆಪಿ, ಅಜಿತ್ ಪವಾರ್ ನೇತೃತ್ವದ ಬಣದ ಜತೆಗೆ ಕೈಜೋಡಿಸಿದರೆ ಮಹಾರಾಷ್ಟ್ರದ ಜನರು ಅದಕ್ಕೆ ಬೆಂಬಲ ನೀಡುವುದಿಲ್ಲ. ನಾವು ಆ ಗುಂಪಿನ ಜತೆಗೆ ಅಧಿಕಾರದಲ್ಲಿ ಇರಲು ಬಯಸುವುದಿಲ್ಲ. ಎನ್ಸಿಪಿ ಜತೆಗೆ ಅಧಿಕಾರ ಹಂಚಿಕೊಳ್ಳದೇ ಇರಲು ರಾಜ್ಯದ ಜನರು ಉದ್ದೇಶಿಸಿದ್ದರಿಂದಲೇ ಶಿವಸೇನೆ 2 ಹೋಳು ಆಗಬೇಕಾಯಿತು” ಎಂದು ಹೇಳಿದ್ದಾರೆ.
ಇದೇ ಉದ್ದೇಶಕ್ಕಾಗಿಯೇ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿತು ಎಂದರು ಶಿರ್ಸತ್. ಸದ್ಯ ಪ್ರತಿಪಕ್ಷ ನಾಯಕರಾಗಿರುವ ಅಜಿತ್ ಪವಾರ್ ಅವರಿಗೆ ತಮ್ಮ ಪುತ್ರ ಪಾರ್ಥ ಪವಾರ್ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಆ ನೋವು ಅವರನ್ನು ಕಾಡುತ್ತಿದೆಯೇ ಹೊರತು, ಏಕನಾಥ ಶಿಂಧೆ ನೇತೃತ್ವದ 16 ಮಂದಿ ಶಾಸಕರ ವಿರುದ್ಧದ ಅನರ್ಹತೆ ಪ್ರಕರಣದ ತೀರ್ಪು ಬರಲಿದೆ ಎಂಬುದು ಅಂಶವೇ ಅಲ್ಲ. ಎರಡೂ ಭಿನ್ನವಾಗಿರುವ ವಿಚಾರಗಳು ಎಂದು ಹೇಳಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಪಾರ್ಥ ಪವಾರ್ ಮಾವಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
15 ದಿನಗಳಲ್ಲಿ 2 ರಾಜಕೀಯ ಭೂಕಂಪ: ಸುಪ್ರಿಯಾ
“ಇನ್ನು ಹದಿನೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಮತ್ತು ನವದೆಹಲಿಯಲ್ಲಿ ಎರಡು ಪ್ರಬಲ ರಾಜಕೀಯ ಭೂಕಂಪ ಸಂಭವಿಸಲಿದೆ” ಎಂದು ಬಾರಾಮತಿ ಲೋಕಸಭಾ ಕ್ಷೇತ್ರದ ಸಂಸದೆ, ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಭವಿಷ್ಯ ನುಡಿದಿದ್ದಾರೆ. ಆದರೆ ಎರಡು ಕಂಪನಗಳ ಬಗ್ಗೆ ಅವರು ಹೆಚ್ಚು ವಿವರಣೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ