ಯಡಿಯೂರಪ್ಪನವರಂತಹ ನಾಯಕ ಹುಡುಕಿದರೂ‌ ಸಿಗುವುದಿಲ್ಲ: ಸಿಎಂ ಬೊಮ್ಮಾಯಿ

ಶಿಕಾರಿಪುರದಲ್ಲಿ‌ ರೈತಾಭಿಮಾನ‌ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹಾಡಿ ಹೊಗಳಿದ ಹಾಲಿ ಸಿಎಂ

Team Udayavani, Mar 5, 2022, 5:34 PM IST

1-sdds

ಶಿಕಾರಿಪುರ : ನಾನು ರಾಜಕಾರಣದಲ್ಲಿ ಇಷ್ಟರಮಟ್ಟಿಗೆ ಬೆಳೆದಿದ್ದರೆ ಅದಕ್ಕೆ ಆಶೀರ್ವಾದ ಮಾಡಿದ್ದು ಯಡಿಯೂರಪ್ಪ ಅವರು, ಇಂಥ ದೊಡ್ಡ‌ ಮನಸ್ಸಿನ ನಾಯಕ ಹುಡುಕಿದರೂ‌ ಸಿಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಅವರನ್ನು ಶನಿವಾರ ಹಾಡಿ ಹೊಗಳಿದ್ದಾರೆ.

ಶಿಕಾರಿಪುರದಲ್ಲಿ‌ ನಡೆದ ರೈತಾಭಿಮಾನ‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, ಯಡಿಯೂರಪ್ಪ ಅವರು ಬಡವರು ಬಗ್ಗೆ ದೀನ‌ದಲಿತರ ಬಗ್ಗೆ ಕಾಳಜಿ ಇರುವವರಾಗಿದ್ದಾರೆ. ನನ್ನನ್ನು ಪ್ರೀತಿ ವಿಶ್ವಾಸದಿಂದ ಬೆಳೆಸಿ ಅಧಿಕಾರವನ್ನು ನೀಡಿದ್ದಾರೆ. ನನ್ನನ್ನು ಜಲಸಂಪನ್ಮೂಲ‌ ಸಚಿವವನ್ನು ಮಾಡಿ ನೀರಾವರಿ ಯೋಜನೆ ರೂಪಿಸುವ ಕೆಲಸ ಮಾಡಿಸಿದವರು.ಭದ್ರಾ ಮೇಲ್ದಂಡೆ ಯೋಜನೆಯನ್ನು ನನ್ನ ಅವಧಿಯಲ್ಲೇ ಮಾಡಿದ್ದು ಎಂಬ ಸಂತಸ ನನಗಿದೆ. ಭದ್ರಾ ಮೇಲ್ದಂಡೆ ಯೋಜನೆ ಇದೀಗ ರಾಷ್ಟ್ರೀಯ ಯೋಜನೆಯಾಗುತ್ತಿದೆ. ಇದರ ಶ್ರೇಯಸ್ಸು ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ ಎಂದರು.

ದೂರದೃಷ್ಟಿಯ ನಾಯಕತ್ವ ಇದ್ದವರು ಇದ್ದರೆ ರಾಜ್ಯ ಸುಭೀಕ್ಷವಾಗುತ್ತದೆ ಎಂಬುದಕ್ಕೆ ಯಡಿಯೂರಪ್ಪ ಅವರೇ ನಿದರ್ಶನ.ಶಿಕಾರಿಪುರ ತಾಲೂಕು ಸಂಪೂರ್ಣ ನೀರಾವರಿಯಾಗುತ್ತಿದೆ.ನಾನು ನೀರಾವರಿ ಸಚಿವನಾದಾಗ ನಾನು ಚಾಮರಾಜ ನಗರಕ್ಕೆ ಹೋಗಿದ್ದೆ.ಆಗ ಸುತ್ತೂರು ಶ್ರೀಗಳು ನೀರಾವರಿ ಯೋಜನೆ ರೂಪಿಸುವಂತೆ ಸಲಹೆ ನೀಡಿದರು.ಆಗ ಕಬಿನಿ ಸೆಕೆಂಡ್ ಸ್ಟೇಜ್ ಯೋಜನೆ ರೂಪಿಸಲು ಕಾರಣಿಕರ್ತರಾದವರು ಯಡಿಯೂರಪ್ಪ ಅವರು.ಬಳಿಕ ನಾವು ಅಧಿಕಾರ ಕಳೆದುಕೊಂಡೆವು. ಆದರೂ ಜನ ಯಡಿಯೂರಪ್ಪ ಅವರನ್ನು ಹುಡುಕಿಕೊಂಡು ಬಂದು ಸನ್ಮಾನ ಮಾಡುತ್ತಿದ್ದರು.ಈ ರೀತಿಯ ಪ್ರೀತಿ ಸಿಗಬೇಕು ಎಂದರೆ ಹಾಗೆ ಕೆಲಸವನ್ನೂ ಮಾಡಬೇಕು. ಯಡಿಯೂರಪ್ಪ ರಾಜ್ಯದ ಮೂಲೆ ಮೂಲೆಯಲ್ಲಿ ಕೆಲಸ ಮಾಡಿದ್ದಾರೆ. ಅವರ ಕೆಲಸಗಳು ಇಂದು ಮಾತನಾಡುತ್ತಿವೆ ಎಂದರು.

ಯಾವುದೇ ಕೆಲಸ ಮಾಡಬೇಕು ಎಂದು ಕೊಂಡರೆ ಅದನ್ನು ಮಾಡಿಯೇ ತೀರುವವರು ಯಡಿಯೂರಪ್ಪ ಅವರು.ನಾಯಕನಿಗೆ ಸೂಕ್ಷ್ಮತೆ ಇರಬೇಕು ಎಂಬುದನ್ನು ನಾವು ಯಡಿಯೂರಪ್ಪ ಅವರನ್ನು ನೋಡಿ ಕಲಿಯಬೇಕಿದೆ. ರೈತರಿಗೆ ಹತ್ತು ಎಚ್ ಪಿ ಪಂಪ್ ವರೆಗೆ ಉಚಿತ ವಿದ್ಯುತ್ ನೀಡಿದ್ದು ಯಡಿಯೂರಪ್ಪ ಅವರು. ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 58 ಲಕ್ಷ ರೈತರಿಗೆ ತಲಾ 4 ಸಾವಿರ ರೂಪಾಯಿ ರಾಜ್ಯದ ಪಾಲನ್ನು ನೀಡಿದ್ದು ಯಡಿಯೂರಪ್ಪ ಅವರು.ಅವರು ಎಂದು ವೈಯಕ್ತಿಕವಾಗಿ ಯೋಚಿಸುವುದಿಲ್ಲ‌. ಅವರು ಅಧಿಕಾರ ಬಿಟ್ಟಾಗಲೂ ಅವರಲ್ಲಿ ಕಹಿ ಎಂಬುದಿರಲಿಲ್ಲ‌. ಮತ್ತೆ ರಾಜ್ಯ ಸುತ್ತಿ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂಬುದ ಅವರ ಬದ್ಧತೆ ತೋರುತ್ತಿದೆ ಎಂದರು.

ರಾಜ್ಯದಲ್ಲಿ ಕೋವಿಡ್ ಯಶಸ್ವಿಯಾಗಿ ನಿಭಾಯಿಸಿದ್ದು ಯಡಿಯೂರಪ್ಪ ಅವರು‌.ಬಜೆಟ್ ನಲ್ಲಿ ಇದನ್ನು‌ನಾನು ಹೇಳಿದ್ದೇನೆ.ಯಡಿಯೂರಪ್ಪ ಹಾಕಿಕೊಟ್ಟ ಯೋಜನೆಗಳು ಹಾಗೂ ಹಾದಿಯಲ್ಲಿ ನಾವು ನಡೆಯುತಿದ್ದೇವೆ.ನಾನು ಬಜೆಟ್ ನಲ್ಲಿ ದುಡಿಮೆಯೇ ದೊಡ್ಡಪ್ಪ ಎಂದು ಹೇಳಿದ್ದೇನೆ.
ನಾನು‌ ಜನರಲ್ಲಿ ನಂಬಿಕೆ ಇಟ್ಟಿದ್ದೇನೆ. ಅವರಿಗೆ ಸಹಾಯ ಮಾಡಿದಾರೆ ದುಡಿದು ಹೆಚ್ಚಿನ ಆದಾಯ ಗಳಿಸುತ್ತಾರೆ ಎಂಬ ನಂಬಿಕೆ ನನಗಿದೆ. ಕರ್ನಾಟಕ ಇಡೀ ದೇಶದಲ್ಲಿ ಮಾದರಿಯಾಗಬೇಕು‌ ಎಂಬ ಯಡಿಯೂರಪ್ಪ ಅವರ ಆಸೆಯಂತೆಯೇ ನಾನು ಕೆಲಸ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.