ಬಹುಮತ ಕೊಡದಿದ್ದರೆ ಕಳ್ಳರ ಸರಕಾರ ಬಂದೀತು: ರಾಹುಲ್‌


Team Udayavani, May 7, 2023, 7:18 AM IST

rahul gandhi

ಬೆಳಗಾವಿ: ರಾಜ್ಯದ ಮತದಾರರು ಈ ಬಾರಿ ಕಾಂಗ್ರೆಸ್‌ಗೆ ಕನಿಷ್ಠ 150 ಸ್ಥಾನಗಳನ್ನು ನೀಡಬೇಕು. ಇಲ್ಲದಿದ್ದರೆ ಮತ್ತೆ ಕಳ್ಳರು ನಮ್ಮ ಶಾಸಕರನ್ನು ಕದ್ದುಕೊಂಡು ಹೋಗಿ ಸರಕಾರ ರಚಿಸುತ್ತಾರೆ. ಆಗ ರಾಜ್ಯದಲ್ಲಿ ಮತ್ತೂಮ್ಮೆ ಕಳ್ಳರ ಸರಕಾರ ಬರಲಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.
ಯಮಕನಮರಡಿ ಕ್ಷೇತ್ರದಲ್ಲಿ ಶನಿವಾರ ಕಾಂಗ್ರೆಸ್‌ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ವೇಳೆ ಮತ್ತೆ ಕಳ್ಳರ ಸರಕಾರ ಬಂದರೆ ಬಡ- ಮಧ್ಯಮ ವರ್ಗದ ಜನರ ಲೂಟಿ ಆಗಲಿದೆ. ಈ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು ಎಂದರು.

ಭಾಷಣದುದ್ದಕ್ಕೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ ರಾಹುಲ್‌, ಕರ್ನಾಟಕದಲ್ಲಿ ಮೇಲಿಂದ ಮೇಲೆ ಪ್ರವಾಸ ಮಾಡುತ್ತಿರುವ ಮೋದಿ ಅವರು ಇದುವರೆಗೆ ಎಲ್ಲಿಯೂ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ ಏನು ಮಾಡುತ್ತೇವೆ ಎಂಬುದನ್ನು ಹೇಳಿಲ್ಲ. ಆದರೆ ಪ್ರತಿ ಭಾಷಣದಲ್ಲಿ ಒಂದಿಲ್ಲೊಂದು ನೆಪ ಹೇಳುತ್ತಾರೆ. ಭಾವನಾತ್ಮಕವಾಗಿ ಜನರನ್ನು ಕಟ್ಟಿ ಹಾಕುವ ಪ್ರಯತ್ನ ಮಾಡುತ್ತಾರೆ ಎಂದರು.

ಕರ್ನಾಟಕದಲ್ಲಿ ಪ್ರವಾಹ ಬಂದಾಗ ಪ್ರಧಾನಿ ಮೋದಿ ಏನು ಮಾಡಿದ್ದಾರೆ? ಎರಡು ರಾಜ್ಯಗಳ ನಡುವೆ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಕರ್ನಾಟಕದ ಪರ ಏನು ಮಾಡಿದ್ದಾರೆಂದು ಪ್ರಶ್ನಿಸಿದ ರಾಹುಲ್‌, ಇವತ್ತು ಪ್ರಧಾನಿಗಳು ಯಾವ ಮುಖ್ಯ ವಿಷಯದ ಬಗ್ಗೆಯೂ ಮಾತನಾಡದೆ, ನನಗೆ 91 ಸಲ ಬೈದರು ಎಂಬುದರ ಲೆಕ್ಕ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬರುತ್ತಿದ್ದಂತೆ ಈಗಾಗಲೇ ನೀಡಿರುವ ಐದು ಗ್ಯಾರಂಟಿ ಭರವಸೆಗಳನ್ನು ತತ್‌ಕ್ಷಣ ಕಾರ್ಯರೂಪಕ್ಕೆ ತರುತ್ತೇವೆ. ಮೊದಲ ಸಂಪುಟ ಸಭೆಯಲ್ಲೇ ಈ ಭರವಸೆಗಳಿಗೆ ಅನುಮೋದನೆ ನೀಡಲಾಗುವುದು ಎಂದರು.

ನಾವು ಬಿಜೆಪಿಯಂತೆ ಸುಳ್ಳು ಭರವಸೆ ನೀಡಿಲ್ಲ. ನೋಟು ಅಮಾನ್ಯದಂತಹ ಕೆಟ್ಟ ಕೆಲಸಗಳನ್ನು ಮಾಡಿಲ್ಲ. ಬಿಜೆಪಿ ಮೂರು ವರ್ಷಗಳಲ್ಲಿ ಜನರಿಂದ ಲೂಟಿ ಮಾಡಿದ ಹಣವನ್ನು ಗೃಹಲಕ್ಮಿ, ಸಖೀ ಮೊದಲಾದ ಐದು ಗ್ಯಾರಂಟಿ ಯೋಜನೆಗಳ ಮೂಲಕ ಮರಳಿ ಜನರಿಗೆ ಕೊಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.