ಅರ್ಕಾವತಿ ಭೂ ಹಗರಣ ತನಿಖೆಯಾದರೆ ಕಾಂಗ್ರೆಸ್‌ ಬಣ್ಣ ಬಯಲು: ನಡ್ಡಾ


Team Udayavani, May 1, 2023, 7:31 AM IST

nadda

ಹೊನ್ನಾಳಿ: ರಾಜ್ಯದಲ್ಲಿ 2013ರಿಂದ 2018ರ ವರೆಗೆ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಿಎಸ್‌ಐ, ಶಿಕ್ಷಕರ ಹಗರಣ ಸಹಿತ ಪ್ರತಿ ವರ್ಷ ಹಗರಣಗಳನ್ನು ಮಾಡಿದೆ. ಅರ್ಕಾವತಿ ಭೂ ಹಗರಣದಲ್ಲಿ 8 ಸಾವಿರ ಕೋಟಿ ರೂ.ಗಳ ಹಗರಣ ನಡೆದಿದ್ದು, ತನಿಖೆಗೊಳಪಡಿಸಿದರೆ ಕಾಂಗ್ರೆಸ್‌ನವರ ಬಣ್ಣ ಬಯಲಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಪಟ್ಟಣದ ಅಗಳ ಮೈದಾನದಲ್ಲಿ ಹೊನ್ನಾಳಿ-ನ್ಯಾಮತಿ ಮಂಡಲದ ವತಿ ಯಿಂದ ಬಿಜೆಪಿ ಅಭ್ಯರ್ಥಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಪರ ರವಿವಾರ ಹಮ್ಮಿಕೊಂಡಿದ್ದ ಚುನಾವಣ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಇದ್ದಾಗ ರಾಜ್ಯದ ವಿವಿಧ ಕಡೆ ಬಾಂಬ್‌ ಸ್ಫೋಟ ಹಾಗೂ ಹಲವಾರು ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿವೆ. ಹಲವು ಆರೋಪಿಗಳ ಮೇಲಿದ್ದ ಪ್ರಕರಣಗಳನ್ನು ಅಂದಿನ ಸರಕಾರ ಹಿಂಪಡೆದಿತ್ತು ಎಂದು ಆರೋಪಿಸಿದರು.

ಕಾಂಗ್ರೆಸ್‌ ಸರಕಾರ ಬಂದರೆ ಎಸ್‌ಸಿ-ಎಸ್‌ಟಿ, ಲಿಂಗಾಯತ, ಒಕ್ಕಲಿಗ ಸಮಾಜಕ್ಕೆ ಹೆಚ್ಚಿಸಿರುವ ಮೀಸಲಾತಿಯನ್ನು ವಾಪಸ್‌ ಪಡೆಯುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಕಾರ್ಡ್‌ ಹೆಸರಿನಲ್ಲಿ ಗೃಹಿಣಿಯರಿಗೆ 2 ಸಾವಿರ ರೂ. ಸಹಿತ ಇಲ್ಲಸಲ್ಲದ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎನ್ನುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಅ ಧಿಕಾರಕ್ಕೆ ಬರುವುದೇ ಇಲ್ಲ. ಭ್ರಷ್ಟಾಚಾರದಲ್ಲಿ ಸಿಲುಕಿ ಈಗ ಜಾಮೀನಿನಲ್ಲಿರುವ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ , ಸೋನಿಯಾ ಗಾಂಧಿ  ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ ಬಿಜೆಪಿಯನ್ನು ಟೀಕಿಸುವ ಯಾವುದೇ ನೈತಿಕತೆಯಿಲ್ಲ ಎಂದು ಹೇಳಿದರು.

2014ಕ್ಕೆ ಮುನ್ನ ಭಾರತ ಇತರ ದೇಶಗಳ ಮುಂದೆ ಮಂಡಿಯೂರುವ ಪರಿಸ್ಥಿತಿ ಇತ್ತು. 2014ರ ಬಳಿಕ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನಮ್ಮ ದೇಶದಲ್ಲಷ್ಟೇ ಅಲ್ಲ, ವಿಶ್ವದ ಅಗ್ರಗಣ್ಯ ರಾಷ್ಟ್ರಗಳು ಭಾರತದತ್ತ ನೋಡುವ ಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ. ವಿಶ್ವದ ದೊಡ್ಡ ದೇಶಗಳೆಂದು ಹೆಸರು ಮಾಡಿರುವ ಅಮೆರಿಕ, ಬ್ರಿಟನ್‌, ರಷ್ಯಾ ಮುಂತಾದವು ನಮ್ಮ ದೇಶಕ್ಕೆ ತಲೆ ಬಾಗಿವೆ. ಇದಕ್ಕಿಂತ ದೊಡ್ಡ ಸಾಧನೆ ಇನ್ನೇನಿದೆ ಎಂದು ಪ್ರಶ್ನಿಸಿದರು.

ಶಾಸಕ ಎಂ.ಪಿ. ರೇಣುಕಾಚಾರ್ಯ, ಸಂಸದ ಜಿ.ಎಂ. ಸಿದ್ದೇಶ್ವರ, ವಿಧಾನ ಪರಿಷತ್‌ ಮಾಜಿ ಸದಸ್ಯ ಡಾ| ಶಿವಯೋಗಿ ಸ್ವಾಮಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಕಾಂಗ್ರೆಸ್‌-ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖ
ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅ ಧಿಕಾರದಲ್ಲಿದ್ದಾಗ ಕಿಸಾನ್‌ ಸಮ್ಮಾನ್‌ ಯೋಜನೆಗೆ ಕೇವಲ 17 ಫಲಾನುಭವಿಗಳ ಹೆಸರು ಕಳುಹಿಸಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಿಂದ 54 ಲಕ್ಷ ರೈತ ಫಲಾನುಭವಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಇದು ಬಿಜೆಪಿ ಮತ್ತು ಇತರ ಪಕ್ಷಗಳ ನಾಯಕರಿಗೆ ಇರುವ ವ್ಯತ್ಯಾಸ ಎಂದು ಜೆ.ಪಿ. ನಡ್ಡಾ ಕುಟುಕಿದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.