ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಹಿಜಾಬ್ ಹಾಕಿಸುತ್ತಾರೆ: ಸಚಿವ ಸುನೀಲ್ ಕುಮಾರ್
Team Udayavani, Feb 9, 2022, 10:57 AM IST
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ ಎಂದು ಸಚಿವ ಸುನೀಲ್ ಕುಮಾರ್ ಬುಧವಾರ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕರ್ನಾಟಕವನ್ನು ಕಾಂಗ್ರೆಸ್ ನಾಯಕರು, ಸಿದ್ದರಾಮಯ್ಯ ಏನು ಮಾಡುವುದಕ್ಕೆ ಹೊರಟಿದ್ದಾರೆ? ಎಂದು ಪ್ರಶ್ನಿಸಿದರು.
ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳುತ್ತಾರೆ. ಹಿಜಾಬ್ ಗೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶ ನಿರೀಕ್ಷೆ ಮಾಡುತ್ತಿದ್ದೇವೆ ಎಂದರು.
ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ಕಾಯ್ದೆಯನ್ನು ಅನುಷ್ಟಾನಕ್ಕೆ ತರುವ ಕೆಲಸ ಆಗಬೇಕು ಎಂದರು.
ಇದನ್ನೂ ಓದಿ:ಶಿವಮೊಗ್ಗ:ನಿನ್ನೆ ಕೇಸರಿ ಧ್ವಜ: ಇಂದು ತ್ರಿವರ್ಣ ಧ್ವಜ ಹಾರಿಸಿದ ಎನ್ ಎಸ್ಯುಐ
ಕಾಂಗ್ರೆಸ್ ದ್ವೇಷವನ್ನು ಹಚ್ಚುವ ಕೆಲಸ ಮಾಡುತ್ತಿದೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತದೆ. ಯಾರು ಪ್ರತ್ಯೇಕವಾಗಿ ಇರಬೇಕು ಎಂದು ಬಯಸುತ್ತಿದ್ದಾರೋ ಅವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಸಮವಸ್ತ್ರ ಸಂಹಿತೆ ಎಲ್ಲರೂ ಪಾಲಿಸಿಕೊಂಡೇ ಬರಬೇಕು. ಕಾಲೇಜಿನಲ್ಲಿ ಈ ರೀತಿಯ ಭಾವನೆ ಸೃಷ್ಟಿ ಮಾಡುವುದಕ್ಕೆ ಯಾರು ಕಾರಣ? ಪ್ರತ್ಯೇಕವಾದವನ್ನು ಕೇಳುವವರಿಗೆ ಯಾರು ಬೆಂಬಲಿಸುತ್ತಾದ್ದಾರೆ? ಇದೊಂದು ವ್ಯವಸ್ಥಿತವಾದ ಪಿತೂರಿ ಎಂದು ಕಿಡಿಕಾರಿದರು.
ಸರ್ಕಾರಿ ಶಾಲೆಗೆ ಫೀಸ್ ಕಟ್ಟಲು ಆಗದವರಿಗೆ ಕೋರ್ಟ್ ಮೆಟ್ಟಿಲು ಹತ್ತುವುದಕ್ಕೆ ಯಾರು ಬೆಂಬಲ ಕೊಟ್ಟಿದ್ದಾರೆ. ಎಸ್ ಡಿ ಪಿ ಐ ಒಂದು ರಾಜಕೀಯ ಪಾರ್ಟಿ ಅದನ್ನು ಬ್ಯಾನ್ ಮಾಡುವುದಕ್ಕೆ ಏನೇನು ಪ್ರೊಸೆಸ್ ಇದೆ ನಿಮಗೆ ಗೊತ್ತಿದೆ. ಮಂಗಳೂರಿನಲ್ಲಿ ಪಿಎಫ್ಐ, ಎಸ್ ಡಿ ಪಿ ಐ ಜೊತೆ ಒಳ ಒಪ್ಪಂದ ಮಾಡಿಕೊಂಡವರು ಕಾಂಗ್ರೆಸ್ನವರು ಎಂದು ಆರೋಪಿಸಿದರು.