IPL 2023: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಜಸ್ಥಾನ್‌ಗೆ `ರಾಯಲ್‌’ ಗೆಲುವು


Team Udayavani, Apr 28, 2023, 5:54 AM IST

RAJSTAN ROYALS

ಜೈಪುರ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ರಾಜಸ್ಥಾನ್‌ ರಾಯಲ್ಸ್‌ ತಂಡವು ಗುರುವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು 32 ರನ್ನುಗಳಿಂದ ಸೋಲಿಸಿದೆ.

ಯಶಸ್ವಿ ಜೈಸ್ವಾಲ್‌ ಅವರ ಅಮೋಘ ಆಟ ಮತ್ತು ಆ್ಯಡಂ ಝಂಪ ಅವರ ನಿಖರ ದಾಳಿಯಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಬ್ಯಾಟಿಂಗ್‌ ಕುಸಿತಕ್ಕೆ ಒಳಗಾಗಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟಿಗೆ 170 ರನ್‌ ಗಳಿಸಲಷ್ಟೇ ಶಕ್ತವಾಯಿತು. ಈ ಮೊದಲು ರಾಜಸ್ಥಾನ್‌ 5 ವಿಕೆಟಿಗೆ 202 ರನ್ನುಗಳ ಸ್ಪರ್ಧಾತ್ಮಕ ಮೊತ್ತ ದಾಖಲಿಸಿತ್ತು.
ಈ ಗೆಲುವಿನಿಂದ ರಾಜಸ್ಥಾನ್‌ ಇದೀಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ರಾಜಸ್ಥಾನ್‌ ಅಲ್ಲದೇ ಗುಜರಾತ್‌ಮತ್ತು ಚೆನ್ನೈ ತಲಾ ಹತ್ತು ಅಂಕ ಹೊಂದಿದ್ದು ಉತ್ತಮ ರನ್‌ಧಾರಣೆಯ ಆಧಾರದಲ್ಲಿ ರಾಜಸ್ಥಾನ ಮೊದಲ, ಗುಜರಾತ್‌ ದ್ವಿತೀಯ ಮತ್ತು ಚೆನ್ನೈ 3ನೇ ಸ್ಥಾನದಲ್ಲಿದೆ.

ಚೆನ್ನೈಯ ಆರಂಭ ಉತ್ತಮವಾಗಿತ್ತು. ರುತುರಾಜ್‌ ಗಾಯಕ್ವಾಡ್‌ ಸಿಡಿಯಲು ಆರಂಭಿಸಿದರೆ ಡೇವನ್‌ ಕಾನ್ವೆ ಅವರ ಆಟಕ್ಕೆ ಝಂಪ ಬ್ರೇಕ್‌ ನೀಡುವಲ್ಲಿ ಯಶಸ್ವಿಯಾದರು. ಅವರಿಬ್ಬರು ಮೊದಲ ವಿಕೆಟಿಗೆ 42 ರನ್‌ ಪೇರಿಸಿದ್ದರೂ ಇದರಲ್ಲಿ ಕಾನ್ವೆ ಕೊಡುಗೆ ಕೇವಲ 8 ರನ್‌ ಮಾತ್ರ. ಎರಡನೆಯವರಾಗಿ ರುತುರಾಜ್‌ ಔಟ್‌ ಆದಾಗ 47 ರನ್‌ ಗಳಿಸಿದ್ದರು. ಆಬಳಿಕ ಚೆನ್ನೈ ರಹಾನೆ ಮತ್ತು ಅಂಬಾಟಿ ರಾಯುಡು ಅವರನ್ನು ಬೇಗನೇ ಕಳೆದುಕೊಂಡು ಒತ್ತಡಕ್ಕೆ ಬಿತ್ತು.

ಆಬಳಿಕ ಶಿವಂ ದುಬೆ ಮತ್ತು ಮೊಯಿನ್‌ ಅಲಿ ತಂಡವನ್ನು ಆಧರಿಸುವ ಪ್ರಯತ್ನ ನಡೆಸಿದ್ದರೂ ಯಶ ದೊರಕಲಿಲ್ಲ. ಈ ಜೋಡಿಯನ್ನು ಮತ್ತೆ ಮುರಿದ ಝಂಪ ಚೆನ್ನೈಗೆ ಪ್ರಬಲ ಹೊಡೆತವಿಕ್ಕಿದರು. ಝಂಪ 22 ರನ್ನಿಗೆ 3 ವಿಕೆಟ್‌ ಕಿತ್ತು ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡರು. ಇನ್ನಿಂಗ್ಸ್‌ನ ಅಂತಿಮ ಎಸೆತದಲ್ಲಿ 52 ರನ್‌ ಗಳಿಸಿದ ಶಿವಂ ದುಬೆ ಔಟಾದರು.

ಉತ್ತಮ ಆರಂಭ
ಇನ್ನಿಂಗ್ಸ್‌ ಆರಂಭಿಸಿದ ಜೈಸ್ವಾಲ್‌ ಮತ್ತು ಜಾಸ್‌ ಬಟ್ಲರ್‌ ಅವರು ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಚೆನ್ನೈ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಅವರಿಬ್ಬರು ಮೊದಲ ವಿಕೆಟಿಗೆ ಕೇವಲ 8.2 ಓವರ್‌ಗಳಲ್ಲಿ 86 ರನ್‌ ಸಿಡಿಸಿದ್ದರು. ಜೈಸ್ವಾಲ್‌ ಮೊದಲ ಓವರಿನಿಂದಲೇ ಸಿಡಿಯಲು ಆರಂಭಿಸಿದ್ದರು. ಆಕಾಶ್‌ ಸಿಂಗ್‌ ಅವರ ಮೊದಲ ಓವರಿನಲ್ಲಿ ಮೂರು ಜೈಸ್ವಾಲ್‌ ಮೂರು ಬೌಂಡರಿ ಬಾರಿಸಿದ್ದರು. ಸಿಂಗ್‌ ಅವರ ಎರಡನೇ ಓವರಿನಲ್ಲಿ ಜೈಸ್ವಾಲ್‌ ಮತ್ತೆ 18 ರನ್‌ ಪೇರಿಸಿದ್ದರು.

ಆಕಾಶ್‌ ಮತ್ತು ತುಷಾರ್‌ ದೇಶ್‌ಪಾಂಡೆ ಅವರ ದಾಳಿಯನ್ನು ತೀವ್ರವಾಗಿ ದಂಡಿಸಿದ್ದನ್ನು ನೋಡಿದ ಚೆನ್ನೈ ನಾಯಕ ಧೋನಿ ತತ್‌ಕ್ಷಣವೇ ಸ್ಪಿನ್‌ ದಾಳಿ ಆರಂಭಿಸಿದರು. ಮಹೀಶ್‌ ತೀಕ್ಷಣ ಉತ್ತಮ ದಾಳಿ ಸಂಘಟಿಸಿ ರನ್‌ವೇಗಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದರು.

ಭರ್ಜರಿ ಆಟದ ಪ್ರದರ್ಶನ ನೀಡಿದ ಜೈಸ್ವಾಲ್‌ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಅವರು 43 ಎಸೆತಗಳಿಂದ 77 ರನ್‌ ಗಳಿಸಿದರು. ಬಟ್ಲರ್‌ ಔಟಾದ ಬಳಿಕ ಜೈಸ್ವಾಲ್‌ ಅವರು ಸಂಜು ಸ್ಯಾಮ್ಸನ್‌ ಜತೆಗೂಡಿ ತಂಡವನ್ನು ಆಧರಿಸಿದರು. ಆದರೆ ಈ ಜೋಡಿ ಮುರಿದ ಬಳಿಕ ಶಿಮ್ರಾನ್‌ ಹೆಟ್‌ಮೈರ್‌ ಬೇಗನೇ ಔಟಾದರು. ಇದರಿಂದ ರನ್‌ವೇಗ ಕುಂಠಿತವಾಯಿತು.

ಕೊನೆ ಹಂತದಲ್ಲಿ ಪಡಿಕ್ಕಲ್‌ ಮತ್ತು ಜುರೆಲ್‌ ಸಿಡಿದ ಕಾರಣ ರಾಜಸ್ಥಾನದ ಮೊತ್ತ 200ರ ಗಡಿ ದಾಟುವಂತಾಯಿತು. ಅವರಿಬ್ಬರು 5ನೇ ವಿಕೆಟಿಗೆ 48 ರನ್‌ ಪೇರಿಸಿದ್ದರು. ಜರೆಲ್‌ 15 ಎಸೆತಗಳಿಂದ 34 ರನ್‌ ಗಳಿಸಿದ್ದರೆ ಪಡಿಕ್ಕಲ್‌ 13 ಎಸೆತಗಳಿಂದ 27 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.