ಗ್ರಾಮ ಪಂಚಾಯತ್‌ ಅಧಿಕಾರಿಗಳನ್ನು ಶೀಘ್ರ ನೇಮಿಸಿ


Team Udayavani, Mar 17, 2021, 7:00 AM IST

grama-panchhayath

ಸಾಂದರ್ಭಿಕ ಚಿತ್ರ

ರಾಜ್ಯದ ಒಟ್ಟು ಜನಸಂಖ್ಯೆಯ ಪೈಕಿ ಶೇ.61ರಷ್ಟು ಗ್ರಾಮೀಣ ಜನಸಂಖ್ಯೆ ಇದೆ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆಯ ಸ್ಥಳೀಯ ಆಡಳಿತ ಮತ್ತು ಅಭಿವೃದ್ದಿ ವಿಷಯಗಳು 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳ 93 ಸಾವಿರ ಗ್ರಾಮೀಣ ಚುನಾಯಿತ ಜನಪ್ರತಿನಿಧಿಗಳಿಂದ ನಿರ್ವಹಿಸ ಲ್ಪಡು ತ್ತದೆ. ಈಗಾಗಲೇ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆದು, ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮುಗಿದು ಪಂಚಾಯತ್‌ಗಳಲ್ಲಿ ಚುನಾಯಿತ ಜನಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿದೆ. ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರಕಾರದ ಬಜೆಟ್‌ ಮಂಡನೆಯಾಗಿದ್ದು, ಎಪ್ರಿಲ್‌1ರಂದು ಹೊಸ ಬಜೆಟ್‌ ಅನುಷ್ಠಾನಕ್ಕೆ ಬರಲಿದೆ. ಅದಕ್ಕೆ ತಕ್ಕಂತೆ ಆಡಳಿತ ಮತ್ತು ಅಭಿವೃದ್ಧಿಯ ಯೋಜನೆಗಳನ್ನು ರೂಪಿಸಿ, ಗ್ರಾಮೀಣ ಜನತೆಗೆ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಬೇಕಾಗಿದೆ.

ಆಡಳಿತ ಮತ್ತು ಅಭಿವೃದ್ಧಿ ಎರಡು ಚಕ್ರಗಳು ಸಮಬಲ ಮತ್ತು ಸಮವೇಗದಲ್ಲಿ ಚಲಿಸಬೇಕಾದರೆ ಚುನಾಯಿತ ಜನಪ್ರತಿಧಿಗಳ ಜತೆಗೆ ಅಧಿಕಾರಶಾಹಿಗಳ ಸಂಖ್ಯಾಬಲ ಸಹ ಸಮರ್ಪಕವಾಗಿರಬೇಕು. ಆಡಳಿತ ಯಂತ್ರದ ಜೀವಾಳ ಮತ್ತು ಸರಕಾರಿ ವ್ಯವಸ್ಥೆಯ “ಕಾಲಾಳುಗಳು’ ಈ ಅಧಿಕಾರಿ ಮತ್ತು ನೌಕರರು ಆಗಿರುತ್ತಾರೆ. ಪಂಚಾಯತ್‌ಗಳಲ್ಲಿ ಆಡಳಿತ ಯಂತ್ರ ಮುನ್ನಡೆಸಿ ಸರಕಾರದ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಜನರಿಗೆ ತಲುಪಿಸಬೇಕಾದ ಹೊಣೆಗಾರಿಕೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಪಂಚಾಯತ್‌ ಕಾರ್ಯದರ್ಶಿ, ಲೆಕ್ಕ ಸಹಾಯಕರ ಮೇಲಿದೆ. ವಿಪರ್ಯಾಸವೆಂದರೆ ಪ್ರಸ್ತುತ ಗ್ರಾಮ ಪಂಚಾಯತ್‌ಗಳಲ್ಲಿ ಈ ಹುದ್ದೆಗಳು ಸಾಕಷ್ಟು ಸಂಖ್ಯೆಯಲ್ಲಿ ಖಾಲಿ ಇವೆ. 6,011 ಗ್ರಾಮ ಪಂಚಾಯತ್‌ಗಳಲ್ಲಿ 746 ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, 1,049 ಗ್ರಾ.ಪಂ ಕಾರ್ಯದರ್ಶಿ, 505 ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳು ಸೇರಿ ಒಟ್ಟಾರೆ 2,300 ಹುದ್ದೆಗಳು ಖಾಲಿ. ಕರ ವಸೂಲಿಗಾರರು, ಜಾಡ ಮಾಲಿ ಗಳು, ನೀರುಗಂಟಿ­ಗಳು ಸೇರಿದಂತೆ 61 ಸಾವಿರ ಪಂಚಾಯತ್‌ ನೌಕರರು ಇದ್ದಾರೆ. ಇವರಲ್ಲಿ 20 ಸಾವಿರ ನೌಕರರು ವೇತನ ಸಮಸ್ಯೆ ಎದುರಿಸುತ್ತಿದ್ದಾರೆ. ಇದು ಪಂಚಾಯತ್‌ಗಳಲ್ಲಿ ನೇರವಾಗಿ ಆಡಳಿತ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ. ಸ್ವಂತ ಸಂಪನ್ಮೂಲ, ಕೇಂದ್ರದ 15ನೇ ಹಣಕಾಸು ಆಯೋಗ, ರಾಜ್ಯ ಹಣಕಾಸು ಆಯೋಗದ ಅನುದಾನ, ಶಾಸನಬದ್ಧ ಅನುದಾನಗಳು, ವಿಶೇಷ ಅನುದಾನ, ಉದ್ಯೋಗ ಖಾತರಿ, ಸ್ವತ್ಛ ಭಾರತ್‌ ಮುಂತಾದ ಸರಕಾರ ಪ್ರಾಯೋಜಕತ್ವದ ಯೋಜನೆಗಳ ಹಣ ಸೇರಿದಂತೆ ಒಂದು ವರ್ಷಕ್ಕೆ ಒಂದು ಪಂಚಾಯತ್‌ಗೆ ಕನಿಷ್ಠ 100 ಕೋಟಿ ರೂ. ಅನುದಾನ ಹರಿದು ಬರುತ್ತದೆ. ಇದರ ನಿರ್ವಹಣೆ, ರೂಪಿಸಲಾದ ಯೋಜನೆಗಳ ಅನುಷ್ಠಾನ, ಫ‌ಲಾನುಭವಿಗಳ ಆಯ್ಕೆ, ಗ್ರಾಮ ಸಭೆ ಆಯೋಜನೆ ಮತ್ತು ಇವುಗಳ ವರದಿಯನ್ನು ಮೇಲಿನ ಹಂತಕ್ಕೆ ಕಳುಹಿಸುವ ಕರ್ತವ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ ಮೇಲಿರುತ್ತದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ವರ್ಷ ಯಾವುದೇ ನೇಮಕಾತಿಗಳು ನಡೆದಿಲ್ಲ. ಪಂಚಾಯತ್‌ಗಳ 2,300 ಹುದ್ದೆಗಳ ಜತೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಆಡಳಿತ ವಿಕೇಂದ್ರೀ­ಕರಣದ ಕಲ್ಪನೆ ಮತ್ತು ಗ್ರಾಮ ಸ್ವರಾಜ್ಯದ ಆಶಯ ಪೂರ್ಣಗೊಳ್ಳ­ಬೇಕಾದರೆ ಖಾಲಿ ಹುದ್ದೆ ಭರ್ತಿಗೆ ಆದ್ಯತೆ ನೀಡಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಆರ್ಥಿಕ ಮಿತವ್ಯಯ ನಿರ್ಬಂಧದಿಂದ ವಿನಾಯಿತಿ ನೀಡಿ ಖಾಲಿ ಹುದ್ದೆ ಗಳ ಭರ್ತಿಗೆ ಸರಕಾರ ತ್ವರಿತವಾಗಿ ಕಾರ್ಯೋನ್ಮುಖವಾಗಬೇಕಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.