Jail ನಲ್ಲಿ ತಂದೆಯ ಜೀವಕ್ಕೆ ಆಪಾಯ ಎದುರಾಗಿದೆ: ಚಂದ್ರಬಾಬು ನಾಯ್ಡು ಪುತ್ರ
ಏನಾದರೂ ಆದರೆ ಅದಕ್ಕೆ ಸಿಎಂ ಜಗನ್ ಹೊಣೆ... ಸುಪ್ರೀಂ ಮೊರೆ
Team Udayavani, Oct 13, 2023, 4:31 PM IST
ವಿಜಯವಾಡ : ತಮ್ಮ ತಂದೆ ಹಾಗೂ ಟಿಡಿಪಿ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಶುಕ್ರವಾರ ಆರೋಪಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಲೋಕೇಶ್ ಚಂದ್ರಬಾಬು ನಾಯ್ಡುಅವರು, ಚಂದ್ರಬಾಬು ಅವರ ಆರೋಗ್ಯದ ಕಾರಣಗಳನ್ನು ಉಲ್ಲೇಖಿಸಿ “ಜೀವಕ್ಕೆ ನಿರಾಕರಿಸಲಾಗದ ಮತ್ತು ತತ್ ಕ್ಷಣದ ಬೆದರಿಕೆ ಇದೆ. ಅವರಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡಲಾಗುತ್ತಿದೆ. ಅವರ ಸುರಕ್ಷತೆಯು ಪ್ರಶ್ನಾತೀತವಾಗಿ ಅಪಾಯದಲ್ಲಿದೆ” ಎಂದು ಹೇಳಿಕೊಂಡಿದ್ದಾರೆ.
ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಸಕಾಲಿಕ ವೈದ್ಯಕೀಯ ಸಹಾಯದ ಕೊರತೆಯಿಂದಾಗಿ ಅವರು ತೂಕವನ್ನು ಕಳೆದುಕೊಂಡಿದ್ದಾರೆ ಮತ್ತು ಸೋಂಕುಗಳು ಮತ್ತು ಅಲರ್ಜಿಗಳಿಂದ ಬಳಲುತ್ತಿದ್ದಾರೆ ಎಂದು ನಾರಾ ಲೋಕೇಶ್ ಹೇಳಿಕೊಂಡಿದ್ದಾರೆ.
“ನಾಯ್ಡು ಅವರು ಸೊಳ್ಳೆಗಳು, ಕಲುಷಿತ ನೀರು, ತೂಕ ನಷ್ಟ, ಸೋಂಕುಗಳು ಮತ್ತು ಅಲರ್ಜಿಗಳೊಂದಿಗೆ ವ್ಯವಹರಿಸುತ್ತಿರುವ ಭೀಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ, ಸಕಾಲಿಕ ವೈದ್ಯಕೀಯ ನೆರವು ಲಭ್ಯವಿಲ್ಲ. ಆಂಧ್ರ ಪ್ರದೇಶ ಸರ್ಕಾರ ಅವರಿಗೆ ಸ್ಟೀರಾಯ್ಡ್ ಗಳನ್ನು ನೀಡಲು ಪ್ರಯತ್ನಿಸುತ್ತಿದೆ ಎಂದು ಎಕ್ಸ್ನಲ್ಲಿ ಪೋಸ್ಟ್ ನಲ್ಲಿ ಲೋಕೇಶ್ ಆರೋಪಿಸಿದ್ದಾರೆ.
“ಸರ್ಕಾರಿ ವೈದ್ಯರು ಮತ್ತು ಆಡಳಿತವು ಏನನ್ನು ಮರೆಮಾಡಲು ಪ್ರಯತ್ನಿಸುತ್ತಿದೆ?” ಎಂದು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಟ್ಯಾಗ್ ಮಾಡಿರುವ ನಾರಾ ಲೋಕೇಶ್, ನಾಯ್ಡು ಅವರಿಗೆ ಏನೇ ಆದರೂ ಜಗನ್ ಹೊಣೆಯಾಗುತ್ತಾರೆ ಎಂದು ಬರೆದಿದ್ದಾರೆ.
ನಿರೀಕ್ಷಣಾ ಜಾಮೀನು
ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಂಗಾಲು ಹಿಂಸಾಚಾರ ಪ್ರಕರಣದ ವಾದ-ವಿವಾದಗಳನ್ನು ಆಲಿಸಿದ ಹೈಕೋರ್ಟ್ ಗುರುವಾರ ತನ್ನ ಆದೇಶಗಳನ್ನು ಕಾಯ್ದಿರಿಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.ಇತ್ತೀಚೆಗೆ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ನಾಯ್ಡು ಅವರು ಅಂಗಲ್ಲು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದರು.
ಸುಪ್ರೀಂ ಕೋರ್ಟ್ಗೆ ಮೊರೆ
ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾದ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಸಿಎಂ ಅವರನ್ನು ಸಿಐಡಿ ಕಳೆದ ತಿಂಗಳು ಬಂಧಿಸಿತ್ತು. ಅವರ ಜಾಮೀನು ಅರ್ಜಿಯನ್ನು ವಿಜಯವಾಡದ ಎಸಿಬಿ ನ್ಯಾಯಾಲಯ ತಿರಸ್ಕರಿಸಿದೆ. ಏತನ್ಮಧ್ಯೆ, ಇಂದು ಎಪಿ ಫೈಬರ್ ನೆಟ್ ಹಗರಣ ಪ್ರಕರಣದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತರ ಚಂದ್ರಬಾಬು ನಾಯ್ಡು ಅವರು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ