ಪಾಕ್‌ ಸೇನೆ ವಿರುದ್ಧ ಮುಗಿಬಿದ್ದ ಇಮ್ರಾನ್‌ 

ರಾಜಕೀಯ ಮಾಡುವ ಬದಲು ಸ್ವಂತ ಪಕ್ಷವನ್ನು ಪಾಕ್‌ ಸೇನೆ ಸ್ಥಾಪಿಸಲಿ: ಆಕ್ರೋಶ

Team Udayavani, May 15, 2023, 7:16 AM IST

IMRAN KHAN

ಇಸ್ಲಾಮಾಬಾದ್‌: ಪಾಕಿಸ್ತಾನ ಸೇನೆ ವಿರುದ್ಧ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ತಿರುಗಿಬಿದ್ದಿದ್ದಾರೆ. ತನ್ನ ಎಲ್ಲಾ ಪ್ರಕರಣಗಳಲ್ಲಿ ಇಸ್ಲಾಮಾಬಾದ್‌ ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದ ಅವರು, ಲಾಹೋರ್‌ನ ಜಮಾನ್‌ ಪಾರ್ಕ್‌ನಲ್ಲಿರುವ ತಮ್ಮ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದರು.

“ನಾನು ಪಾಕಿಸ್ತಾನ ಕ್ರಿಕೆಟ್‌ ತಂಡದ ಪರ ವಿಶ್ವಮಟ್ಟದಲ್ಲಿ ಆಡುತ್ತಿದ್ದಾಗ, ನೀವಿನ್ನೂ ಹುಟ್ಟಿರಲಿಲ್ಲ” ಎಂದು ಮೇಜರ್‌ ಜನರಲ್‌ ಅಹ್ಮದ್‌ ಶರೀಫ್ ಚೌಧರಿ ವಿರುದ್ಧ ಕಿಡಿಕಾರಿದ್ದಾರೆ. “ರಾಜಕೀಯ ಮಾಡುವ ಬದಲು ಪಾಕ್‌ ಸೇನೆಯು ಸ್ವಂತ ರಾಜಕೀಯ ಪಕ್ಷವನ್ನು ಸ್ಥಾಪಿಸಬೇಕು. ಸಂಪೂರ್ಣ ಅವ್ಯವಸ್ಥೆಯಿಂದ ದೇಶವನ್ನು ರಕ್ಷಿಸಲು ಪಾಕ್‌ ಸೇನೆಯು ವಿಶಾಲವಾಗಿ ಯೋಚಿಸಬೇಕಿದೆ” ಎಂದು ಸಲಹೆ ನೀಡಿದ್ದಾರೆ.

“ಪಿಟಿಐ ಪಕ್ಷದ ಕುರಿತು ತನ್ನ ವಿರೋಧಿ ನಿಲುವನ್ನು ಸೇನೆಯ ನಾಯಕತ್ವ ಬದಲಿಸಿಕೊಳ್ಳಬೇಕು. ಈಗಾಗಲೇ ಸೇನೆಯ ಕ್ರಮಗಳು ದೇಶವನ್ನು ದುರಂತದ ಅಂಚಿಗೆ ತಂದು ನಿಲ್ಲಿಸಿದೆ. ಎಲ್ಲಾ ಪ್ರಕರಣಗಳಲ್ಲಿ ನನಗೆ ನ್ಯಾಯಾಲಯದಿಂದ ಜಾಮೀನು ದೊರೆತ ಹೊರತಾಗಿಯೂ ಪಾಕಿಸ್ತಾನದ ಆಮದು ಸರ್ಕಾರ ನನ್ನನ್ನು ಅಪಹರಣ ಮಾಡಿ, ಕೆಲ ಗಂಟೆಗಳ ಕಾಲ ಕೂಡಿ ಹಾಕಿತ್ತು’ ಎಂದು ಆರೋಪಿಸಿದ್ದಾರೆ.

ಬಾಜ್ವಾ ವಿರುದ್ಧ ಸಿಟ್ಟು: “ಪಾಕ್‌ ಸೇನೆ ಮಾಜಿ ಮುಖ್ಯಸ್ಥ ಜನರಲ್‌ ಕಮರ್‌ ಜಾವೇದ್‌ ಬಾಜ್ವಾ ನನ್ನ ಬೆನ್ನಿಗೆ ಇರಿದರು ಹಾಗೂ ಪಾಕಿಸ್ತಾನದ ಭ್ರಷ್ಟಾಚಾರಿಗಳು ಅಧಿಕಾರಕ್ಕೆ ಬರುವಂತೆ ಮಾಡಿದರು. ನಾನು ಅಧಿಕಾರದಲ್ಲಿದ್ದಾಗ ಸೇನೆಯ ಮೇಲೆ ಜನರು ಗೌರವ ತಾಳಿದ್ದರು. ಇದೀಗ ನಾಗರಿಕರು ಪಾಕ್‌ ಸೇನೆಯ ವಿರುದ್ಧ ಕಿಡಿಕಾರುತ್ತಿದ್ದಾರೆ. ಇದಕ್ಕೆ ಸೇನಾ ಮುಖ್ಯಸ್ಥರೇ ಹೊಣೆಗಾರರು’ ಎಂದು ದೂರಿದ್ದಾರೆ.

“ಪಾಕ್‌ ಸೇನೆಯು ಪಿಟಿಐನ ಪ್ರಮುಖ ನಾಯಕರನ್ನು ಹಾಗೂ 3,500ಕ್ಕೂ ಹೆಚ್ಚು ಕಾರ್ಯಕರ್ತರನ್ನು ಜೈಲಿಗೆ ಹಾಕಿದೆ. ಯಾರೋ ಅಪರಿಚಿತರು ಸರ್ಕಾರಿ ಕಚೇರಿಗಳ ಮೇಲೆ ನಡೆಸಿದ ದಾಳಿಗೆ ಅವರನ್ನು ಬಂಧಿಸಲಾಗಿದೆ. ರಾಜಕೀಯ ಪಕ್ಷಗಳಿಗೆ ಚುನಾವಣೆ ಬೇಕಿಲ್ಲ. ಏಕೆಂದರೆ ಅವರಿಗೆ ಸೋಲಿನ ಭಯವಿದೆ” ಎಂದು ಹೇಳಿದ್ದಾರೆ.

ಸರ್ಕಾರದಿಂದ ಅಪಹರಣ: “ಹಿರಿಯ ಪತ್ರಕರ್ತ ಇಮ್ರಾನ್‌ ರಿಯಾಜ್‌ ಖಾನ್‌ ಅವರನ್ನು ಭದ್ರತಾ ಪಡೆಗಳು ಅಪಹರಿಸಿವೆ. ಅವರಿಗೆ ತೀವ್ರ ಹಿಂಸೆ ನೀಡಿರಬಹುದು ಅಥವಾ ಅವರ ಹತ್ಯೆ ಮಾಡಿರಬಹುದು. ಅಲ್ಲದೇ ಹಿರಿಯ ರಾಜಕಾರಣಿ ಒರಿಯಾ ಮಕುºಲ್‌ ಜಾನ್‌ ಅವರನ್ನು ಪಾಕ್‌ ಸರ್ಕಾರವೇ ಅಪಹರಣ ಮಾಡಿಸಿದೆ’ ಎಂದು ಇಮ್ರಾನ್‌ ಆರೋಪಿಸಿದ್ದಾರೆ.

“ಪಿಟಿಐ ಕಾರ್ಯಕರ್ತರು ರಾಜಕೀಯ ಭಯೋತ್ಪಾದಕರು”
“ಪಿಟಿಐ ಮುಖ್ಯಸ್ಥ ಇಮ್ರಾನ್‌ ಖಾನ್‌ ಅವರ ಬೆಂಬಲಿಗರು ರಾಜಕೀಯ ಭಯೋತ್ಪಾದಕರಾಗಿದ್ದಾರೆ. ಅವರು ಪ್ರತಿಭಟನೆ ಹೆಸರಿನಲ್ಲಿ ಸರ್ಕಾರಿ ಕಚೇರಿಗಳಿಗೆ ನುಗ್ಗಿ ಹಿಂಸಾಚಾರ ನಡೆಸಿದ್ದಾರೆ. ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯು ಅಗತ್ಯಕ್ಕಿಂತ ಹೆಚ್ಚು ರಾಜಕೀಯಗೊಳ್ಳುತ್ತಿದೆ’ ಎಂದು ಪಾಕ್‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ದೂರಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.