ಎನ್‌ಡಿಎಗೆ ಸೀಟು ಉಳಿಸಿಕೊಳ್ಳುವ ಆತಂಕ; 2010ರ ಚುನಾವಣೆಗೆ ಹೋಲಿಸಿದರೆ 2015 ಕಳಪೆ ಪ್ರದರ್ಶನ


Team Udayavani, Oct 12, 2020, 4:27 PM IST

Bihar Election NDA

ಮಣಿಪಾಲ: ಬಿಹಾರ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಬಾರಿ ಎನ್‌ಡಿಎ ಮೈತ್ರಿಕೂಟದಲ್ಲಿದ್ದ ಎಲ್‌ಜೆಪಿ ಹೊರಬಂದಿದ್ದು, ನಿತೀಶ್‌ ಕುಮಾರ್‌ ಅವರ ಜೆಡಿಯು ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಹೇಳಿದೆ. ಆದರೆ ಬಿಜೆಪಿ ವಿರುದ್ಧ ತಾವು ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಎಲ್‌ಜೆಪಿ ಹೇಳಿದೆ.

ಚುನಾವಣೆಗೆ ವಾರಗಳಿರುವಂತೆ ಎಲ್‌ಜೆಪಿ ನಾಯಕ ರಾಮ್‌ವಿಲಾಸ್‌ ಪಾಸ್ವಾನ್‌ ಅವರು ನಿಧನ ಹೊಂದಿದ್ದು, ಈ ನಿಟ್ಟಿನಲ್ಲಿ ಎಲ್‌ಜೆಪಿ ನಡೆ ಬದಲಾದ ಕುರಿತು ಯಾವುದೇ ಸುಳಿವು ಇಲ್ಲ. ದಿ. ರಾಮ್‌ವಿಲಾಸ್‌ ಪಾಸ್ವಾನ್‌ ಅವರ ಪುತ್ರ ಚಿರಾಗ್‌ ಪಾಸ್ವಾನ್‌ ಈ ಬಾರಿಯ ಚುನಾವಣೆಯನ್ನು ನೋಡಿಕೊಳ್ಳಲಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದ ಈ ಹಿಂದಿನ ಫಲಿತಾಂಶಗಳನ್ನು ನೋಡುವುದಾದರೆ 2015 ರಲ್ಲಿ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆ ಸ್ವಲ್ಪ ವಿಭಿನ್ನ ಮತ್ತು ಆಸಕ್ತಿದಾಯಕವಾಗಿತ್ತು.

ಈ ಅಧಿಕಾರದಲ್ಲಿರುವ ಬಿಜೆಪಿ ಮತ್ತು ಜೆಡಿಯು ಬೇರೆ ಬೇರೆಯಾಗಿ ಚುನಾವಣೆ ಎದುರಿಸಿದ್ದವು. ಬಿಜೆಪಿ ಸಖ್ಯ ತೊರೆದ ನಿತೀಶ್‌ 20 ವರ್ಷಗಳ ಬಳಿಕ ಆರ್‌ಜೆಡಿಯ ಲಾಲು ಪ್ರಸಾದ್‌ ಯಾದವ್‌ ಅವರೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿದ್ದರು. ಲಾಲು ಮತ್ತು ನಿತೀಶ್ ಅವರ ಈ ಮಹಾ ಮೈತ್ರಿಯಲ್ಲಿ ಕಾಂಗ್ರೆಸ್ ಕೂಡ ಭಾಗಿಯಾಗಿತ್ತು. ಮತ್ತೊಂದೆಡೆ ಬಿಜೆಪಿ, ಎಲ್‌ಜೆಪಿ ಮತ್ತು ಆರ್‌ಎಲ್‌ಎಸ್‌ಪಿ ಒಟ್ಟಾಗಿ ಹೋರಾಡಿದ್ದವು.

ಆದರೆ ಮತದಾನ ನಡೆದು ಫಲಿತಾಂಶ ಬಂದ ಬಳಿಕ ಮಹಾಘಟ್‌ಬಂಧನ್‌ ಸರ್ಕಾರ ರಚಿಸಿತು. ಆದರೆ ಬದಲಾದ ರಾಜಕೀಯ ವಿದ್ಯಮಾನಗಳಲ್ಲಿ ನಿತೀಶ್ ಲಾಲುನಿಂದ ಬೇರ್ಪಟ್ಟು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿದ್ದರು.

ಆದರೆ 2015ರ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ ಹವಾ ಚೆನ್ನಾಗಿತ್ತು. 2014ರಲ್ಲಿ ಲೋಕ ಸಭಾ ಚುನಾವಣೆ ನಡೆದು ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಹಾರದಲ್ಲಿಯೂ ಜನರು ಬಿಜೆಪಿ ಕಡೆ ಒಲವು ತೋರಿದಂತೆ ಕಂಡುಬಂದಿತ್ತು. ಆದರೆ ಸೀಟುಗಳು ಹೆಚ್ಚಾಗಲಿಲ್ಲ. ಅಂದರೆ ಅತಿ ಹೆಚ್ಚು ಶೇ.25 ಮತಗಳನ್ನು ಹೊಂದಿದ್ದರೂ ಕೇವಲ 53 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. 2010ಕ್ಕೆ ಹೋಲಿಸಿದರೆ ಬಿಜೆಪಿಯ ಮತ ಪಾಲು ಶೇ. 8 ಹೆಚ್ಚಾಗಿದೆ. ಆದರೆ ಈ ಹಿಂದಿಗಿಂತ ಕಡಿಮೆ ಸೀಟುಗಳನ್ನು ಪಡೆದಿತ್ತು. 2010ರಲ್ಲಿ ಬಿಜೆಪಿ ಶೇ. 16.5 ಮತಗಳೊಂದಿಗೆ 91 ಸ್ಥಾನಗಳನ್ನು ಗೆದ್ದಿತ್ತು. 2015ರಲ್ಲಿ ಶೇಕಡಾವಾರು ಮತಗಳು ಹೆಚ್ಚಾದರೂ ಸೀಟುಗಳ ಗಳಿಕೆ ಮಾತ್ರ ಕಡಿಮೆಯಾಗಿತ್ತು ಎಂಬುದು ಉಲ್ಲೇಖನೀಯ.

ನಿತೀಶ್ ಅವರ ಜೆಡಿಯು ಮಹಾಮೈತ್ರಿಯ ಪರಿಣಾಮವೋ ಏನೋ ಎಂಬಂತೆ ದೊಡ್ಡ ಹೊಡೆತವನ್ನು ಸಹಿಸಿಕೊಳ್ಳಬೇಕಾಯಿತು. ಏಕೆಂದರೆ 2010ಕ್ಕೆ ಹೋಲಿಸಿದರೆ ಜೆಡಿಯು 2015ರಲ್ಲಿ ಪಡೆದ ಮತ ಪಾಲು ತುಂಬಾ ಕಡಿಮೆ. ಮಾತ್ರವಲ್ಲದೆ ಸ್ಥಾನಗಳನ್ನು ಕಡಿಮೆ ಗಳಿಸಿತ್ತು. 2010ರ ಚುನಾವಣೆಯಲ್ಲಿ ಜೆಡಿಯು ಶೇ. 22.6 ಮತ ಹಂಚಿಕೆಯೊಂದಿಗೆ 115 ಸ್ಥಾನಗಳನ್ನು ಗೆದ್ದಿದ್ದರೆ, 2015ರಲ್ಲಿ ಶೇ. 17.3 ಮತ ಹಂಚಿಕೆಯೊಂದಿಗೆ ಕೇವಲ 71 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಪ್ರಸ್ತುತ ಎನ್‌ಡಿಎಗೆ ಬಿಹಾರ ವಿಧಾನಸಭೆಯಲ್ಲಿ 130 ಸ್ಥಾನಗಳಿವೆ. ಅಂದರೆ ಬಹುಮತಕ್ಕಿಂತ 8 ಹೆಚ್ಚು. ಅವುಗಳಲ್ಲಿ ಜೆಡಿಯು ಗರಿಷ್ಠ 69 ಸ್ಥಾನಗಳನ್ನು ಹೊಂದಿದ್ದರೆ, ಬಿಜೆಪಿ 54 ಸ್ಥಾನಗಳನ್ನು ಹೊಂದಿದೆ. ಇದನ್ನು 2020ರ ವಿಧಾನ ಸಭಾಚುನಾವಣೆಯಲ್ಲಿ ಉಳಿಸಿಕೊಳ್ಳುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.