65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ಪ್ರಧಾನಿಯವರನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಬಿಜೆಪಿ

Team Udayavani, Sep 26, 2021, 9:20 PM IST

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಿದ 65 ಗಂಟೆಗಳಲ್ಲಿ 20 ಸಭೆಯಲ್ಲಿ ಭಾಗವಹಿಸಿದ್ದಾರೆ. ಅದರ ಜತೆ ವಿಮಾನ ಪ್ರಯಾಣದ ವೇಳೆ ನಾಲ್ಕು ಸಭೆ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಭಾನುವಾರ ಮಾಹಿತಿ ನೀಡಿದ್ದಾರೆ.

ನವದೆಹಲಿಯಿಂದ ಬುಧವಾರ ಅಮೆರಿಕಕ್ಕೆ ವಿಮಾನದಲ್ಲಿ ಪ್ರಯಾಣಿಸುವಾಗ 2 ಸಭೆ ನಡೆಸಿ, ಅಮೆರಿಕದಲ್ಲಿ ಹೋಟೆಲ್‌ನಲ್ಲಿ 3 ಸಭೆ ನಡೆಸಿದ್ದಾರೆ. ಸೆ.23ರಂದು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಜೊತೆಗೆ ಸಭೆ, ಜಪಾನ್‌ ಮತ್ತು ಆಸ್ಟ್ರೇಲಿಯಾ ಪ್ರತಿನಿಧಿಗಳ ಜತೆ ಎರಡು ದ್ವಿಪಕ್ಷೀಯ ಸಭೆ ಹಾಗೂ ವಿವಿಧ ಸಂಸ್ಥೆಗಳ ಸಿಇಒ ಜೊತೆಗೆ 5 ಸಭೆ ನಡೆಸಿದ್ದಾರೆ. ಅದರೊಂದಿಗೆ 3 ಆಂತರಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಸೆ.24ರಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರೊಂದಿಗೆ ಸಭೆ, ಕ್ವಾಡ್‌ ಸಭೆ ಹಾಗೂ 4 ಆಂತರಿಕ ಸಭೆ ನಡೆಸಿದ್ದಾರೆ. ಸೆ.25ರಂದು ಭಾರತಕ್ಕೆ ವಾಪಸಾಗುವಾಗ ವಿಮಾನದಲ್ಲಿಯೇ ಕುಳಿತು 2 ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಮುಖ ರಾಷ್ಟ್ರದ ಮಾನ್ಯತೆ:

ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದ ರಾಷ್ಟ್ರಗಳ ಪೈಕಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಭಾರತವನ್ನು ಜಗತ್ತಿನಲ್ಲಿ ಪ್ರಮುಖ ರಾಷ್ಟ್ರಗಳ ಸಾಲಿಗೆ ಸೇರಲು ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕ’ ಎಂದು ಬಣ್ಣಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌, ಕ್ವಾಡ್‌ ರಾಷ್ಟ್ರಗಳ ಮುಖಂಡರ ಜತೆಗೆ ಸಭೆಯನ್ನೂ ನಡೆಸಿದ್ದಾರೆ ಎಂದರು.

ಇದನ್ನೂ ಓದಿ :ನನ್ನ ರಾಜೀನಾಮೆಗೆ ಪ್ರಧಾನಿ ಮೋದಿ ಕೂಡ ಆಶ್ಚರ್ಯ ಪಟ್ಟಿದ್ರು ; ಮಾಜಿ ಮುಖ್ಯಮಂತ್ರಿ ಬಿಎಸ್ ವೈ

ಅದ್ಧೂರಿ ಸ್ವಾಗತ:

ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸಾದ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಉಪಾಧ್ಯಕ್ಷ ವಿರೇಂದ್ರ ಸಚ್ದೇವ್, ಮುಖ್ಯ ಕಾರ್ಯದರ್ಶಿ ಅರುಣ್‌ ಸಿಂಗ್‌, ಕೇಂದ್ರ ಸಚಿವ ರಾಜನಾಥ್‌ ಸಿಂಗ್‌, ಮಾಜಿ ಸಚಿವ  ಹರ್ಷ ವರ್ಧನ್‌ ಸೇರಿದಂತೆ ಪ್ರಮುಖರಿದ್ದರು.

ಬಿಡುವಿಲ್ಲದ ಕಾರ್ಯಕ್ರಮಗಳೇ ಗುಟ್ಟು

ನಿರಂತರವಾಗಿ ಪ್ರಯಾಣ, ಸಭೆ ನಡೆಸುವ ಪ್ರಧಾನಿ ಮೋದಿಯವರಿಗೆ ಆಯಾಸ ಆಗುವುದಿಲ್ಲವೇ ಎನ್ನುವುದು ಹಲವರ ಅಚ್ಚರಿ. ಈ ಕೌತುಕಕ್ಕೆ ಹಿರಿಯ ಅಧಿಕಾರಿಗಳು ಪರಿಹಾರವನ್ನೂ ನೀಡಿದ್ದಾರೆ. ಆಯಾಸವಾದಂತೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿಯವರು ನಿರಂತರವಾಗಿ ಸಭೆ, ಪರಾಮರ್ಶೆಗಳನ್ನು ನಡೆಸುತ್ತಾರೆ ಎಂದು ಹೇಳಿದ್ದಾರೆ. 1990ರ ದಶಕದಲ್ಲಿ ಮೋದಿಯವರು ಪದೇ ಪದೆ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದ ವೇಳೆ ವಿಮಾನಯಾನ ಸಂಸ್ಥೆಯೊಂದು ಅವರಿಗೆ ಟಿಕೆಟ್‌ನಲ್ಲಿ ರಿಯಾಯಿತಿ ನೀಡಿ, ತಿಂಗಳ ಪಾಸ್‌ ಅನ್ನೂ ನೀಡಿತ್ತು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.