ಪರೀಕ್ಷೆ ಪಾಸಾಯ್ತು ಹಾಕ್‌-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ


Team Udayavani, Jan 21, 2021, 10:05 PM IST

ಪರೀಕ್ಷೆ ಪಾಸಾಯ್ತು ಹಾಕ್‌-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ

ಬೆಂಗಳೂರು: ನೆಲದಲ್ಲಿರುವ ಸುಮಾರು 100 ಕಿ.ಮೀ. ದೂರದ ಶತ್ರುಗಳ ನೆಲೆಗಳನ್ನು ಧ್ವಂಸಗೊಳಿಸುವ ದೇಶೀಯವಾಗಿ ಅಭಿವೃದ್ಧಿಪಡಿಸಿದ ಹಾಕ್‌-ಎಂಕೆ 132 (ಐ) ಯುದ್ಧ ವಿಮಾನದ ಸಾಮರ್ಥ್ಯ ಪರೀಕ್ಷೆ ಗುರುವಾರ ಯಶಸ್ವಿಯಾಗಿ ನಡೆಯಿತು.
125 ಕೆಜಿ ಶ್ರೇಣಿಯ ಅತ್ಯಾಧುನಿಕವಾದ ಈ ಅಸ್ತ್ರವನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಇಮಾರತ್‌ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ. ಒಡಿಶಾದ ಕರಾವಳಿಯಲ್ಲಿ ಈ ಯುದ್ಧ ವಿಮಾನದ ಅತ್ಯಾಧುನಿಕ ಆಯುದ್ಧ ವ್ಯವಸ್ಥೆ (ಎಸ್‌ಎಎಡಬ್ಲ್ಯೂ- ಸ್ಮಾರ್ಟ್‌ ಆ್ಯಂಟಿ ಏರ್‌ಫಿಲ್ಡ್‌ ವೆಪನ್‌)ಯನ್ನು ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ. ಪರೀಕ್ಷೆ ನಡೆಸಿತು.

ಎಚ್‌ಎಎಲ್‌ನ ಪರೀಕ್ಷಾ ಪೈಲಟ್‌ ವಿಂಗ್‌ ಕಮಾಂಡರ್‌ (ನಿವೃತ್ತ) ಪಿ. ಅಸ್ವಾತಿ ಹಾಗೂ ವಿಂಗ್‌ ಕಮಾಂಡರ್‌ (ನಿವೃತ್ತ) ಎಂ. ಪಟೇಲ್‌ ಇಬ್ಬರೂ ಕ್ರಮವಾಗಿ ಯುದ್ಧ ವಿಮಾನದ ಹಾರಾಟ ಮತ್ತು ಅದರಿಂದ ಶಸ್ತ್ರಾಸ್ತ್ರಗಳ ಬಿಡುಗಡೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು. ಎಲ್ಲ ಹಂತದ ಪರೀಕ್ಷೆಯನ್ನೂ ಹಾಕ್‌-ಐ ಪೂರೈಸಿತು. ಹಗುರ ಮತ್ತು ಅತ್ಯಂತ ನಿಖರವಾಗಿ ಗುರಿ ತಲುಪುವ ಸಾಮರ್ಥ್ಯದ ಬಾಂಬ್‌ ಹೊಂದಿರುವ ಈ ವ್ಯವಸ್ಥೆಯು ಜಾಗತಿಕ ಗುಣಮಟ್ಟದ ಶಸ್ತ್ರಾಸ್ತ್ರಗಳಲ್ಲೊಂದಾಗಿದೆ.

ಇದನ್ನೂ ಓದಿ:ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರ ನೇಮಕ: ಮೂಲ ಕಡತ ಹಾಜರುಪಡಿಸಲು ಹೈಕೋರ್ಟ್ ಸೂಚನೆ

“ಆತ್ಮನಿರ್ಭರ ಭಾರತ ಅಭಿಯಾನಕ್ಕೆ ಎಚ್‌ಎಎಲ್‌ ವಿಶೇಷ ಆದ್ಯತೆ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಹಾಕ್‌-ಐ ಯುದ್ಧ ವಿಮಾನ ಪರಿಣಾಮಕಾರಿ ಬಳಕೆಗೆ ಅನುಕೂಲ ಆಗಲಿದೆ’ ಎಂದು ಎಚ್‌ಎಎಲ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್‌. ಮಾಧವನ್‌ ಅಭಿಪ್ರಾಯಪಟ್ಟಿದ್ದಾರೆ.

ತರಬೇತಿ ವಿಮಾನದಿಂದ ಯುದ್ಧ ವಿಮಾನ
ಈ ಯುದ್ಧ ವಿಮಾನವು ಭಾರತೀಯ ಸೇನೆಯ ಅನುದಾನಿತ ಯೋಜನೆ ಅಡಿ ಅಭಿವೃದ್ಧಿಪಡಿಸಲಾಗಿದೆ. 2014ರಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಯಿತು. 2017ರ ವೈಮಾನಿಕ ಪ್ರದರ್ಶನದಲ್ಲಿ ಎಚ್‌ಎಎಲ್‌, ಹಾಕ್‌-ಐ ಯುದ್ಧ ವಿಮಾನವನ್ನು ಅನಾವರಣಗೊಳಿಸಿತು. ಈ ಮೊದಲು ಇದು ತರಬೇತಿ ವಿಮಾನವಾಗಿತ್ತು. ನಂತರದಲ್ಲಿ ಇದನ್ನು ಶತ್ರುಗಳ ಮೇಲೆ ಶಸ್ತ್ರಗಳ ಮಳೆಗರೆಯುವ ಅತ್ಯಾಧುನಿಕ ವ್ಯವಸ್ಥೆಯನ್ನಾಗಿ ಪರಿವರ್ತಿಸಲಾಗಿದೆ. ಆಗಸದಲ್ಲಿ ಮತ್ತೂಂದು ಶತ್ರು ಯುದ್ಧ ವಿಮಾನದ ಮೇಲೆ ಆಕ್ರಮಣ ಹಾಗೂ ಆಗಸದಿಂದ ನೆಲದಲ್ಲಿರುವ ಶತ್ರು ನೆಲೆಗಳನ್ನು ಧ್ವಂಸಗೊಳಿಸಲು ಎರಡೂ ಸಾಮರ್ಥ್ಯವನ್ನು ಇದು ಹೊಂದಿದೆ. ಅಂದಹಾಗೆ, “ಹಾಕ್‌’ ಎನ್ನುವುದು ಇಂಗ್ಲೆಂಡ್‌ ಮೂಲದ ಬ್ರಿಟಿಷ್‌ನ ಬಿಎಇ ಕಂಪೆನಿಯಿಂದ ಬಂದಿದೆ. 1974ರಲ್ಲಿ ಮೊದಲ ಬಾರಿಗೆ “ಹಾಕ್‌’ ವಿಮಾನ ಹಾರಾಟ ನಡೆಸಿತ್ತು. ಹಾಕ್‌ ಇಂದು ಭಾರತವು ಸೇರಿದಂತೆ 12 ದೇಶಗಳಲ್ಲಿ ಹಾರಾಟ ನಡೆಸುತ್ತಿದೆ.

– 100 ಕಿ.ಮೀ. ದೂರದ ಶತ್ರುಗಳ ನೆಲೆ ಧ್ವಂಸಗೊಳಿಸುವ ಸಾಮರ್ಥ್ಯ
– 125 ಕೆಜಿ ಶ್ರೇಣಿಯ ಅತ್ಯಾಧುನಿಕ ವ್ಯವಸ್ಥೆ
– 2014ರಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು
– ತರಬೇತಿ ವಿಮಾನ ಈಗ ಯುದ್ಧ ವಿಮಾನವಾಗಿ ರೂಪಾಂತರ
– ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.