ರಾಜ್ಯದ ಪ್ರತಿ ತಾಲೂಕಿನಲ್ಲಿ ಎರಡು ಗೋ ಶಾಲೆ ಮಂಜೂರಾತಿಗೆ ಚಿಂತನೆ : ಸಚಿವ ಪ್ರಭು ಚವ್ಹಾಣ
Team Udayavani, Jan 9, 2021, 5:19 PM IST
ಬೀದರ್ : ಗೋವುಗಳ ಸಂರಕ್ಷಣೆಗಾಗಿ ರಾಜ್ಯದ ಪ್ರತಿ ತಾಲೂಕಿಗೆ ಎರಡು ಗೋ ಶಾಲೆಗಳನ್ನು ಮಂಜೂರು ಮಾಡಲು ಚಿಂತನೆ ನಡೆದಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಸರ್ಕಾರಿ ಮತ್ತು ಖಾಸಗಿ ಸೇರಿ ೧೬೪ ಗೋ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಗೋ ಹತ್ಯೆ ಕಾಯ್ದೆ ಜಾರಿ ಹಿನ್ನಲೆ ಗೋವುಗಳ ಸಂರಕ್ಷಣೆಗೆ ಅನುಕೂಲವಾಗುವಂತೆ ಗೋ ಶಾಲೆಗಳನ್ನು ಹೆಚ್ಚಿಸುವುದು ಮತ್ತು ಅಲ್ಲಿ ಮೂಲ ಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ. ಜಾನುವಾರುಗಳ ಸಂರಕ್ಷಣೆ, ರೈತರು ಮತ್ತು ಜಾನುವಾರು ಸಾಕಣೆದಾರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿ ಜ್ವರ ಪ್ರಕರಣಗಳು ಕಂಡು ಬಂದಿಲ್ಲ. ಆದರೂ ಎಚ್ಚರಿಕೆ ವಹಿಸುವಂತೆ ಪಶು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರಕರಣಗಳು ವರದಿಯಾದಲ್ಲಿ ಕೂಡಲೇ ರಕ್ತ ಪರೀಕ್ಷೆ ಸೇರಿದಂತೆ ರೋಗ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜತೆಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮುಂಜಾಗ್ರತೆ ವಹಿಸಲು ತಿಳಿಸಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:2ಲಕ್ಷ ರೂ. ಮೌಲ್ಯದ ಚಿನ್ನಾಭರಣ ಖರೀದಿಗೆ ಆಧಾರ್ ಬೇಕಿಲ್ಲ;ವಿತ್ತ ಇಲಾಖೆ ಸ್ಪಷ್ಟನೆಯಲ್ಲೇನಿದೆ?
ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನಶ್ಚೇತನ ಸಂಬಂಧ ಶೀಘ್ರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಗುವುದು ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’