ಸಾವಿರ ಕೋಟಿ ರೂ.ವೆಚ್ಚದ ಕಾಂಟಿನೆಂಟಲ್ ಆರ್ & ಡಿ ಕೇಂದ್ರ ಉದ್ಘಾಟನೆ
ಇಂತಹ ಕಾರುಗಳು ಆಧುನಿಕ ಜೀವನ ಶೈಲಿಯಲ್ಲಿ ವರದಾನ : ಸಚಿವ ಡಾ.ಅಶ್ವತ್ಥನಾರಾಯಣ
Team Udayavani, Nov 23, 2022, 3:50 PM IST
ಬೆಂಗಳೂರು: ವಾಹನ ತಯಾರಿಕಾ ಕ್ಷೇತ್ರದಲ್ಲಿ ಅಗ್ರಗಣ್ಯವಾಗಿರುವ ಕಾಂಟಿನೆಂಟಲ್ ಕಂಪನಿಯು 1,000 ಕೋಟಿ ರೂಪಾಯಿ ವೆಚ್ಚದಲ್ಲಿ ಎಲೆಕ್ಟ್ರಾನಿಕ್ ಸಿಟಿ ಸಮೀಪ ನಿರ್ಮಿಸಿರುವ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಕ್ಕೆ ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಚಾಲನೆ ನೀಡಿದರು.ಹೊಸೂರು ರಸ್ತೆಗೆ ಹೊಂದಿಕೊಂಡಿರುವ ಕಾಂಟಿನೆಂಟಲ್ ಟೆಕ್ನಿಕಲ್ ಸೆಂಟರ್ ನಲ್ಲಿ ಈ ಕೇಂದ್ರ ಕೆಲಸ ಮಾಡಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೆಂಗಳೂರು ಸೇರಿದಂತೆ ನಮ್ಮ ನಗರಗಳಲ್ಲಿ ಇನ್ನು ಕೆಲವೇ ವರ್ಷಗಳವರೆಗೆ ಸಂಚಾರ ವ್ಯವಸ್ಥೆ ಬದಲಾಗಲಿದ್ದು, ಪರಿಸರಸ್ನೇಹಿ ವಾಹನಗಳು ರಸ್ತೆಗಿಳಿಯಲಿವೆ. ಈ ಪರಿವರ್ತನೆಯಲ್ಲಿ ಕಾಂಟಿನೆಂಟಲ್ ಕಂಪನಿಯು ನಿರ್ಣಾಯಕ ಪಾತ್ರ ವಹಿಸಲಿದೆ ಎಂದರು.
ಕಾಂಟಿನೆಂಟಲ್ ಕಂಪನಿಯ ಈ ಸಂಶೋಧನಾ ಕೇಂದ್ರದಲ್ಲಿ 6,500 ಸಂಶೋಧಕರು ಮತ್ತು ತಂತ್ರಜ್ಞಾನ ಪರಿಣತರಿಗೆ ಅವಕಾಶವಿದೆ. ನಗರದಲ್ಲಿ ಈಗಾಗಲೇ 450 ಕಂಪನಿಗಳ ಆರ್ ಅಂಡ್ ಡಿ ಕೇಂದ್ರಗಳಿದ್ದು, ನಮ್ಮಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯ ಪರಿಸರವಿದೆ ಎಂದರು.
ಪ್ರವರ್ಧಮಾನಕ್ಕೆ ಬರುತ್ತಿರುವ ಎಲ್ಲ ತಂತ್ರಜ್ಞಾನ ಆಧಾರಿತ ಉದ್ದಿಮೆಗಳೆಗೆ ಸಂಬಂಧ ಪಟ್ಟಂತೆಯೂ ರಾಜ್ಯದಲ್ಲಿ ಪಾರದರ್ಶಕ ಮತ್ತು ಸಮಕಾಲೀನ ನೀತಿಗಳನ್ನು ಹೊರತರಲಾಗಿದೆ. ಇಂತಹ ಉಪಕ್ರಮಗಳು ಬೇರೆ ರಾಜ್ಯಗಳಲ್ಲಿ ಇಲ್ಲ. ಕರ್ನಾಟಕವು ಹೂಡಿಕೆ ಸೇರಿದಂತೆ ಆರ್ ಅಂಡ್ ಡಿ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂದರು.
ಕಾಂಟಿನೆಂಟಲ್ ಇಂಡಿಯಾ ಕಂಪನಿಯು 2009ರಿಂದಲೂ ಬೆಂಗಳೂರಿನಲ್ಲಿ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿದೆ. ಈಗ ಅಭಿವೃದ್ಧಿ ಪಡಿಸಿರುವ ಕೇಂದ್ರವು ವಾಹನ ತಯಾರಿಕಾ ಕಂಪನಿಗಳಿಗೆ ಮಹತ್ತ್ವದ ತಾಂತ್ರಿಕ ನೆರವನ್ನು ನೀಡಲಿದೆ. ಹಾಗೆಯೇ ರಾಜ್ಯದಲ್ಲಿ ಇರುವ ಗುಣಮಟ್ಟದ ಶಿಕ್ಷಣ ಮತ್ತು ಎಂಜಿನಿಯರುಗಳು ಇದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಜರ್ಮನಿಯ ಕಾನ್ಸುಲ್ ಜನರಲ್ ಅಕಿಂ ಬರ್ಕಾರ್ಟ್, ಕಾಂಟಿನೆಂಟಲ್ ಕಂಪನಿಯ ಭಾರತ ಘಟಕದ ಅಧ್ಯಕ್ಷ ಹಾಗೂ ಸಿಇಒ ಪ್ರಶಾಂತ್ ದೊರೆಸ್ವಾಮಿ, ಕಂಪನಿಯ ತಾಂತ್ರಿಕ ಕೇಂದ್ರದ ಮುಖ್ಯಸ್ಥೆ ಲತಾ ಚೆಂಬ್ರಕಳಂ ಮುಂತಾದವರು ಉಪಸ್ಥಿತರಿದ್ದರು.
ಸೆನ್ಸರ್ ಕಾರಿನಲ್ಲಿ ಮುದ ಅನುಭವಿಸಿದ ಸಚಿವರು
ಸಚಿವ ಅಶ್ವತ್ಥ ನಾರಾಯಣ ಅವರು ಕಾಂಟಿನೆಂಟಲ್ ಇಂಡಿಯಾ ಕಂಪನಿಯ ಆವರಣದಲ್ಲಿ, ಸಂಪೂರ್ಣವಾಗಿ ಸೆನ್ಸರ್ ಆಧಾರದ ಮೇಲೆ ಕೆಲಸ ಮಾಡುವ ಕಾರಿನಲ್ಲಿ ಒಂದು ಸುತ್ತು ಹಾಕಿ, ಮುದ ಅನುಭವಿಸಿದರು.
ಸ್ಟಿಯರಿಂಗ್ ಅನ್ನು ಮುಟ್ಟಬೇಕಿಲ್ಲದ, ಎದುರುಗಡೆ ವಾಹನ ಬಂದರೆ ತಾನಾಗಿಯೇ ನಿಲ್ಲುವ, ಸಂಚಾರ ದಟ್ಟಣೆಗೆ ತಕ್ಕಂತೆ ತನ್ನ ವೇಗವನ್ನು ತಾನೇ ನಿರ್ಧರಿಸಿಕೊಳ್ಳುವ ಈ ಕಾರ್ ನಲ್ಲಿ ಅಳವಡಿಸಿರುವ ತಂತ್ರಜ್ಞಾನ ಕಂಡು ಅವರು ರೋಮಾಂಚಿತರಾದರು.
ಕಾಂಟಿನೆಂಟಲ್ ಕಂಪನಿಯ ಭಾರತದ ಅಧ್ಯಕ್ಷ ಹಾಗೂ ಸಿಇಒ ಪ್ರಶಾಂತ್ ದೊರೆಸ್ವಾಮಿ ಅವರು ಈ ವಿಶೇಷ ಕಾರನ್ನು ಚಾಲನೆ ಮಾಡಿದರು.
ಈ ಬಗ್ಗೆ ಮಾತನಾಡಿದ ಅವರು, “ಇಂತಹ ಕಾರುಗಳು ಆಧುನಿಕ ಜೀವನ ಶೈಲಿಯಲ್ಲಿ ವರದಾನವಾಗಲಿವೆ. ಇದರಿಂದ ಮಾಲಿನ್ಯ ಇತ್ಯಾದಿ ಸಮಸ್ಯೆಗಳು ಸಹ ಇಲ್ಲ. ಜತೆಗೆ ಮನುಷ್ಯನ ಸಮಯ ಇದರಿಂದ ಉಳಿಯುತ್ತದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
MUST WATCH
ಹೊಸ ಸೇರ್ಪಡೆ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
Kollywood: ಕಮಲ್ ಹಾಸನ್ ʼಥಗ್ ಲೈಫ್ʼ ಅಖಾಡಕ್ಕೆ ಬಾಲಿವುಡ್ನ ಖ್ಯಾತ ನಟರು ಎಂಟ್ರಿ?
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ