ಗಡಿನಾಡ ಕನ್ನಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ವಿದ್ಯಾರ್ಥಿ ಹೆಸರಿನಲ್ಲಿ 5 ಸಾವಿರ ರೂ. ಠೇವಣಿ

ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಹೊಸ ಯೋಜನೆ

Team Udayavani, Dec 2, 2022, 6:05 AM IST

ಗಡಿನಾಡ ಕನ್ನಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ವಿದ್ಯಾರ್ಥಿ ಹೆಸರಿನಲ್ಲಿ 5 ಸಾವಿರ ರೂ. ಠೇವಣಿ

ಬೆಂಗಳೂರು: ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಎಸೆಸೆಲ್ಸಿವರೆಗೂ ಮಕ್ಕಳನ್ನು ಹಿಡಿದಿಡಲು ವಿನೂತನ ಯೋಜನೆಗೆ ಮುಂದಾಗಿರುವ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಆ ಪ್ರದೇಶಗಳಲ್ಲಿರುವ ಕನ್ನಡ ಶಾಲೆಗಳಲ್ಲಿ ಪ್ರತಿ ಮಗುವಿನ ಹೆಸರಿನಲ್ಲಿ 5 ಸಾವಿರ ರೂ. ಠೇವಣಿ ಇಡಲು ಉದ್ದೇಶಿಸಿದೆ.

ಗಡಿ ಭಾಗದಲ್ಲಿರುವ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲಿ ಮಕ್ಕಳು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಾರೆ. ಅನಂತರ ಅಂದರೆ ಪ್ರೌಢ ಶಿಕ್ಷಣದ ಹೊತ್ತಿಗೆ ಶಾಲೆಗಳನ್ನು ಬದಲಿಸುತ್ತಾರೆ. ಅದರೊಂದಿಗೆ ಕಲಿಕಾ ಮಾಧ್ಯಮ ಕೂಡ ಬದಲಾಗುತ್ತಿದೆ. ಈ ಮೂಲಕ ಕನ್ನಡ ಕಲಿಕೆಯಿಂದ ವಿಮುಖರಾಗುತ್ತಿದ್ದಾರೆ.

ಮಕ್ಕಳನ್ನು ಕನ್ನಡ ಪ್ರೌಢಶಾಲೆಗಳತ್ತ ಆಕರ್ಷಿ ಸಲು ಪ್ರತಿ ಮಗುವಿನ ಹೆಸರಿನಲ್ಲಿ ತಲಾ 5 ಸಾವಿರ ರೂ. ಪ್ರೋತ್ಸಾಹಧನ ಠೇವಣಿ ರೂಪದಲ್ಲಿಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಕ್ಕಳು ಮತ್ತು ಆಯಾ ಶಾಲೆಯ ಹೆಸರಿನಲ್ಲಿ ಜಂಟಿ ಖಾತೆಯಲ್ಲಿ ಠೇವಣಿ ಇಡಲಾಗುತ್ತದೆ. ಅದರಿಂದ ಬರುವ ಬಡ್ಡಿ ಹಣವನ್ನು ಮಗುವಿನ ಶೈಕ್ಷಣಿಕ ಸೌಲಭ್ಯಗಳಿಗೆ ವಿನಿಯೋಗಿಸಲಾಗುವುದು. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಕಾಸರಗೋಡು, ಜತ್ತ, ಅರಕಲಕೋಟೆ, ದಕ್ಷಿಣ ಸೊಲ್ಲಾಪುರ ತಾಲೂಕಿನ ಒಟ್ಟು ಐದು ಸಾವಿರ ಮಕ್ಕಳ ಹೆಸರಿನಲ್ಲಿ ಠೇವಣಿ ಇಡಲಾಗುತ್ತಿದ್ದು, 2.5 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ ಎಂದರು.

ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ವಸತಿ ಶಾಲೆಗಳನ್ನು ತೆರೆಯಲು ಉದ್ದೇಶಿಸಿದ್ದು, ಮೊದಲ ಹಂತದಲ್ಲಿ ಖಾನಾಪುರದಲ್ಲಿ ವಸತಿ ಶಾಲೆ ತೆರೆಯಲು ಯೋಜಿಸಲಾಗಿದೆ ಎಂದು ಹೇಳಿದರು.

ಆರ್ಥಿಕ, ಸಾಮಾಜಿಕ ಸಮೀಕ್ಷೆ
ಗಡಿ ಭಾಗದ ಹಳ್ಳಿಗಳ ಕನ್ನಡಿಗರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ಮಾಡಿ ವರದಿಯನ್ನು ಸರಕಾರಕ್ಕೆ ಸಲ್ಲಿಸಲು ನಿರ್ಧರಿಸಿದ್ದು, ಇದಕ್ಕಾಗಿ ಬೆಳಗಾವಿಯ ರಾಣಿ ಚನ್ನಮ್ಮ ವಿವಿ, ಧಾರವಾಡದ ಕರ್ನಾಟಕ ವಿವಿ, ಮೈಸೂರು ವಿವಿ, ಹಂಪಿಯ ಕನ್ನಡ ವಿವಿ, ಮಂಗಳೂರು ವಿವಿ, ಕಲಬುರಗಿ ಕನ್ನಡ ವಿವಿ, ಬೆಂಗಳೂರು ಮತ್ತು ತುಮಕೂರು ವಿವಿಗಳು ಪ್ರಾಧಿಕಾರದೊಂದಿಗೆ ಕೈಜೋಡಿಸಿವೆ ಎಂದರು.

ಕನ್ನಡ ಭವನ
ಕಾಸರಗೋಡು, ಗೋವಾ ಮತ್ತು ಅಕ್ಕಲಕೋಟೆಯಲ್ಲಿ ಕನ್ನಡ ಭವನ ನಿರ್ಮಾಣದ ಚಿಂತನೆ ಇದೆ. ಮುಖ್ಯಮಂತ್ರಿಗಳು 5 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದಾರೆ. ಕಾಸರಗೋಡಿನಲ್ಲಿ ಕಯ್ನಾರ ಕಿಞ್ಞಣ್ಣ ರೈ ಕುಟುಂಬಸ್ಥರು ಕನ್ನಡ ಭವನಕ್ಕೆ ಉಚಿತವಾಗಿ ಜಮೀನು ನೀಡಲು ಮುಂದೆ ಬಂದಿದ್ದಾರೆ. ಅಕ್ಕಲಕೋಟೆಯಲ್ಲಿ ಕನ್ನಡ ಸಂಘದವರು ಜಾಗ ನೀಡಲಿದ್ದಾರೆ. ಗೋವಾದಲ್ಲಿ ಜಾಗದ ಹುಡುಕಾಟ ನಡೆದಿದ್ದು, ಅಲ್ಲಿನ ಮುಖ್ಯಮಂತ್ರಿಗಳ ಜತೆ ಚರ್ಚೆಯೂ ನಡೆದಿದೆ ಎಂದರು.

ಮಹಾರಾಷ್ಟ್ರದ ಸಂಚು ವಿಫ‌ಲ
ಮಹಾರಾಷ್ಟ್ರದ ಗಡಿ ಭಾಗದಲ್ಲಿ ಮರಾಠಿ ಶಾಲೆಗಳಿಗೆ ಕನ್ನಡ ಶಾಲೆ ಮಕ್ಕಳನ್ನು ಹೆಚ್ಚು ಸೇರಿಸಲು ಕುಮ್ಮಕ್ಕು ಕೊಡುವ ಸಂಚು ನಡೆದಿತ್ತು. ಅದನ್ನು ಸ್ಥಳೀಯ ಕನ್ನಡ ಕ್ರಿಯಾಸಮಿತಿಗಳ ನೆರವಿನಲ್ಲಿ ವಿಫ‌ಲಗೊಳಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸಿ. ಸೋಮಶೇಖರ್‌ ತಿಳಿಸಿದರು. ಎಂಇಎಸ್‌ ಸಂಘಟನೆಗಳು ಸಹಿತ ಮಹಾರಾಷ್ಟ್ರದ ನಿಯೋಗಗಳು ರಾಜ್ಯದ ಗಡಿಯಲ್ಲಿ ಬಂದು, ಮರಾಠಿ ಶಾಲೆಗಳನ್ನು ಆರಂಭಿಸಿದರೆ, ಹೆಚ್ಚು ಅನುದಾನ ನೀಡುವ ಆಮಿಷವೊಡ್ಡುತ್ತಿದ್ದವು. ಹೆಚ್ಚು ಸವಲತ್ತು ನೀಡುವುದಾಗಿ ಹೇಳಿದ್ದವು. ಇದರ ಸುಳಿವು ಸಿಕ್ಕ ತತ್‌ಕ್ಷಣ ವಿರೋಧಿಸಿ ಮಹಾರಾಷ್ಟ್ರದ ಸಂಚನ್ನು ವಿಫ‌ಲಗೊಳಿಸಲಾಗಿದೆ ಎಂದರು.

ಮೊದಲ ಹಂತದಲ್ಲಿ 5 ಸಾವಿರ ವಿದ್ಯಾರ್ಥಿಗಳು
ಕಾಸರಗೋಡು, ಜತ್ತ, ಅರಕಲಕೋಟೆ, ದಕ್ಷಿಣ ಸೊಲ್ಲಾಪುರ ತಾಲೂಕಿನ ಒಟ್ಟು ಐದು ಸಾವಿರ ವಿದ್ಯಾರ್ಥಿಗಳ ಹೆಸರಿನಲ್ಲಿ ಠೇವಣಿ ಇಡಲಾಗುತ್ತಿದ್ದು, ಇದಕ್ಕಾಗಿ ಎರಡೂವರೆ ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.